ಸುಳ್ಯ ಮೊಸರು ಕುಡಿಕೆ ಉತ್ಸವ : ಪ್ರಥಮ ಶಾಸ್ತಾವು ರೆಂಜಾಳ, ದ್ವಿತೀಯ ಯುವ ಕೇಸರಿ ಮುಳ್ಯ ಅಟ್ಲೂರು, ತೃತೀಯ ಹೆಚ್.ಟಿ.ಎಂ.ಸಿ. ಸುಳ್ಯ

ಸುಳ್ಯ : ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್‌ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ.19 ರಂದು ಸುಳ್ಯದಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.ಮೊಸರುಕುಡಿಕೆ...

ಸುಳ್ಯ : ವಿಜೃಂಭಣೆಯಿಂದ ನಡೆದ ಮೊಸರು ಕುಡಿಕೆ ಉತ್ಸವ ; “ತರುಣರು ಸಂಘಟನೆಯ ಜವಾಬ್ದಾರಿಯನ್ನು  ಹೊರಬೇಕಿದೆ, ಹಿಂದೂ ಸಮಾಜಕ್ಕೆ ನಾಲ್ಕು ಕಂಟಕವಿದೆ, ಸುಳ್ಯದ ಪ್ರತಿಯೊಂದು ಮನೆ ಮನೆಯೂ ಸಂಘಟನೆಯ ಭಾಗ” – ಚಕ್ರವರ್ತಿ ಸೂಲಿಬೆಲೆ

“ತರುಣರು ಸಂಘಟನೆಯ ಜವಾಬ್ದಾರಿಯನ್ನು  ಹೊರಬೇಕಿದೆ, ಹಿಂದೂ ಸಮಾಜಕ್ಕೆ ನಾಲ್ಕು ಕಂಟಕವಿದೆ, ಸುಳ್ಯದ ಪ್ರತಿಯೊಂದು ಮನೆ ಮನೆಯೂ ಸಂಘಟನೆಯ ಭಾಗವಾಗಿದೆ” ಎಂದು ಯುವ ಬ್ರಿಗೇಡ್ ಸಂಚಾಲಕ, ಯುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಅವರು ಸುಳ್ಯದಲ್ಲಿ ನಡೆದ ವಿ.ಹೆಚ್.ಪಿ ಸ್ಥಾಪನಾ ದಿನದ ಅಂಗವಾಗಿ ನಡೆದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. “ವಿಶ್ವ ಹಿಂದೂ ಪರಿಷತ್...
Ad Widget

ಸುಳ್ಯ : ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಜನ್ಮದಿನಾಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರು ಅಧ್ಯಕ್ಷತೆ ವಹಿಸಿ ಮಾತನಾಡಿ “ದಿ.ರಾಜೀವ್ ಗಾಂಧಿಯವರ ಆದರ್ಶ ಮತ್ತು ದೂರದೃಷ್ಟಿಯ ಆಡಳಿತವನ್ನು ಇಂದು ನಾವು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ದೇಶದಲ್ಲಿ ಇಂದು ನಾವು ವೈಜ್ಞಾನಿಕವಾಗಿ...

ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ನಡೆದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಮಾರೋಪ ಸಮಾರಂಭ

“ಯುವ ಜನಾಂಗ ಸಂಘಟಿತರಾಗಲು ಧಾರ್ಮಿಕ ಆಚರಣೆಗಳು ಬುನಾದಿ” : ಯಶವಂತ ರೈ ಅಭಿಮತ

ಸುಬ್ರಹ್ಮಣ್ಯ : “ಧಾರ್ಮಿಕ ಆಚರಣೆಗಳು ಯುವ ಜನಾಂಗವು ಸಂಘಟಿತರಾಗಲು ಬುನಾದಿಯಾಗುತ್ತದೆ. ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಸ್ಕಾರ ಮತ್ತು ಸಾಂಸ್ಕೃತಿಕ ವಿಚಾರಗಳನ್ನು ನಡೆಸಲು ಉತ್ಸಾಹ ತೋರಬೇಕು. ಆಧುನಿಕ ಯುಗದಲ್ಲಿ ಯುವ ಜನಾಂಗವು ಧಾರ್ಮಿಕ ಆಚರಣೆಗಳತ್ತ ಮನ ಮಾಡುತ್ತಿದ್ದಾರೆ ಅನ್ನುವುದು ನಮ್ಮ ಸಂಸ್ಕೃತಿಯ ಔನತ್ಯದ ಧ್ಯೋತಕವಾಗಿದೆ. ಪ್ರಾಚೀನ ಸಾಂಸ್ಕೃತಿಕ ವಿಚಾರಧಾರೆಗಳು ಚಿರಸ್ಥಾಯಾಗಿರಲು ಕೃಷ್ಣಲೀಲೋತ್ಸವವು ಸಹಕಾರಿ....

ಮಡಪ್ಪಾಡಿ:  ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ ; ಕೃಷಿ ಹಾನಿ ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿ

ಮಡಪ್ಪಾಡಿ ಗ್ರಾಮದ ಪೂಂಬಾಡಿಯಲ್ಲಿ ಒಂಟಿ ಸಲಗವೊಂದು ದಾಳಿ ನಡೆಸಿ ಕೃಷಿ ಹಾಗೂ ವಾಹನಕ್ಕೆ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಪೂಂಬಾಡಿ ಗಣಪಯ್ಯ ಗೌಡರವರ ತೋಟಕ್ಕೆ ರಾತ್ರಿ ವೇಳೆಗೆ ದಾಳಿ ಮಾಡಿದ ಒಂಟಿ ಸಲಗ 10ಹೆಚ್ಚು ತೆಂಗಿನ ಮರ, ಅಪಾರ ಬಾಳೆ ಗಿಡ ನಾಶ ಮಾಡಿದೆ. ತೋಟದ ದಾರಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೂ ಹಾನಿ ಮಾಡಿದೆ. ಪೂಂಬಾಡಿ...

ಕಡಬ ಪಟ್ಟಣ ಪಂಚಾಯತ್ ಚುನಾವಣೆ – 8 ಸ್ಥಾನ ಪಡೆದು ಅಧಿಕಾರಕ್ಕೇರಿದ ಕಾಂಗ್ರೆಸ್ –  ಅಧಿಕಾರ ಕಳೆದುಕೊಂಡ ಬಿಜೆಪಿ

ತೀವ್ರ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಒಟ್ಟು 13 ವಾರ್ಡ್ ಗಳ ಪೈಕಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಬಿಜೆಪಿಯು 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.ಮತ ಎಣಿಕೆ ಕೇಂದ್ರದಲ್ಲಿ ನಡೆದ ಎಣಿಕೆ ಪ್ರಕ್ರಿಯೆಯು ಬಿಗಿ ಪೊಲೀಸ್ ಬಂದೋಬಸ್ ನಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿತು....

ಸಂಪಾಜೆ : ಮದ್ರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ

ತೌಹೀದ್ ಎಜುಕೇಶನಲ್ ಹಾಗೂ ಕಲ್ಚರಲ್ ಟ್ರಸ್ಟ್ ಸಂಪಾಜೆ ಇದರ ಅಧಿನದಲ್ಲಿ ಕಾರ್ಯನಿರ್ವಹಿಸುತ್ತಿವ ಮದ್ರಸತುಲ್ ಇಸ್ಲಾಹ್ ಮದ್ರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ ಆಗಸ್ಟ್ 19ರಂದು ಸಂಜೆ 5.30 ರಿಂದ ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಮಸೀದಿ ಸಂಪಾಜೆ ವಠಾರದಲ್ಲಿ ನಡೆಯಿತು ಶಾಝಿಲ್ ರವರ...

ವಳಲಂಬೆ : ಗಣೇಶೋತ್ಸವದ ಪೂರ್ವಭಾವಿ ಸಭೆ

ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.27 ಮತ್ತು 28 ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಆ.27 ರಂದು ನಡೆಯುವ ಹಿಂದು ಬಾಂಧವರ ಮುಕ್ತ ವಾಲಿಬಾಲ್ ಪಂದ್ಯಾಟ, ಆ. 28 ರಂದು ನಡೆಯುವ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಆಮಂತ್ರಣ ವಿತರಣೆ, ಶೋಭಾಯಾತ್ರೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ...

ಬೆಳ್ಳಾರೆ : ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಕ್ರಮ ಮತ್ತು ಆಟಿದ ಕೂಟ

ಗ್ರಾಮ ಪಂಚಾಯತ್ ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ  ಆಗಸ್ಟ್ 19 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಕ್ರಮ ಮತ್ತು ಆಟಿದ ಕೂಟ ಜರಗಿತು....

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ಸುಳ್ಯ ಇದರ ವತಿಯಿಂದ ಗುರುವಂದನಾ ಕಾರ್ಯಕ್ರಮ

ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ.) (ಎನ್.ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ‌.ಜಿ ಪಾಲಿಟೆಕ್ನಿಕ್ ಸುಳ್ಯ) ಇದರ ವತಿಯಿಂದ  ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ  ಸಭೆಯನ್ನು  ಅರಂಬೂರಿನ “ವಿಕಸನ” ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರು, ಕೆ.ವಿ.ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರರುಗಳಾದ  ಕೆ.ವಿ.ಜಿ...
Loading posts...

All posts loaded

No more posts

error: Content is protected !!