- Thursday
- June 18th, 2026
ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನ ಅಂಗವಾಗಿ ಮಕ್ಕಳ ದಿನಾಚರಣೆ, ಎಥ್ನಿಕ್ ಡೇ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ - Glimpses 2025 ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ನೂತನ ಸಂಚಾಲಕರಾದ ಎ.ಸಿ. ವಸಂತ್ ನೆರವೇರಿಸಿ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ...
ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು. ಈ ಸವಿನೆನಪಿಗಾಗಿ ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದರಿಂದ ಆಶ್ರಮದ 20 ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ...
ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ ನಮ್ಮ ನಡಿಗೆ ಸ್ವಚ್ಛತೆಯಡೆಗೆ ಸ್ವಚ್ಛತಾ ಕಾರ್ಯಕ್ರಮ ನ. 12 ರಂದು ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಯಿತು.
ದಶಕಗಳ ಬೇಡಿಕೆಯಾದ, ಮಡಿಕೇರಿ - ಗಾಳಿಬೀಡು - ಕಡಮಕಲ್ - ಕುಕ್ಕೆ ಸುಬ್ರಹ್ಮಣ್ಯ ರಸ್ತೆಯ ಬಗ್ಗೆ ಮತ್ತು ಕಡಮಕಲ್ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಹಿನ್ನೆಲೆಯಲ್ಲಿಸಮಾಲೋಚನಾ ಸಭೆಯನ್ನು ಮಡಿಕೇರಿ ಶಾಸಕ ಮಂತರ್ ಗೌಡ ನ.14ರಂದು ಸಂಜೆ ಕಡಮಕಲ್ ನಲ್ಲಿ ನಡೆಸಿದರು.ನೂರಾರು ಸಂಖ್ಯೆಯಲ್ಲಿ ಸೇರಿದ ಸ್ಥಳೀಯರು ಮತ್ತುಗುತ್ತಿಗಾರು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು ಗ್ರಾಮದ ನಾಯಕರು, ಗ್ರಾಮಸ್ಥರು ಮಡಿಕೇರಿ-ಗಾಳಿಬೀಡು-ಕಡಮಕಲ್-ಕುಕ್ಕೆ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದಿಂದ ನಗರದ ಕೊಡಿಯಾಲಬೈಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಪರಿಸರ ಜಾಗೃತಿಗಾಗಿ "ನಮ್ಮ ಶಾಲೆ- ನಮ್ಮ ಪರಿಸರ" ಮಕ್ಕಳ ಚಿತ್ರಕಲಾ ಸ್ಪರ್ಧೆ ಮೂಲಕ ಆಚರಿಸಲಾಯಿತು. ಶಾಲೆಯ ಒಂದನೇ ತರಗತಿಯಿಂದ ಐದನೇ ತರಗತಿ ಯ 24 ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಮಕ್ಕಳು ತಮ್ಮ ಕುಂಚ ಮತ್ತು...
ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಹರಲಾಲ್ ನೆಹರು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ದೀಪ ಬೆಳಗಿಸಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...
ಸುಬ್ರಹ್ಮಣ್ಯ ನ.14 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸುಬ್ರಹ್ಮಣ್ಯ ದೇವಳದ ಪರಿಸರ, ರಥಬೀದಿ, ಸ್ನಾನಘಟ್ಟ, ಮುಖ್ಯರಸ್ತೆ, ಇಂಜಾಡಿ ಪ್ರದೇಶ, ನೂಚಿಲ ಪ್ರದೇಶ, ಸವಾರಿ ಮಂಟಪ, ದೇವರಗದ್ದೆ, ಆದಿ ಸುಬ್ರಹ್ಮಣ್ಯ, ಬಿಲದ್ವಾರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಸ್ವಚ್ಛತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ...
ಮಡಿಕೇರಿ-ಗಾಳಿಬೀಡು-ಕಡಮಕಲ್ಲು-ಕುಕ್ಕೆ ಸುಬ್ರಹ್ಮಣ್ಯ ರಸ್ತೆಗೆ 3.50 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ ನ.14 ರಂದು ಸಂಜೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಥರ್ ಗೌಡ ಕಡಮಕಲ್ಲಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಆದಷ್ಟು ಬೇಗ ರಸ್ತೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಸುಳ್ಯ ಮೋಡೆಲ್ ಎಜುಕೇಶನ್ ಟ್ರಸ್ಟ್ ಇದರ ಆಶ್ರಯದಲ್ಲಿರುವ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಯಲ್ಲಿ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹಾರ್ ಲಾಲ್ ನೆಹರೂ ರವರ ಜನ್ಮ ದಿನಾಚರಣೆ ಪ್ರಯುಕ್ತ ಮಕ್ಕಳ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಯಿತು ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಹಾಜಿ ಕೆ. ಎಂ ಅಬ್ದುಲ್...
“ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎನ್.ಡಿ.ಎ ಒಕ್ಕೂಟದ ಅಲೆಗೆ ಕೊಚ್ಚಿಹೊಗಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ ಪ್ರಚಂಡ ಬಹುಮತವನ್ನು ಪಡೆದು ಅಧಿಕಾರಕ್ಕೇರುತ್ತಿರುವುದು ಖುಷಿಯ ವಿಚಾರ. ಭ್ರಷ್ಟಾಚಾರ ರಹಿತ, ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಳಿಂದ ಜನಮನ್ನಣೆ ಗಳಿಸಿರುವ ಬಿಜೆಪಿ ದೇಶದ ಮೂಲೆ ಮೂಲೆಯಲ್ಲಿ ಭದ್ರವಾಗಿ ನೆಲೆಯೂರುತ್ತಿದೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ...
Loading posts...
All posts loaded
No more posts
