ಸುಳ್ಯ ಎ.ವಿ.ವಿ.ಎಸ್ ಶಾಖೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸುಳ್ಯ ಶಾಖೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ಸುಳ್ಯ ಶಾಖೆಯ ಉಪಾಧ್ಯಕ್ಷರಾದ ಚೋಮ ಗಾಂಧಿನಗರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು  ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸುಳ್ಯ ಶಾಖೆ ಸ್ಥಾಪಕರಾದ ಮನೋಹರ್ ಪಿ.ಬಿ.ಪಲ್ಲತ್ತಡ್ಕರವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್  ಭಾವಚಿತ್ರಕ್ಕೆ ಕ್ಯಾಂಡಲ್ ಬೆಳಗಿಸಿ ಉದ್ಘಾಟಿಸಿದರು. ಮಾಲಾರ್ಪಣೆಯನ್ನು ಜಾಲ್ಸೂರು ಗ್ರಾಮ...

“ಕನ್ನಡ ರಾಜ್ಯೋತ್ಸವದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ಕಾಯುವಂತೆ ಮಾಡಿದ ಸುಳ್ಯ ಶಾಸಕರ ವರ್ತನೆ ಖಂಡನೀಯ” : ಎನ್.ಎಸ್.ಯು.ಐ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ  ಕೊಡಪಾಲ

“ಕನ್ನಡ ರಾಜ್ಯೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಆಚರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಸುಳ್ಯದ ಶಾಸಕರಾದ ಕು.ಭಾಗೀರಥಿ ಮುರುಳ್ಯರವರು ಇಂದು ಸಮಯಕ್ಕೆ ಸರಿಯಾಗಿ ಬಾರದೆ, ಮಕ್ಕಳನ್ನು ಅಧಿಕಾರಿಗಳನ್ನು ಕಾಯಿಸುವುದರ ಮೂಲಕ ಜವಾಬ್ದಾರಿ ಇಲ್ಲದವರಂತೆ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನೇರವೇರಿಸದೇ ತಡವಾಗಿ ಕಾರ್ಯಕ್ರಮಕ್ಕೆ ಬರುವುದರ ಮೂಲಕ ಮಕ್ಕಳನ್ನು ಬಿಸಿಲಲ್ಲಿ ಕಾಯಿಸಿದ್ದಾರೆ. ಇದು ಖಂಡನೀಯ. ಇದೇ...
Ad Widget

ನ.03ರಿಂದ ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ನೆಟ್‌ಬಾಲ್ ಸ್ಪರ್ಧೆ

ಸುಬ್ರಹ್ಮಣ್ಯ : “ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನೆಟ್‌ಬಾಲ್ ಸ್ಪರ್ಧೆ 2025-26 ನ.03ರಿಂದ ಸುಬ್ರಹ್ಮಣ್ಯದ ಎಸ್‌.ಎಸ್‌.ಪಿ.ಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ತಿಳಿಸಿದರು. ಅವರು ಕಾಲೇಜಿನಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. “ನ.03ರಂದು...

ದೇವಚಳ್ಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ರಂಗಮಂದಿರ ನಿರ್ಮಾಣಕ್ಕೆ ಅನುದಾನ – ಮುಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಇವರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಲ್ಲಿ ರಂಗ ಮಂದಿರದ ಕೆಲಸಕ್ಕೆ ಯೋಜನೆಯಿಂದ ಮಂಜೂರಾದ ರೂಪಾಯಿ 30,000 ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಮಾಧವ ಗೌಡ ರವರು ಹಸ್ತಾಂತರಿಸಿದರುಈ ಸಂದರ್ಭದಲ್ಲಿ ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಬಾನು ಪ್ರಕಾಶ್ ತಳೂರು, ವಲಯ ಮೇಲ್ವಿಚಾರಕರಾದ...

ಬೆಳ್ಳಾರೆಯಲ್ಲಿ ಪಂಚ ಸಪ್ತತಿ 2025 ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಆ.31 ರಂದು ಬೆಳ್ಳಾರೆ ಸುಳ್ಯ ಮುಖ್ಯ ರಸ್ತೆ ಯಲ್ಲಿ  ನಡೆಸಲಾಯಿತು.

ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮದ ಹಿನ್ನೆಲೆ ಪಶು ಆಸ್ಪತ್ರೆ ಸುಳ್ಯದಲ್ಲಿ ಚಿಕಿತ್ಸಾ ಸಮಯದ ಬದಲಾವಣೆ

ಸುಳ್ಯ ತಾಲೂಕಿನಾದ್ಯಂತ ನ.03  ರಿಂದ ಡಿ.2. ರವರೆಗೆ ಸುಮಾರು 30 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ  ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ, ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ ಸೇವೆಯನ್ನು ಮಧ್ಯಾಹ್ನ 02.00 ರಿಂದ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ, ಮೀನಕುಮಾರಿ ಕೆ, ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ್ ಕೆ ಉಪಸ್ಥಿತರಿದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ.ಕೆ ನಿರೂಪಿಸಿ, ಆಶಾಶ್ರೀ ಟಿ.ಪಿ ಸ್ವಾಗತಿಸಿದರು. ಯಜ್ಞ.ಎಂ ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ.ಡಿ ವಂದಿಸಿದರು. ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಬ್ರಹ್ಮಣ್ಯ ನ. 1: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಧ್ವಜಾರೋಹಣ ಮಾಡಿ "ನಮ್ಮ ಸಮೃದ್ಧ ಕರ್ನಾಟಕದಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರಗಳನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ನಾವೆಲ್ಲರೂ ಪಾಲ್ಗೊಳ್ಳೋಣ. ಕನ್ನಡದ ಕಂಪು ಎಲ್ಲೆಡೆ ಹರಡಲಿ, ಕನ್ನಡಿಗನೆಂಬ ಛಾಪು  ಎಲ್ಲೆಡೆ ಮೂಡಲಿ, ಕನ್ನಡತನ ಎಲ್ಲರಲ್ಲೂ ಪಸರಿಸಲಿ" ಎಂದು...

ಗುತ್ತಿಗಾರು : ಸ್ವಚ್ಛತಾ ಕಾರ್ಯಕ್ರಮ

"ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದ 23ನೇ ದಿನದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ವತಿಯಿಂದ ಗುತ್ತಿಗಾರು - ಪ್ರಾಥಮಿಕ ಆರೋಗ್ಯ ಕೇಂದ್ರ ರಸ್ತೆ ಬದಿ ಮತ್ತು ಪ್ರಾಥಮಿಕ ಶಾಲಾ ಆವರಣ ಸ್ವಚ್ಚಗೊಳಿಸಲಾಯಿತು.

ಕೊಲ್ಲಮೊಗ್ರ : ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಹಾಗೂ ಜನಜಾಗೃತಿ ವೇದಿಕೆ ಸುಭ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೆ.ವಿ.ಜಿ ಅನುದಾನಿತ ಪ್ರೌಢ ಶಾಲೆಯ ಶಿಕ್ಷಕರಾದ ಶ್ರೀಮತಿ ಸಂಧ್ಯಾರವರ ಅಧ್ಯಕ್ಷತೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಕೆ.ವಿ.ಜಿ ಅನುದಾನಿತ ಪ್ರೌಢ...
Loading posts...

All posts loaded

No more posts

error: Content is protected !!