- Monday
- June 22nd, 2026
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ಜೇಸಿಐ ಸುಳ್ಯ ಸಿಟಿ ಇವರ ಜೇಸಿ ಸಪ್ತಾಹ -2025 'ಚೈತನ್ಯತೆಯ ಚಿಗುರು' ಇದರ ಅಂಗವಾಗಿ "ಕಾನೂನು ಅರಿವು ಜಾಗೃತಿ" ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸೆ13 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸತೀಶ್ ಎನ್.ಪಿ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಹರಿ ಕುಕ್ಕುಡೇಲು ಯುವ...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಸಂಗಮ ನವೋದಯ ಸ್ವ-ಸಹಾಯ ಸಂಘದ 22ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಸೆ.15 ರಂದು ಸಂಘದ ಸದಸ್ಯರಾದ ಉಮೇಶ್ ಬಟ್ಟೋಡಿ ಅವರ ಮನೆಯಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ.ಕೆ ಹಾಗೂ ಕಾರ್ಯದರ್ಶಿಯಾಗಿ ವೆಂಕಟ್ರಮಣ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ನಿಕಟಪೂರ್ವ ಅಧ್ಯಕ್ಷರಾದ ಜಯಪ್ರಕಾಶ್ ಕಜ್ಜೋಡಿ ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ನಿಕಟಪೂರ್ವ...
ಶೇಣಿ-ಕುಳ್ಳಾಜೆ ರಸ್ತೆಯ ವೆಂಕಟ್ರಮಣ ಭಟ್ ಎಂಬುವವರ ಮನೆಯ ಅಂಗಳಕ್ಕೆ ರಿಕ್ಷಾ ಒಂದು ಮಗುಚಿ ಬಿದ್ದಿದ್ದು, ಪರಿಣಾಮವಾಗಿ ರಿಕ್ಷಾದೊಳಗಿದ್ದ ಭಾಸ್ಕರ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.
ಮಿಷನ್ ಶಕ್ತಿ ಯೋಜನೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಮಂಗಳೂರು ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ “ಮಹಿಳಾ ಸಬಲೀಕರಣ ಅರಿವು” ಕಾರ್ಯಕ್ರಮವು ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.14 ರಂದು ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ನಿರ್ದೇಶಕರುಗಳಾದ ಡ್ಯಾನಿ ಯಳದಾಳು, ರೇಗನ್ ಶೆಟ್ಟಿಯಡ್ಕ, ಶೇಷಪ್ಪ ಗೌಡ ಕಿರಿಭಾಗ, ಹಿಮ್ಮತ್ ಕಿರಿಭಾಗ, ಕಮಲಾಕ್ಷ...
ಅಂಬೇಡ್ಕರ್ ರಕ್ಷಣಾ ವೇದಿಕೆ ಅರಂತೋಡು ಘಟಕದ ವತಿಯಿಂದ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು. ಸುಶ್ಮಿತಾ ಬೆದ್ರುಪಣೆ ಅವರಿಗೆ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಅರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ ಶಾಲು ಹೊದಿಸಿ ಹಣ್ಣು ಹಂಪಲು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು, ವೇದಿಕೆಯ ಪ್ರ.ಕಾರ್ಯದರ್ಶಿ. ತಾ.ಕಾರ್ಯದರ್ಶಿ, ತಾಲೂಕು ಮಾಜಿ ಕಾರ್ಯದರ್ಶಿಯವರು ಉಪಸ್ಥಿತರಿದ್ದರು....
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.14 ರಂದು ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಹೆಚ್.ಎಲ್ ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಕಾಶ್.ಕೆ.ಎಸ್ ರವರು ವಾರ್ಷಿಕ ವರದಿ ವಾಚಿಸುತ್ತಾ “ಸಂಘವು ವಾರ್ಷಿಕ 118 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, 40,02,524 ರೂಪಾಯಿ...
ಫ್ರೆಂಡ್ಸ್ ಸಮಾಹಾದಿ ಮುರುಳ್ಯ ಇದರ ಆಶ್ರಯದಲ್ಲಿ ಸೆ.21ರಂದು ನಡೆಯುವ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಸಮಾಹಾದಿ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ಭಾವೈಕ್ಯ ಪರಿಷತ್ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಜೊತೆಯಾಗಿ ಸೆ-14 ರಂದು ಮಂಗಳೂರಿನ ದೇರಳಕಟ್ಟೆಯ ನವಾಝ್ ಬಿಲ್ಡಿಂಗ್ನ ಸಭಾಂಗಣದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ಅರ್ಥಗರ್ಭಿತ ಮೂರು ಚುಟುಕುಗಳನ್ನು ವಾಚಿಸಿದ ಖ್ಯಾತ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಗಣ್ಯ ಅತಿಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
2024-25 ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಪ್ರತಿಶತ ಫಲಿತಾಂಶ ಪಡೆದ ಸುಳ್ಯ ರೋಟರಿ ಸಂಸ್ಥೆಯ ಪ್ರಾಂಶುಪಾಲರನ್ನು ಮತ್ತು ಉಪನ್ಯಾಸಕರನ್ನು ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ.) ಮಂಗಳೂರು ವತಿಯಿಂದ ಸೆಪ್ಟೆಂಬರ್ 14 ರಂದು ಎಕ್ಸೆಲೆಂಟ್ ಪ.ಪೂ ಕಾಲೇಜು ಮೂಡುಬಿದಿರೆ ಇಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ತಮ್ಮ ಶ್ರೇಷ್ಠ ಸಾಧನೆ...
Loading posts...
All posts loaded
No more posts
