Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದ 2025-26ನೇ ಸಾಲಿನ ಮಂತ್ರಿಮಂಡಲದ ಪದಗ್ರಹಣ ಸಮಾರಂಭ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ 2025-26ನೇ ಸಾಲಿನ ಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಂತ್ರಿಮಂಡಲ ರಚನೆಯಾಗಿ ಅದರ ಪದಗ್ರಹಣ ಸಮಾರಂಭವು ಇಂದು ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಾಧವ ಮೂಕಮಲೆ ರವರು ಆಗಮಿಸಿ ಎಲ್ಲಾ ಮಂತ್ರಿಗಳಿಗೆ ಪದಗ್ರಹಣವನ್ನು ನೆರವೇರಿಸಿಕೊಟ್ಟರು. ಶಾಲಾ ಮುಖ್ಯ ಶಿಕ್ಷಕರು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 27 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪರಿಸರ ಸ್ವಚ್ಛತೆ, ಗಿಡ ನೆಡುವುದು, ಬೆಳೆಸುವುದು, ಸಂರಕ್ಷಿಸುವುದು ಹಾಗೂ ಪಕ್ಕದ ಅರಣ್ಯ ಪ್ರದೇಶಗಳಿಗೆ ತೆರಳಿ ರಸ್ತೆ ಬದಿ ಅಥವಾ ಬರಡು ಪ್ರದೇಶಗಳಲ್ಲಿ ಗಿಡ ನೆಡುವುದು, ಬೀಜ ಬಿತ್ತುವುದು, ಇತ್ಯಾದಿಗಳ ಬಗ್ಗೆ ವಿಶೇಷವಾದ ಮಾಹಿತಿಗಳನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಕ್ರಿಯಾಶೀಲ ಸದಸ್ಯರಾದ ಡಾ.ರವಿ ಕಕ್ಕೆಪದವು...
Ad Widget

ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಅಲಭ್ಯತೆಯ ಕಾರಣ ಕೆಲಸ ಕಳೆದುಕೊಂಡಿರುವ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಜಾನಿ.ಕೆ.ಪಿ ಮನವಿ

ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ ಜಮೀನಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಗೊಂದಲ ಏರ್ಪಟ್ಟ ಕಾರಣದಿಂದಾಗಿ ಕೆಂಪು ಕಲ್ಲು ಗಣಿಗಾರಿಕೆಗೆ ಹಾಗೂ ಸಾಗಾಟಕ್ಕೆ ಸಮಸ್ಯೆ ಎದುರಾಗಿರುತ್ತದೆ. ಈ ಕಾರಣದಿಂದ ಕಟ್ಟಡ ಕೆಲಸಗಾರರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುತ್ತಾರೆ. ಈಗಾಗಲೇ...

ಅಜ್ಜಾವರ : ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನೂತನ ವಲಯ ಸಮಿತಿ ರಚನೆ

ಅಧ್ಯಕ್ಷರಾಗಿ ಪ್ರಕಾಶ್ ಕಣೆಮರಡ್ಕ
ವಲಯ ಕಾರ್ಯದರ್ಶಿಯಾಗಿ ಶ್ರೀಮತಿ ವಿಶಾಲ ಸೀತಾರಾಮ ಕರ್ಲಪ್ಪಾಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ ಅಧ್ಯಕ್ಷರಾದ  ಚಂದ್ರಶೇಖರ ರವರ ಅಧ್ಯಕ್ಷತೆಯಲ್ಲಿ ಅಜ್ಜಾವರ ಮಹಿಷಮರ್ಧಿನಿ ವೇದಪಾಠ ಶಾಲಾ ಆವರಣದಲ್ಲಿ ನಡೆಸಲಾಯಿತು.ಈ ಸಭೆಗೆ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕ ದೀಪ ಪ್ರಜ್ವಲಿಸುವ ಮುಖೇನ...

ಸೀನಿಯರ್ ಚೇಂಬರ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಜಯೇಶ್ ಎಂ.ಆರ್ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ

ಸುಬ್ರಹ್ಮಣ್ಯ ಜೂನ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾದ ಜಯೇಶ್ ಎಂ.ಆರ್ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿದ್ದಗಂಗಯ್ಯ ಶುಕ್ರವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದ ನಂತರ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಲಿಜನ್ ಗೆ ಆಗಮಿಸಿದ ಇವರನ್ನು ಸುಬ್ರಹ್ಮಣ್ಯ ಕುಕ್ಕೆ...

ಬೆಳ್ಳಾರೆ:ಸಮಸ್ತದ ಸ್ಥಾಪನಾ ದಿನಾಚರಣೆ

ನೂತನವಾದ ಆರಂಭವಾಗುತ್ತಿದ್ದ ಕಾಲದಲ್ಲಿ ಮುಸ್ಲಿಂ ಸಮುದಾಯದ ಸರಿಯಾದ ರಕ್ಷಣೆಯ ಉದ್ದೇಶದೊಂದಿಗೆ ಸ್ಥಾಪಿತವಾದ ಸಮಸ್ತದ ನೂರನೇ ದಿನಾಚರಣೆಯನ್ನು ಜೂ 26 ರಂದು ಬೆಳ್ಳಾರೆಯ ಝಕರಿಯ ಜುಮುಅ: ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.ಬೆಳ್ಳಾರೆ ಮಖ್ಬರ ಝಿಯಾರತ್ನೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಝಕರಿಯ ಜುಮುಅ: ಮಸೀದಿ ಕಮಿಟಿ ಅಧ್ಯಕ್ಷರಾದ ಯು ಹೆಚ್ ಅಬೂಬಕರ್, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು.ಮಸೀದಿ ಖತೀಬರಾದ...

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನ ಕಾರ್ಯಕ್ರಮವು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪದ್ಮಕುಮಾರ್ ಜಿ.ಆರ್ "ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣಿಕೆ ಕುರಿತು" ಮಾಹಿತಿ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ.ಎಂ...

ಗುತ್ತಿಗಾರು : ಜೂ.29 ರಿಂದ “ಅಮರ ನೃತ್ಯ ತರಬೇತಿ ಕೇಂದ್ರ” ಪ್ರಾರಂಭ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಇದರ ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಚುರುಕುತನದ ಯಶಸ್ವಿ, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪ್ರಯತ್ನದ ಪರಿಕಲ್ಪನೆಯೊಂದಿಗೆ ಜೂ.29 ರಿಂದ ಗುತ್ತಿಗಾರಿನಲ್ಲಿ “ಅಮರ ನೃತ್ಯ ತರಬೇತಿ ಕೇಂದ್ರ” ವನ್ನು ಪ್ರಾರಭಿಸಲಾಗುತ್ತಿದ್ದು, ನೃತ್ಯ ತರಬೇತಿಯನ್ನು ನಾಟ್ಯ ಪ್ರವೀಣೆ ಪ್ರಣಮ್ಯ ಸುಬ್ರಹ್ಮಣ್ಯ ಇವರು ನೀಡುತ್ತಿದ್ದು, ಈ ತರಬೇತಿ ಶಿಬಿರವು...

ಸುಳ್ಯದ ಗ್ಲೋಬಲ್ ಕಂಪ್ಯೂಟರ್ ನಲ್ಲಿ ದಾಖಲಾತಿ ಪ್ರಾರಂಭ

ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸುಳ್ಯದ ಏಕೈಕ ಸಂಸ್ಥೆ

ಸುಳ್ಯದ ರಥಬೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ “ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ” ಯಲ್ಲಿ ದಾಖಲಾತಿ ಪ್ರಾರಂಭಗೊಂಡಿದ್ದು, ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಇದಾಗಿದ್ದು, ಇಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣಪತ್ರವು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ ದೊರೆಯುತ್ತದೆ ಎಂದು ಸಂಸ್ಥೆ...

ಎಸ್.ಕೆ.ಎಸ್.ಎಸ್.ಎಫ್ ಮತ್ತು ಎಸ್.ಕೆ.ಎಸ್.ಬಿ.ವಿ ಗೂನಡ್ಕ ಶಾಖೆ ವತಿಯಿಂದ ಪೇರಡ್ಕ ಮದ್ರಸಾದಲ್ಲಿ ಸಮಸ್ತ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಗೂನಡ್ಕ: ಭಾರತದ ಅತಿ ದೊಡ್ಡ ವಿದ್ವಾಂಸ ಒಕ್ಕೂಟವಾದ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ನೂರನೇ ಸ್ಥಾಪನಾ ದಿನದ ಪ್ರಯುಕ್ತ ಪೇರಡ್ಕ ಗೂನಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಮತ್ತು ಎಸ್.ಕೆ.ಎಸ್.ಬಿ.ವಿ ಗೂನಡ್ಕ ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಮಾಅತ್ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!