- Saturday
- September 19th, 2026
ಸುಬ್ರಹ್ಮಣ್ಯ ಅಕ್ಟೋಬರ್ 19 : ಈ ವರ್ಷದ ದೀಪಾವಳಿಯ ಆರಂಭದ ಧನ ತ್ರಯೋದಶಿ ದಿನದಂದು ಕುಕ್ಕೆಯಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಬಂದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಭಕ್ತರ ದಟ್ಟಣೆ ಕಂಡು ಬಂತು. ಹಾಗೆ ನಾಗ ಪ್ರತಿಷ್ಠಾ ಮಂಟಪದ ಮುಂಭಾಗದಲ್ಲಿ ಕೂಡ ನಾಗ ಪ್ರತಿಷ್ಠೆ ಸೇವೆಗಾಗಿ...
ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ 26-10-2025 ರಂದು ಭಾನುವಾರ ದಿನ ಆಯೋಜಿಸಲಾಗಿರುತ್ತದೆ. ಅಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1-00 ಗಂಟೆಯವರೆಗೂ ನಡೆಯುವ ದೀಪಾವಳಿ ಕವಿಗೋಷ್ಠಿ...
ಪಂಚಸಪ್ತತಿ - 2025 ಸ್ವಚ್ಚತಾ ಕಾರ್ಯಕ್ರಮವನ್ನು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮವಾಗಿ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಸಾಂಸ್ಕೃತಿಕ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ, ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ...
ಸುಬ್ರಹ್ಮಣ್ಯ ಅಕ್ಟೋಬರ್ 18 : ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಈ ವರ್ಷದ ವಿನೂತನ ಕಾರ್ಯಕ್ರಮವಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ಒಳಪಟ್ಟ 12 ಬಸ್ಸು ತಂಗುದಾಣಗಳನ್ನು ಸ್ವಚ್ಛಗೊಳಿಸಿ, ಅಂದಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅರ್ಪಣೆ ಮಾಡುವುದಾಗಿದೆ. ಅದರಂತೆ ಈಗಾಗಲೇ 4 ಬಸ್ಸು ತಗುದಾಣ ಗಳಾದ ಅರಂಪಾಡಿ, ಹೊಸಳಿಕೆ, ಪರ್ವತಮುಖಿ,ಹಾಗೂ ಕುಲ್ಕುಂದ ಬಸ್ಸು ತಂಗುದಾಣಗಳನ್ನು ಪೈಂಟಿಂಗ್...
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಇದರ ಸಲುವಾಗಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಕವಿಗೋಷ್ಠಿ” ಯನ್ನು ಹಮ್ಮಿಕೊಳ್ಳಲಾಗಿದೆ. ಪಂಜ ಹೋಬಳಿಯ ಗ್ರಾಮಗಳಾದ ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು, ಕೂತ್ಕುಂಜ, ಮುರುಳ್ಯ, ಐವತೊಕ್ಲು,...
ಅಕ್ಟೋಬರ್ 18ರಂದು ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ದೀಪಾವಳಿಯ ಮಹತ್ವ ಸಾರುವ ಗೋಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಹಿಂದೂ ಸಂಸ್ಕೃತಿಯ ಪ್ರಕಾರ ಗೋವುಗಳ ಮಹತ್ವವನ್ನು ತಿಳಿಸುವ ಪ್ರಯತ್ನದೊಂದಿಗೆ ಶಾಲೆಯಲ್ಲಿ ಗೋವನ್ನು ಜಳಕ ಮಾಡಿಸಿ, ಹೂಹಾರ ಹಾಕಿ, ಅರಸಿನ-ಕುಂಕುಮ ಹಚ್ಚಿ ದೀಪಾರತಿ ಬೆಳಗಿಸಿ ಹಣ್ಣು -ಹಂಪಲುಗಳನ್ನು ನೀಡಲಾಯಿತು. ಗೋಮಾತೆಗೆ ಪ್ರದಕ್ಷಿಣೆ ಮಾಡಿದರೆ ತ್ರಿಲೋಕ ಪ್ರದಕ್ಷಿಣೆ ಮಾಡಿದ ಪುಣ್ಯ ಸಿಗುತ್ತದೆ ಎಂಬಂತೆ ಆಚರಿಸಲಾಯಿತು....
ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ.15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ “ಸ್ವರ್ಣಂ ದೀಪಂ” ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ.ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ,...
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ವಠಾರವನ್ನು ದೀಪದಿಂದ ಬೆಳಗಿಸಿ ಅಲಂಕರಿಸಲಾಯಿತು. ದೀಪಾವಳಿ ಸಮಾರಂಭವನ್ನು ದೀಪ ಬೆಳಗಿಸುವುದರ ಮೂಲಕ ಮಹಾತ್ಮ ಗಾಂಧಿ ಸ್ಮಾರಕ ಪ್ರೌಢಶಾಲೆಯ ಸಂಚಾಲಕರಾದ ಶ್ರೀ ದೊಡ್ಡಣ್ಣ ಬರಮೇಲು ರವರು ಉದ್ಘಾಟಿಸಿ ದೀಪಾವಳಿಯ ಸಂಭ್ರಮದ ಕ್ರಮ ಮತ್ತು ಆಚರಣೆಯ ಉದ್ದೇಶವನ್ನು ಇಂದಿನ ಮಕ್ಕಳು...
ಮಂಡೆಕೋಲು : “ನಿರಂತರ ಕಲಿಕೆ ಹಾಗೂ ಸತತ ಪರಿಶ್ರಮ ಇದ್ದರೆ ಯಾವುದೇ ಕೆಲಸದಲ್ಲಿ ಉತ್ತಮ ಕೌಶಲ್ಯತೆ ಹೊಂದಬಹುದು” ಎಂದು ಕೇಂದ್ರೀಯ ರಬ್ಬರ್ ಪ್ರಾಧಿಕಾರದ ಪುತ್ತೂರು ವಿಭಾಗದ ಸಹಾಯಕ ಅಭಿವೃದ್ಧಿ ಅಧಿಕಾರಿ ಟೋನಿ ಮೈಕಲ್ ಹೇಳಿದರು.ಕೇಂದ್ರೀಯ ರಬ್ಬರ್ ಪ್ರಾಧಿಕಾರ ಹಾಗೂ ಮಂಡೆಕೋಲು ಗ್ರಾಮ ಪಂಚಾಯತ್ ನ ಅರಿವು ಕೇಂದ್ರದ ಜಂಟಿ ಸಹಭಾಗಿತ್ವದಲ್ಲಿ ಎಂಟು ದಿನಗಳ ರಬ್ಬರ್ ಟ್ಯಾಪಿಂಗ್...
ಸುಬ್ರಹ್ಮಣ್ಯ ಅಕ್ಟೋಬರ್ 18 : ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗುವ ಸುಬ್ರಹ್ಮಣ್ಯ - ಮಂಜೇಶ್ವರ ರಾಜರಸ್ತೆಯು ಕುಮಾರಧಾರ ಜಂಕ್ಷನ್ ನಿಂದ ಏನೇಕಲ್ಲುವರೆಗೆ ಸಂಪೂರ್ಣ ಹಾಳಾಗಿರುತ್ತದೆ. ಹೆಜ್ಜೆ ಹೆಜ್ಜೆಗೂ ಅಲ್ಲಲ್ಲಿ ಹೊಂಡ-ಗುಂಡಿಗಳು ಬಿದ್ದಿವೆ. ಇಲ್ಲಿ ದ್ವಿಚಕ್ರ ವಾಹನ ಸವರಾರು ಸರ್ಕಸ್ ಮಾಡಿಕೊಂಡೇ ಸಂಚರಿಸಬೇಕಾಗಿದ್ದು, ನಾಲ್ಕು ಚಕ್ರಗಳ ವಾಹನಗಳು ಕೂಡ 10-15 ಕಿಲೋಮೀಟರ್ ವೇಗದ ಮಿತಿಯಲ್ಲಿ ಚಲಿಸುವಂತಹ ಪರಿಸ್ಥಿತಿ ಉಂಟಾಗಿದೆ....
Loading posts...
All posts loaded
No more posts
