- Tuesday
- March 10th, 2026
ಶ್ರೀ ಕ್ಷೇತ್ರ ಒಡಿಯೂರಿನ ಶ್ರೀಗಳಾದ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಆ.03 ರಂದು ನಡೆಯಿತು. ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಅರಂತೋಡು ಪೇಟೆಯ ತೊಡಿಕಾನ ದೇವಸ್ಥಾನದ ದ್ವಾರದ ಬಳಿಯಿಂದ ದೇವಸ್ಥಾನದ ವರೆಗಿನ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಲಾಯಿತು.ಸ್ವಚ್ಛತಾ ಕಾರ್ಯಕ್ರಮ ದಲ್ಲಿ ತೊಡಿಕಾನ ವಲಯದ ಓಡಿಯೂರು ಸಂಘದ...
ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ಇದರ ವತಿಯಿಂದ 4ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಆ.17 ರಂದು ಎನೆಕಲ್ಲಿನ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ನಡೆಯಲಿದೆ. ಹಾಗೂ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಆ.12ರ ಒಳಗೆ ಹೆಸರು ನೋಂದಾಹಿಸಿಕೊಳ್ಳಬೇಕೆಂದು...
ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮಂಗಳೂರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ ಜಂಟಿ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯು ಜುಲೈ 20 ರಂದು ಮಂಗಳೂರಿನ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು.10 ರಿಂದ 14ರ ವಯೋಮಿತಿಯ ಸಬ್ ಜೂನಿಯರ್...
110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.05 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 4.00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ...
ಮರಕತ ದೇವಸ್ಥಾನದ ಸಮೀಪದಿಂದ ಏನೆಕಲ್ಲು ಸಂಪರ್ಕಿಸುವ ರಸ್ತೆಯಲ್ಲಿ ಸೇತುವೆ ಬಳಿ ರಸ್ತೆ ಕುಸಿತ ವಾಗಿದೆ. ಹೊಳೆ ಬದಿಯಾಗಿರುವುದರಿಂದ ವಾಹನ ಸವಾರ ಎಚ್ಚರಿಕೆ ವಹಿಸಬೇಕಿದೆ. ಸಂಬಂಧಪಟ್ಟವರು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.
ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಗ್ರಾಮ ವಿಕಾಸ ಯೋಜನೆ ಸಂಪಾಜೆ ಘಟ ಸಮಿತಿ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಂಪಾಜೆ, ಯಶಸ್ವಿ ಯುವಕ ಮಂಡಲ, ಸಂಜೀವಿನಿ ಸ್ವಸಹಾಯ ಸಂಘ, ಗಣೇಶೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಕಲ್ಲುಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್ಎಂ.ಎಸ್.ಎ ಪ್ರೌಢ ಶಾಲೆಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
ಗ್ರಾಮ ಪಂಚಾಯತ್ ಮಂಡೆಕೋಲು & ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಕ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಮಾಜಿ ಅಧ್ಯಕ್ಷರುಗಳಾದ ವಿನುತಾ ಪಾತಿಕಲ್ಲು, ಮೋಹಿನಿ ಮಂಡೆಕೋಲುಬೈಲು, ಹಿರಿಯರಾದ ಜಯರಾಮ್...
ಐನೆಕಿದು ಗ್ರಾಮದ ಕಟ್ರಮನೆ ನಿವಾಸಿ ಜಯರಾಮ ಗೌಡ ಕಟ್ರಮನೆಯವರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 52ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಚಂದ್ರಕಲಾ ಮಕ್ಕಳಾದ ಸಿಂಚನ, ಸ್ನೇಹಿತ್ ಮತ್ತು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಡಪ್ಪಾಡಿ ಘಟಕ ಸಮಿತಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಬಲ್ಕಜೆ, ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಮಡಪ್ಪಾಡಿ ಅಕ್ಷಯ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಬಲ್ಕಜೆ ಬಸ್ ನಿಲ್ದಾಣದ ಬಳಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.
Loading posts...
All posts loaded
No more posts
