ಬೆಳ್ಳಾರೆ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ರೋಟರಿ ಕ್ಲಬ್ ಬೆಳ್ಳಾರೆ ವತಿಯಿಂದ ಸಮವಸ್ತ್ರ ಕೊಡುಗೆ

ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಬೆಳ್ಳಾರೆ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಆ.15 ರಂದು ಸಮವಸ್ತ್ರವನ್ನು ವಿತರಿಸಲಾಯಿತು.ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ.ಕೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ.ಎಲ್ ರೈ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ರೋಟರಿ ಕ್ಲಬ್ ಪೂರ್ವಾಧ್ಯಕ್ಷರುಗಳಾದ ಶಶಿಧರ್ ಬಿ ಕೆ, ರವೀಂದ್ರ ಗೌಡ, ಚಂದ್ರಶೇಖರ ರೈ...

ಐವರ್ನಾಡಿನಿಂದ ಕಳ್ಳತನವಾಗಿದ್ದ ಪಿಕಪ್ ಪತ್ತೆ – ಪೋಲೀಸರ ಕಾರ್ಯಕ್ಕೆ ಮೆಚ್ಚುಗೆ

ಐವರ್ನಾಡಿನ ಎನ್.ಎಸ್.ಸೌಂಡ್ಸ್ & ಲೈಟಿಂಗ್ಸ್, ಶಾಮಿಯಾನದ ಮಾಲಕ ಸುನಿಲ್‌ ನಿಡ್ಡಾಜೆಯವರ ಪಿಕಪ್ ಆ.11 ರಂದು ತನ್ನ ಅಂಗಡಿ ಎದುರು ನಿಲ್ಲಿಸಿದ್ದರು. ಅಂದು ರಾತ್ರಿ ಪಿಕಪ್ ಕಾಣೆಯಾಗಿತ್ತು. ಈ ಬಗ್ಗೆ ಅವರು ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಮುಖ್ಯ ರಸ್ತೆಯಲ್ಲಿರುವ ಸಿ.ಸಿ.ಕೆಮರಾಗಳನ್ನು ಪರಿಶೀಲಿಸಿದ್ದರು. ಇಂದು ಕಾರ್ಕಳ ತಾಲೂಕಿನ ಮುಡೂರು ಎಂಬಲ್ಲಿ ಪಿಕಪ್...
Ad Widget

ಪಂಜ : ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಕೈ ಜೋಡಿಸಿದ ಮಕ್ಕಳು ; ಪೇಪರ್ ಕವರ್ ತಯಾರಿಸಿ ಹಸ್ತಾಂತರ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ “ಪ್ಲಾಸ್ಟಿಕ್" ಮುಕ್ತವಾಗಿಸುವ ನೆಲೆಯಲ್ಲಿ ಶ್ರೀಕ್ಷೇತ್ರದ ಮಕ್ಕಳ ಭಜನಾ ತಂಡದ ಮಕ್ಕಳಿಂದ ಪ್ರಸಾದ ವಿತರಿಸುವ ಕಾಗದದ ಕವರ್ ನ್ನು ತಯಾರಿಸಿ ನೀಡಿದರು. ಪುಟ್ಟ ಸೇವೆಯಾದರೂ ಅರ್ಥಪೂರ್ಣವಾಗಿಸಿದರು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಹಾಗೂ ದೇಗುಲದ ಅರ್ಚಕರಾದ ರಾಮಚಂದ್ರ ಭಟ್ ಶ್ರೀದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಕ್ಕಳಿಗೆ ಪ್ರಸಾದ ನೀಡಿದರು.

ನಡುಗಲ್ಲು : ಜವಾಹರ್ ಯುವಕ ಮಂಡಲದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ.17 ಭಾನುವಾರದಂದು ನಡುಗಲ್ಲು ವಠಾರದಲ್ಲಿ ನಡೆಯಿತು.ಆಟೋಟ ಸ್ಪರ್ಧೆಗಳನ್ನು ಯುವಕ ಯುವತಿ ಮಂಡಲದ ವಠಾರದಲ್ಲಿ ಶ್ರೀ ಮಹಾ ಮೃತ್ಯುಂಜಯೇಶ್ವರ ಮತ್ತು ಶ್ರೀ ಪಾರ್ವತಿ ಸೇವಾ ಟ್ರಸ್ಟ್(ರಿ.) ನಡುಗಲ್ಲು ಇದರ ಅಧ್ಯಕ್ಷರಾದ ರಾಮಚಂದ್ರ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಅಂಗನವಾಡಿ ಮಕ್ಕಳಿಂದ ಹಿಡಿದು ಪುರುಷರ ಹಾಗೂ...

ಬಳ್ಪ : ಆ.31 ರಂದು ಉಚಿತ ವೈದ್ಯಕೀಯ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ರೋಟರಿ ಕ್ಲಬ್ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಬಳ್ಪ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ, ವಿಕ್ರಮ ಯುವಕ ಮಂಡಲ ಬಳ್ಪ, ಧರ್ಮಶಾಸ್ತಾವೂ ಭಜನಾ ಮಂಡಳಿ ಬಳ್ಪ ಇವುಗಳ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ ಆ.31 ರಂದು ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ...

ಸುಳ್ಯ : ಜೂನಿಯರ್ ಕಾಲೇಜಿನ ಅಮೃತ ಮಹೋತ್ಸವದ ಲೋಗೋ ಮತ್ತು ಮನವಿ ಪತ್ರ ಬಿಡುಗಡೆ – ನೂತನ ಕೊಠಡಿಗೆ ಭೂಮಿ ಪೂಜೆ

ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ-2025 ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ.18 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು "ಈ...

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ಮಹಾಸಭೆ ಆ.17 ರಂದು ಯುವಕ ಮಂಡಲದ ಆವರಣದಲ್ಲಿ ನಡೆಯಿತು. ಈ ಸಭೆಯಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ‌ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ ಇವರನ್ನು ಆಯ್ಕೆ ಮಾಡಲಾಯಿತು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿಯಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಮೇಶ್.ಎಮ್ ನೆರವೇರಿಸಿದರು.ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ ಎಂ ವಹಿಸಿದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಮಹೇಶ್ ಕುಮಾರ್ ಕರಿಕಳ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿತನುಡಿಗಳನ್ನು ಆಡಿದರು....

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ – ರಾಜಿ ಮಾಡಿಕೊಳ್ಳಲು ಅ.07 ರವರೆಗೆ ಅವಕಾಶ

ನ್ಯಾಯಾಲಯದಲ್ಲಿ "ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ" ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಆರಂಭಗೊಂಡಿದ್ದು ಅಕ್ಟೋಬರ್ 7ರವರೆಗೆ ಅಭಿಯಾನ ನಡೆಯಲಿದೆ.ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ...

ದೇವ : ವಿಜೃಂಭಣೆಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ; “ಗೆಳೆಯರ ಬಳಗದ ಕಾರ್ಯಬದ್ಧತೆ ಎಲ್ಲಾ ಯುವಕ ಮಂಡಲಗಳಿಗೆ ಮಾದರಿ” : ಮಿತ್ರದೇವ ಮಡಪ್ಪಾಡಿ

ದೇವ ಗೆಳೆಯರ ಬಳಗ(ರಿ.) ದೇವ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲ(ರಿ.) ದೇವ ಇವುಗಳ ಸಂಯುಕ್ತಾಶ್ರಯದಲ್ಲಿ ಆ.16 ರಂದು 35ನೇ ವರ್ಷದ ವಿಜೃಂಭಣೆಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಸದಾಶಿವಯ್ಯ ದೇವ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಕಾರ್ಯದರ್ಶಿ ಜಯಂತ ದೇವ ವಹಿಸಿದ್ದರು.ವೇದಿಕೆಯಲ್ಲಿ...
Loading posts...

All posts loaded

No more posts

error: Content is protected !!