ಕುಕ್ಕೆ ಶುದ್ಧ ಏಕಾದಶಿಯಂದು  ಸ್ನಾನಘಟ್ಟದ ಬಳಿ ತೀರ್ಥ ಸ್ನಾನಕ್ಕಾಗಿ ಭಕ್ತರ ದಂಡು

ಸುಬ್ರಹ್ಮಣ್ಯ ನವಂಬರ್ 02 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶುದ್ಧ ಏಕಾದಶಿ ಆದರೂ ದೂರ ದೂರಗಳಿಂದ ಶ್ರೀ ದೇವರ ದರ್ಶನಕ್ಕೆ ಬಂದ ಭಕ್ತರೇ ಅಧಿಕವಾಗಿದ್ದರು. ಬೆಳಿಗ್ಗೆ ಕುಮಾರಧಾರ ಸ್ನಾನಘಟ್ಟದ ಬಳಿ ಬೆಳಗ್ಗಿನ ಜಾವ ತೀರ್ಥ ಸ್ಥಾನ ಮಾಡಲು ಭಕ್ತರ ದಂಡೆ ಇತ್ತು. ಶ್ರೀ  ದೇವಳದ ವತಿಯಿಂದ ತೀರ್ಥ ಸ್ಥಾನ ಮಾಡುವ ಮಹಿಳೆಯರಿಗೆ ಶೌಚಾಲಯದ...

ಕುಕ್ಕೆ ಸುಬ್ರಹ್ಮಣ್ಯ : ಬೆಳ್ಳಿರಥ ಸಮರ್ಪಣೆ – ಒಕ್ಕಲಿಗ ಗೌಡ ಸಂಘದ ವತಿಯಿಂದ ಪೂರ್ವಭಾವಿ ಸಭೆ

ಸುಬ್ರಹ್ಮಣ್ಯ ನ.02 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಳ್ಯದ ಕುರುಂಜಿ ಡಾ.ರೇಣುಕಾ ಪ್ರಸಾದ್ ಕುಟುಂಬದವರು ನೀಡಲಿರುವ ಬೆಳ್ಳಿ ರಥವು 05ರಂದು ಶ್ರೀ ಕ್ಷೇತ್ರಕ್ಕೆ ಆಗಮಿಸಲಿದ್ದು, ಅದನ್ನು ಸ್ವಾಗತಿಸಲು ಸುಬ್ರಹ್ಮಣ್ಯ ಒಕ್ಕಲಿಗ ಗೌಡ ಗ್ರಾಮ ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 01 ರಂದು ನಡೆದ ಸಭೆಯ ಅಧ್ಯಕ್ಷತೆಯನ್ನು...
Ad Widget

“ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯಯಿದೆ” : ಡಾ. ಶಿವಕುಮಾರ ಹೊಸೊಳಿಕೆ – ಕುಕ್ಕೆ ಸ್ಥಾನಘಟ್ಟದ ಬಳಿ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ನವಂಬರ್ 02 : “ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ನಾಗರಾಧನೆಯಲ್ಲಿ ಇಡೀ ಪ್ರಪಂಚದಲ್ಲಿ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಸಂತೃಪ್ತಿ ಹೊಂದುತ್ತಾರೆ. ವಿವಿಧ ರೀತಿಯ ಅನಾರೋಗ್ಯ ಕಾಯಿಲೆಗಳು, ಸಂತಾನ ಭಾಗ್ಯ, ಮದುವೆ, ಕೃಷಿ, ವ್ಯಾಪಾರದಲ್ಲಿ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಾ ಬಂದವರು ಇಲ್ಲಿ...

ಕುಕ್ಕೆ ಸುಬ್ರಹ್ಮಣ್ಯ : ಬೀದಿ ದೀಪಗಳ ರಿಪೇರಿ ಪ್ರಗತಿಯಲ್ಲಿ

ಸುಬ್ರಹ್ಮಣ್ಯ ನ.02 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ಇದೇ ನವಂಬರ್ 14ರಿಂದ ಮೂಲ ಮೃತ್ತಿಗೆ  ಪ್ರಸಾದ ತೆಗೆಯುವುದರೊಂದಿಗೆ ಆರಂಭವಾಗಿ ಮರುದಿನ ನವೆಂಬರ್ 15ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿರುವುದು. ಜಾತ್ರೋತ್ಸವಕ್ಕೆ ಬಹಳಷ್ಟು ಕೆಲಸ ಕಾರ್ಯಗಳು ಶ್ರೀ ದೇವಳದ ವತಿಯಿಂದ ಆಗಬೇಕಾಗಿದ್ದು, ಇದೀಗ ಕುಮಾರದಿಂದ ರಥಬೀದಿಯಾಗಿ ಶ್ರೀ...

ಸುಳ್ಯ ಎ.ವಿ.ವಿ.ಎಸ್ ಶಾಖೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸುಳ್ಯ ಶಾಖೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ಸುಳ್ಯ ಶಾಖೆಯ ಉಪಾಧ್ಯಕ್ಷರಾದ ಚೋಮ ಗಾಂಧಿನಗರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು  ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸುಳ್ಯ ಶಾಖೆ ಸ್ಥಾಪಕರಾದ ಮನೋಹರ್ ಪಿ.ಬಿ.ಪಲ್ಲತ್ತಡ್ಕರವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್  ಭಾವಚಿತ್ರಕ್ಕೆ ಕ್ಯಾಂಡಲ್ ಬೆಳಗಿಸಿ ಉದ್ಘಾಟಿಸಿದರು. ಮಾಲಾರ್ಪಣೆಯನ್ನು ಜಾಲ್ಸೂರು ಗ್ರಾಮ...

“ಕನ್ನಡ ರಾಜ್ಯೋತ್ಸವದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ಕಾಯುವಂತೆ ಮಾಡಿದ ಸುಳ್ಯ ಶಾಸಕರ ವರ್ತನೆ ಖಂಡನೀಯ” : ಎನ್.ಎಸ್.ಯು.ಐ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ  ಕೊಡಪಾಲ

“ಕನ್ನಡ ರಾಜ್ಯೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಆಚರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಸುಳ್ಯದ ಶಾಸಕರಾದ ಕು.ಭಾಗೀರಥಿ ಮುರುಳ್ಯರವರು ಇಂದು ಸಮಯಕ್ಕೆ ಸರಿಯಾಗಿ ಬಾರದೆ, ಮಕ್ಕಳನ್ನು ಅಧಿಕಾರಿಗಳನ್ನು ಕಾಯಿಸುವುದರ ಮೂಲಕ ಜವಾಬ್ದಾರಿ ಇಲ್ಲದವರಂತೆ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನೇರವೇರಿಸದೇ ತಡವಾಗಿ ಕಾರ್ಯಕ್ರಮಕ್ಕೆ ಬರುವುದರ ಮೂಲಕ ಮಕ್ಕಳನ್ನು ಬಿಸಿಲಲ್ಲಿ ಕಾಯಿಸಿದ್ದಾರೆ. ಇದು ಖಂಡನೀಯ. ಇದೇ...

ನ.03ರಿಂದ ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ನೆಟ್‌ಬಾಲ್ ಸ್ಪರ್ಧೆ

ಸುಬ್ರಹ್ಮಣ್ಯ : “ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನೆಟ್‌ಬಾಲ್ ಸ್ಪರ್ಧೆ 2025-26 ನ.03ರಿಂದ ಸುಬ್ರಹ್ಮಣ್ಯದ ಎಸ್‌.ಎಸ್‌.ಪಿ.ಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ತಿಳಿಸಿದರು. ಅವರು ಕಾಲೇಜಿನಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. “ನ.03ರಂದು...

ದೇವಚಳ್ಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ರಂಗಮಂದಿರ ನಿರ್ಮಾಣಕ್ಕೆ ಅನುದಾನ – ಮುಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಇವರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಲ್ಲಿ ರಂಗ ಮಂದಿರದ ಕೆಲಸಕ್ಕೆ ಯೋಜನೆಯಿಂದ ಮಂಜೂರಾದ ರೂಪಾಯಿ 30,000 ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಮಾಧವ ಗೌಡ ರವರು ಹಸ್ತಾಂತರಿಸಿದರುಈ ಸಂದರ್ಭದಲ್ಲಿ ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಬಾನು ಪ್ರಕಾಶ್ ತಳೂರು, ವಲಯ ಮೇಲ್ವಿಚಾರಕರಾದ...

ಬೆಳ್ಳಾರೆಯಲ್ಲಿ ಪಂಚ ಸಪ್ತತಿ 2025 ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಆ.31 ರಂದು ಬೆಳ್ಳಾರೆ ಸುಳ್ಯ ಮುಖ್ಯ ರಸ್ತೆ ಯಲ್ಲಿ  ನಡೆಸಲಾಯಿತು.

ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮದ ಹಿನ್ನೆಲೆ ಪಶು ಆಸ್ಪತ್ರೆ ಸುಳ್ಯದಲ್ಲಿ ಚಿಕಿತ್ಸಾ ಸಮಯದ ಬದಲಾವಣೆ

ಸುಳ್ಯ ತಾಲೂಕಿನಾದ್ಯಂತ ನ.03  ರಿಂದ ಡಿ.2. ರವರೆಗೆ ಸುಮಾರು 30 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ  ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ, ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ ಸೇವೆಯನ್ನು ಮಧ್ಯಾಹ್ನ 02.00 ರಿಂದ...
Loading posts...

All posts loaded

No more posts

error: Content is protected !!