ಸರಣಿ ರಜೆ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು

ಸುಬ್ರಹ್ಮಣ್ಯ ಮೇ 03 : ನಿರಂತರವಾಗಿ ರಜೆಯ ಕಾರಣದಿಂದ ಹಾಗೂ ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು(ಏ.03) ರಾಜ್ಯ ಹಾಗೂ ಹೊರರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಭಕ್ತರ ಸುಗಮಾ ದರ್ಶನಕ್ಕಾಗಿ ಶ್ರೀ...

ಜೇ.ಸಿ.ಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ – “ಜೇ.ಸಿ.ಐ ಸುಳ್ಯ ಪಯಸ್ವಿನಿ ವತಿಯಿಂದ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸಿದ್ದು ಶ್ಲಾಘನೀಯ” : ವಸಂತ ಶೆಟ್ಟಿ ಬೆಳ್ಳಾರೆ

ಜೇ.ಸಿ.ಐ ಸುಳ್ಯ ಪಯಸ್ವಿನಿ ವತಿಯಿಂದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಮೇ.2ರಂದು ಸಂಚಯ ನಿವಾಸ ಚೂಂತಾರು ಇಲ್ಲಿ ಆಚರಿಸಲಾಯಿತು. ಜೇ.ಸಿ.ಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇ.ಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಕಾರ್ಮಿಕ ದಿನದ ಪ್ರಯುಕ್ತ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಲೆಕ್ಟ್ರೀಷಿಯನ್ ಹರಿಶ್ಚಂದ್ರ ತಂಟೆಪ್ಪಾಡಿ ಅವರನ್ನು ಸನ್ಮಾನಿಸಿ...
Ad Widget

ಗುತ್ತಿಗಾರು : ಶ್ರೀ.ಕ್ಷೇ‌.ಧ ವಿಪತ್ತು ನಿರ್ವಹಣಾ ತಂಡದಿಂದ ಅಶಕ್ತ ಮಹಿಳೆಯ ಮನೆ ದುರಸ್ತಿ

ಗುತ್ತಿಗಾರು ಗ್ರಾಮದ ಮೊಗ್ರ ಮೂವದಲ್ಲಿ ಬಡತನದಲ್ಲಿರುವ ಮಹಿಳೆ ಶ್ರೀಮತಿ ಜಯಂತಿಯವರ ಮನೆಯ ಮಾಡು ಕುಸಿದು ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿ ನೆರವಿಗೆ ಧಾವಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಊರವರು ದುರಸ್ತಿಗೊಳಿಸಿದರು.ಗುತ್ತಿಗಾರು ಪಿ.ಎ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಜಯಪ್ರಕಾಶ್ ಮೊಗ್ರ ರವರ ಮಾರ್ಗದರ್ಶನದಲ್ಲಿ ಹಳೆ ಶೀಟಿನ ಮಾಡನ್ನು ತೆಗೆದು 2 ಸಾಲು ಸಿಮೆಂಟ್...

ಗುತ್ತಿಗಾರು : ಮೇ.04 ರಿಂದ “ಚೆಸ್ ತರಬೇತಿ ಕಾರ್ಯಾಗಾರ”

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಹಾಗೂ ಅರಿವು ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಮೇ.04 ರಿಂದ ಮೇ.10 ರವರೆಗೆ ಗುತ್ತಿಗಾರಿನ ಗ್ರಾಮ ಪಂಚಾಯತ್ ಪ.ವರ್ಗದ ಸಭಾಭವನದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ 4 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ಚೆಸ್ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಹೆಚ್ಚಿನ...

ಮುಳ್ಳುಬಾಗಿಲು : ಶ್ರೀ ಶಿರಾಡಿ ದೈವದ ನೇಮೋತ್ಸವ ಸಂಪನ್ನ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ದೈವದ ನೇಮೋತ್ಸವವು ಮೇ.01 ಹಾಗೂ 02 ರಂದು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯಿತು.ಮೇ.01 ರಂದು ಭಂಡಾರ ಬಂದು ಮೇ.02 ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನಂತರ ಸಂಜೆ ಶ್ರೀ ಗುಳಿಗ ದೈವದ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರದಿಂದ ಶನಿವಾರದವರೆಗಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಯ ಒಂದು ಸಮಗ್ರ ನೋಟ ; ಈ ವಾರ(ಏ.27 ರಿಂದ ಮೇ.02) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಯಲ್ಲಿ ಕಂಡುಬಂದ ಏರಿಳಿತಗಳೇನು…!? ಎಂಬುವುದನ್ನು ವಿವರವಾಗಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ "ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)" ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ ಅಮರ ಸುಳ್ಯ ಸುದ್ದಿ ವಾರಪತ್ರಿಕೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದು, ಈ ವಾರ ಏ.27 ಸೋಮವಾರದಿಂದ ಮೇ.02 ಶನಿವಾರದವರೆಗೆ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ...

ಬಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ಧನಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದ ಶಾಸ್ತಾವು ಯುವಕ ಮಂಡಲ ರೆಂಜಾಳ

ಕುಕ್ಕೆ ಸುಬ್ರಹ್ಮಣ್ಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿರುವ ಶ್ರೀಮತಿ ಹರ್ಷಿತಾರವರ ಮಗಳು ಏನೆಕಲ್ಲು ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು.ತಶ್ಮಿತ ಇವಳು Soliocice ಕಾಯಿಲೆಗೆ ತುತ್ತಾಗಿದ್ದು, ಇವಳ ಒಂದು ಬದಿ ಬೆನ್ನು ಬಾಗಿ ಇನ್ನೊಂದು ಬದಿ ಉಬ್ಬಿರುತ್ತದೆ. ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯ ವೈದ್ಯರು ಸರ್ಜರಿ ಮಾಡಬೇಕು, 5ಲಕ್ಷದಿಂದ 6ಲಕ್ಷ ಖರ್ಚಾಗಬಹುದು ಎಂದು ಹೇಳಿರುತ್ತಾರೆ. ಅಲ್ಲದೆ...

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಡಾ.ರೇಣುಕಾ ಪ್ರಸಾದ್ ರಿಂದ ಧನಸಹಾಯ ಹಸ್ತಾಂತರ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಎ.ಒ.ಎಲ್.ಇ "ಬಿ" ಕಮಿಟಿಯ ಚೆರ್ಮೇನ್ ಡಾ. ರೇಣುಕಾ ಪ್ರಸಾದ್ ಕುರುಂಜಿ ಅವರು ನೀಡಿದ ಧನಸಹಾಯದ ಚೆಕ್ ನ್ನು ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆಯವರು ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡರಿಗೆ ಮೇ.02 ರಂದು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಎ.ಒ.ಎಲ್.ಇ ಬಿ ಕಮಿಟಿಯ...

ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತಿ ಅಂಗವಾಗಿ ಭವ್ಯ ವ್ಯಾಸ ಪೂಜೆ ಹಾಗೂ ಮಹಾರಥೋತ್ಸವ

ಸುಬ್ರಹ್ಮಣ್ಯ: ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನರಸಿಂಹ ಜಯಂತಿ ಅಂಗವಾಗಿ ಮೇ.01 ರಂದು ಸುಬ್ರಹ್ಮಣ್ಯ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಪೂರ್ವಾಹ್ನ ವ್ಯಾಸ ಪೂರ್ಣಿಮ ಹಾಗೂ ವ್ಯಾಸ ಪೂಜೆ ಕಾರ್ಯಕ್ರಮಗಳು ವಿಧಿವಿಧಾನಗಳಿಂದ ನಡೆಯಿತು. ಬಳಿಕ ಮಹಾರಥೋತ್ಸವ ಭಕ್ತರ ನಡುವೆ ಭವ್ಯವಾಗಿ...

ಕಾಣಿಯೂರು : ನ್ಯಾಯವಾದಿ ನಿಶಾಂತ್ ರವರ ಕಛೇರಿ ಶುಭಾರಂಭ

ನ್ಯಾಯವಾದಿ ನಿಶಾಂತ್ ರವರ ಕಛೇರಿಯು ಎ.30ರಂದು ಕಾಣಿಯೂರಿನ ಎಂ.ಟಿ.ಸಿ ಕಾಂಪ್ಲೆಕ್ಸ್ ನ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಹಿರಿಯ ನ್ಯಾಯವಾದಿಗಳು ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ್ ಮಳಿ, ಹಿರಿಯ ನ್ಯಾಯವಾದಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ...
Loading posts...

All posts loaded

No more posts

error: Content is protected !!