- Friday
- April 24th, 2026
2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅಮರಮುಡ್ನೂರು ಗ್ರಾಮದ ಕೆರೆಮೂಲೆ ಶ್ರೀಧರ ಗೌಡರು ತಮ್ಮ ಸುದೀರ್ಘ 36 ವರ್ಷಗಳ ಶಿಕ್ಷಕ ವೃತ್ತಿಜೀವನದಿಂದ ಮಾ.31ರಂದು ನಿವೃತ್ತಿ ಹೊಂದಿದರು. ಅಮರಮುಡ್ನೂರು ಗ್ರಾಮದ ಪೈಲಾರಿನ ಕೆರೆಮೂಲೆ ದಿ. ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ದೇವಮ್ಮ ದಂಪತಿಗಳ ಮಗನಾದ ಶ್ರೀಧರ ಗೌಡರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚೊಕ್ಕಾಡಿ...
ಸುಳ್ಯ ತಾಲೂಕಿನ ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಉಭಯ ತಾಲೂಕುಗಳ ಹಲವು ಕಡೆಗಳಲ್ಲಿ ಇಂದು(ಮಾ.31) ಸಂಜೆಯ ವೇಳೆಗೆ ಗಂಟೆಗಳ ಕಾಲ ಗುಡುಗು-ಸಿಡಿಲು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಕುಕ್ಕೆ ಸುಬ್ರಹ್ಮಣ್ಯ...
ಏ.01 ರಿಂದ ಪ್ರಾರಂಭವಾಗಲಿರುವ ಜನಗಣತಿ ದೇಶದ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯುತ್ತಿದ್ದು, ಕೋವಿಡ್ ಕಾರಣದಿಂದ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಈಗ ನಡೆಸಲಾಗುತ್ತಿದೆ.ತ್ವರಿತ ದತ್ತಾಂಶ ಸಂಗ್ರಹಣೆ : ಹಿಂದೆ ಕಾಗದದ ಪಾರ್ಮ್ಗಳನ್ನು ಸಂಗ್ರಹಿಸಿ ಅವುಗಳನ್ನು ಸ್ಕ್ಯಾನ್ ಮಾಡಿ ಫಲಿತಾಂಶ ಪ್ರಕಟಿಸಲು ವರ್ಷಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೆ ಈಗ ಡಿಜಿಟಲ್...
ಮೊದಲು ಶಿಕ್ಷಕರ ಜೀವನದಲ್ಲಿ ಚೆಲ್ಲಾಟವಾಡಿದರು. ಅಂದರೆ ಶಿಕ್ಷಕರು ಕೇವಲ ಪಾಠ ಮಾಡುವುದಲ್ಲದೆ ವಿದ್ಯಾರ್ಥಿಗಳೊಂದಿಗೆ ಬೆರೆತು ಅವರಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅಥವಾ ಹೊರಸೆಳೆಯುವ ಕಾಯಕ ಯೋಗಿಗಳಂತೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಅಕ್ಷಯ ಪಾತ್ರೆಯಂತೆ ಕಾರ್ಯನಿರ್ವಹಿಸುವ ಅಂದ ಹಾಗೇ “ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ”.ವಿದ್ಯೆಯನ್ನು ಧಾರೆ ಎರೆಯುದರಲ್ಲಿ ಸೈ ಎನಿಸಿಕೊಂಡವರು ಗುರುಗಳು. ಅಲ್ಲದೆ ಶಿಕ್ಷಕರು ತಮ್ಮ ಪ್ರೀತಿಯ...
ಪೈಚಾರಿನಲ್ಲಿರುವ ಶ್ರೀ ವೀರಭದ್ರ ಮಾರಿಯಮ್ಮ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾರಿಯಮ್ಮ ದೇವಿಯ ಮೂರ್ತಿಗೆ ಬೆಳ್ಳಿಯ ಕವಚ ನಿರ್ಮಾಣದ ಕೆಲಸ ನಡೆಯುತ್ತಿದ್ದು, ಸುಳ್ಯದ ಗೋಕುಲ್ ದಾಸ್ ಅವರು ತಮ್ಮ ಹರಕೆಯ ಬೆಳ್ಳಿಯನ್ನು ದೇವಿ ಕ್ಷೇತ್ರದಲ್ಲಿ ಸಮರ್ಪಿಸಿದರು.ಈ ಸಂದರ್ಭದಲ್ಲಿ ಬೆಳ್ಳಿ ಸಮರ್ಪಣೆಗೆ ಗೋಕುಲ್ ದಾಸ್ ಅವರು ಚಾಲನೆ ನೀಡಿದರು.
ಬಂಟ್ವಾಳ : “ಸಾಹಿತ್ಯವು ನಿರಂತರ ಸ್ಥಿತ್ಯಂತರಗಳ ಪಯಣವಾಗಿದ್ದು, ಇಲ್ಲಿನ ಸಾಹಿತ್ಯ ಕೇವಲ ಪುಸ್ತಕದಲ್ಲಿ ಉಳಿಯದೆ, ಜನಪದ, ಯಕ್ಷಗಾನದ ಮೂಲಕ ಜನಜೀವನದಲ್ಲಿ ಬೆರೆತುಹೋಗಿದೆ” ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಕುರುಂಜಿ ಹೇಳಿದರು. ಬಂಟ್ವಾಳದಲ್ಲಿ ನಡೆದ ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಸಾಹಿತ್ಯ-ಸಂಸ್ಕೃತಿ ವಿಚಾರಗೋಷ್ಠಿಯಲ್ಲಿ "ಸಾಹಿತ್ಯದ ಸ್ಥಿತ್ಯಂತರಗಳು" ಎಂಬ ವಿಚಾರದ ಕುರಿತು...
ಪೆರುವಾಜೆ : ಸುಳ್ಯ, ಪುತ್ತೂರು, ಕಡಬ ತಾಲೂಕಿನ ಇಪ್ಪತ್ತೆರಡು ಗ್ರಾಮಗಳಿಗೆ ಒಳಪಟ್ಟಿರುವ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಎ.10 ಮತ್ತು 11 ರಂದು ಪ್ರತಿಷ್ಠಾ ವರ್ಧಂತಿ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ, ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮ ನಡೆಸುವ ನಿಟ್ಟಿನಲ್ಲಿ ಭಕ್ತಾದಿಗಳ ಸಭೆಯು...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ಮತ್ತು ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ಮಾ.29 ಹಾಗೂ 30 ರಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆದಿದ್ದು, ಮಾ.29 ರಂದು ರಾತ್ರಿ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ ಹಾಗೂ ನಾಗದೇವರ ಸಾನಿಧ್ಯದಲ್ಲಿ ಆಶ್ಲೇಷ ಬಲಿ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕರಾದ ಮನೋಜ್ ಕುಮಾರ್ ಬಿ.ಎಸ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರು ವಿ.ವಿಯ 44ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಪದವಿ ಪ್ರಧಾನ ಮಾಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಆಧೀನದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸ್ಮಾರಕ...
“ಸುಂದರ ಸಂಸ್ಕೃತಿಯನ್ನು ಉಳಿಸುವ ರೀತಿಯಲ್ಲಿ ಪೋಷಕರು ಮಕ್ಕಳನ್ನು ಬೆಳೆಸಬೇಕು” ಎಂದು ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಉಡುಪಿ ಇದರ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಶ್ರೀಮತಿ ಹರಿಣಾಕ್ಷಿ ಎಂ.ಡಿ. ಹೇಳಿದರು. ಅವರು ಮಾ.30 ರಂದು ಸುಳ್ಯದ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆದ “ಅಮ್ಮ ಚಿಣ್ಣರ ಮನೆಯಲ್ಲಿ ವಾರ್ಷಿಕೋತ್ಸವ” ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಆಗಮಿಸಿ ಮಾತನಾಡಿದರು. “ಅನ್ಯ...
Loading posts...
All posts loaded
No more posts
