- Monday
- June 22nd, 2026
ಆ.30 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ನಡುಗಲ್ಲು ಮರಕತ ಶ್ರೀದುರ್ಗಾ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಆ.27 ರಂದು ಸುಬ್ರಹ್ಮಣ್ಯ ಪಾಲ್ತಾಡು ರವರ ಮನೆಯಲ್ಲಿ ನಡೆಯಿತು.ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಚಾರ್ಮತ ಅವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ವಿಶ್ವನಾಥ ಕುತ್ಯಾಳ ರವರು ಆಯ್ಕೆಯಾದರು.(ವರದಿ : ಉಲ್ಲಾಸ್ ಕಜ್ಜೋಡಿ)
ಮಾಣಿ ಮೈಸೂರು ಹೆದ್ದಾರಿಯ ಅಡ್ಕಾರು ಸಮೀಪ ಆ.30 ರಂದು ಲಾರಿ ಢಿಕ್ಕಿಯಾದ ಘಟನೆ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದು ವಿದ್ಯುತ್ ಕಂಬ ಮುರಿದ್ದು ಕಂಬ ಹಾಗೂ ಲಾರಿಗೆ ಹಾನಿಯಾಗಿದೆ.
ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು, ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕಾರ್ಯನಿರ್ವಾಹಣಾಧಿಕಾರಿಗಳಾದ ತಿಮ್ಮಯ್ಯ ಪಿಂಡಿಮನೆ, ನಿರ್ದೇಶಕರಾದ ಪುರುಷೋತ್ತಮ ಭಟ್, ತನಿಯಪ್ಪ ಗೌಡ, ಸಹಾಯಕ ಮಾರಾಟ ಮತ್ತು ಖರೀದಿ ಅಧಿಕಾರಿಯಾದ ಜಯಾನಂದ ಜೆ ಇವರುಗಳು ಆ.30 ರಂದು ಮಂಗಳೂರಿನಲ್ಲಿ ನಡೆದ ಸಂಘದ 111ನೇ ವರ್ಷದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು...
ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2024-25 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂಎನ್ ರಾಜೇಂದ್ರ ಕುಮಾರ್ ರವರಿಂದ ಆ.30 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ,...
ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರ ಸಂಘ ಸುಳ್ಯ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ 2024 -25ನೇ ಸಾಲಿನ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್...
ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ನೇತೃತ್ವದಲ್ಲಿ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಹಾಗೂ ಟೀಮ್ ಈಶ್ವರ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ವಿತರಣೆ ಶಿಬಿರವನ್ನು ಶನಿವಾರ ಶ್ರೀ ಸುಬ್ರಹ್ಮಣ್ಯ ಮಠದ ಆವರಣದಲ್ಲಿ ಉದ್ಘಾಟಿಸಲಾಯಿತು.ಶ್ರೀ...
ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.ಆ.29ರಂದು ಗ್ರಾಹಕರಾದ ಮುತ್ತಪ್ಪ ಗೌಡ ಏನೆಕಲ್ಲು...
ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.ಆ.30 ರಂದು ಗ್ರಾಹಕರಾದ ಡಾ. ಜೋಸ್ನಾ...
Loading posts...
All posts loaded
No more posts
