- Sunday
- September 20th, 2026
ಸುಳ್ಯದ ಮೆಸ್ಕಾಂ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಎ.ಇ.ಇ ಹರೀಶ್ ನಾಯ್ಕ್, ಜೆ.ಇ ಉಷಾ, ಜೆ.ಇ ದಿವ್ಯ, ಮೇಲ್ವಿಚಾರಕರಾದ ಧರ್ಮಪಾಲ ಕೆ, ಜಯಪ್ರಕಾಶ್ ಕೆ.ರಫೀಕ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಆರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ಉಳುವಾರು ಅಡ್ತಲೆ ಪುನರಾಯ್ಕೆಗೊಂಡಿದ್ದಾರೆ. ಹಾಗೂ ನಿರ್ದೇಶಕರಾಗಿ ಆರಂತೋಡು ಗ್ರಾಮದಿಂದ ಯಶೋಧರ ಪಿಂಗಾರ ತೋಟ, ಯು.ಎಂ ಕಿಶೋರ್ ಕುಮಾರ್ ಉಳುವಾರು, ಮೋಹನ್ ಕುಮಾರ್ ಪಾರೆಮಜಲು ಹಾಗೂ ತೊಡಿಕಾನ ಗ್ರಾಮದಿಂದ ಕೇಶವ ಕೊಳಲುಮೂಲೆ, ವೆಂಕಟ್ರಮಣ ಪೆತ್ತಾಜೆ ಮತ್ತು ಕಮಲಾಕ್ಷ ಕಾಟೂರು(ಪಡ್ಪು) ಆಯ್ಕೆಯಾಗಿದ್ದಾರೆ.
ಕರ್ನಾಟಕ ಬರಿಯ ನಾಡಲ್ಲ. ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ಅದು ನಮ್ಮಂತರಂಗದ ಮಾತು. ಇಂದು ನವೆಂಬರ್ ೧ ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡದ ದಿನ .ಕರ್ನಾಟಕ ರಚನೆಯ ದಿನ. 1947 ಆಗಸ್ಟ್ 15ರಂದು ಭಾರತ ಬ್ರಿಟಿಷರ ಕಪಿಮುಷ್ಟಿಯಿಂದ ಮುಕ್ತಿ ಹೊಂದಿತು.1950ರಲ್ಲಿ ಭಾರತವು ಗಣರಾಜ್ಯವಾಯಿತು. ಇದಾದ ನಂತರ ಪ್ರಾಂತ್ಯಗಳು ಭಾಷೆಗಳ ಆಧಾರದ ಮೇಲೆ ರಾಜ್ಯಗಳ...
"ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ" ಎಂದು ಸುಳ್ಯ ಎನ್.ಎಂ.ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ...
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಶಿಕ್ಷಕರು / ನಿವೃತ್ತ ಶಿಕ್ಷಕರು, ವಿವಿಧ ಇಲಾಖೆಯ...
ಸುಳ್ಯದ 108 ಆಂಬುಲೆನ್ಸ್ ವಾಹನವು ದುರಸ್ತಿ ಕಾರ್ಯಕ್ಕಾಗಿ ಮಂಗಳೂರಿನ ಶೋರೂಂ ಗೆ ತೆರಳಿ ತಿಂಗಳಾದರೂ ಇದುವರೆಗೂ ದುರಸ್ತಿ ಕಾರ್ಯ ಆರಂಭವಾಗಿಲ್ಲ ಎಂಬ ಮಾಹಿತಿ ಬಲ್ಲಮೂಲಗಳಿಂದ ತಿಳಿದುಬಂದಿದೆ. ಸರಕಾರ ಹಾಗೂ 108 ಆಂಬುಲೆನ್ಸ್ ಗುತ್ತಿಗೆ ಪಡೆದಿರುವ ಜಿವಿಕೆ ಸಂಸ್ಥೆಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ನೆನೆಗುದಿಗೆ ಬಿದ್ದಿರುವ 108 ಆಂಬುಲೆನ್ಸ್ ದುರಸ್ತಿ ಕಾರ್ಯದಿಂದಾಗಿ ಜನಸಾಮಾನ್ಯರು, ರೋಗಿಗಳು ಪರದಾಡುವಂತಾಗಿದೆ. ಸುಳ್ಯ ಸರಕಾರಿ...
ದೇವಚಳ್ಳ ಗ್ರಾಮದ ತಳೂರು ಪೂಜಾರಿಮನೆ ಉಮಾವತಿ ಮತ್ತು ರುಕ್ಮಯ್ಯ ಗೌಡರ ಪುತ್ರ ವರ್ಷಿತ್ ರವರ ವಿವಾಹವು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಕುತ್ಯಾಳ ಮನೆ ಡೀಲಾಕ್ಷಿ ಮತ್ತು ಜನಾರ್ಧನ ಗೌಡರ ಪುತ್ರಿ ಹೇಮಶ್ರೀ ಯವರೊಂದಿಗೆ ಅ.30 ರಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ, ಅಖಿಲ ಕರ್ನಾಟಕ ತಾಲೂಕು ಜನಜಾಗೃತಿ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ದ ಮಾಹಿತಿ ಕಾರ್ಯಕ್ರಮ ಅ.30 ರಂದು ನಡೆಯಿತುಈ ಕಾಯ೯ಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ದೀಪಪ್ರಜ್ವಲನೆ ಮಾಡಿ "ಶಾಲಾ ಮಕ್ಕಳು...
ಸಕಲೇಶಪುರ ತಾಲೂಕಿನ ವನಂಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಹೊರಟಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಬಿಸಿಲೆ ಘಾಟ್ ಸಮೀಪ 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಇಂದು(ಅ.30) ಬೆಳಿಗ್ಗೆ ನಡೆದಿದ್ದು, ಒಟ್ಟು ಸುಮಾರು 30 ಮಂದಿ ವ್ಯಾನ್ ನಲ್ಲಿ ಇದ್ದು, 20 ಮಂದಿ ಗಾಯಗೊಂಡಿದ್ದು, ಅದರಲ್ಲಿ 07 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು,...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಗದೀಶ್ ಪಡ್ಪು ಆಯ್ಕೆ ಆಗಿದ್ದಾರೆ ಎಂದು ತಿಳಿದುಬಂದಿದೆ.ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬ್ಲಡ್ಕ ರವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಮಿತಿಯ ಸದಸ್ಯರಾದ ಬೆಳ್ಯಪ್ಪ ಖಂಡಿಗೆ ರವರು ಜಗದೀಶ್ ರವರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿ ಗುಣವರ್ಧನ ಕೆದಿಲ...
Loading posts...
All posts loaded
No more posts
