- Saturday
- March 7th, 2026
ಬೆಳ್ಳಾರೆ : ಮುಕ್ಕೂರು- ಕುಂಡಡ್ಕ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಡಿಕೇರಿ ತಾಲೂಕಿನವರಿಗೆ ಏರ್ಪಡಿಸಿದ ಕಥಾ ಮತ್ತು ಕವನ ಸ್ಪರ್ದೆಯ ಫಲಿತಾಂಶ ಪ್ರಕಟಗೊಂಡಿದೆ. ಕವನ ಸ್ಪರ್ದೆಯಲ್ಲಿ ನಾರಾಯಣ ಕೇಳತ್ತಾಯ, ಸುಳ್ಯ (ಪ್ರ), ಆಶ್ಲೇಷ್ ಕುಮಾರ್ ಕಾಣಿಯೂರು (ದ್ವಿ), ಸುಜಯ ಶ್ರೀ ವಿಟ್ಲ (ತೃ) ಹಾಗೂ ಸತ್ಯವತಿ ಭಟ್ ಕೊಳಚಪ್ಪೆ,...
ಕಳೆದ ಬಾರಿ ನಡೆಸಲಾದ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಕು. ರಚನಾ ಕೆ ಯವರು ಉತ್ತೀರ್ಣಗೊಂಡು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಕಳೆದ ಜನವರಿ 06 ರಂದು ಈ ಪ್ರವೇಶ ಪರೀಕ್ಷೆ ನಡೆದಿತ್ತು. ಈಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಲ್ತಾಜೆಯ ವಿದ್ಯಾರ್ಥಿನಿ. ಇವಳು ಗುತ್ತಿಗಾರು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನವೋದಯ ಪರೀಕ್ಷೆಯ ಬಗ್ಗೆ ತರಬೇತಿ...
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಉಳಿದಿರುವ ಶಾಲಾ-ಕಾಲೇಜು ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಮನೆಯಲ್ಲೇ ಇರುವ ಮಕ್ಕಳಿಗೆ ಪಠ್ಯಪುಸ್ತಕ ನೀಡುವ ಮೂಲಕ ಓದು ಬರಹದ ಕಡೆ ಗಮನ ಹರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್ಡೌನ್ ಮಾಡಿದ್ದು ,...
ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿ ದಿನೇ ದಿನೇ ಏರಿಕೆಯಾಗುತ್ತಿದೆ. ಇಂತಹ ಭೀತಿಯ ನಡುವೆಯೂ ಶಾಲಾ-ಕಾಲೇಜುಗಳು ಆಗಸ್ಟ್ ನಿಂದ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಶೇ.80ರಷ್ಟು ಪೋಷಕರು ಸದ್ಯಕ್ಕೆ ಶಾಲಾ-ಕಾಲೇಜು ಆರಂಭಿಸೋದು ಬೇಡ ಎಂಬುದಾಗಿ ಬಲವಾಗಿ ಅಭಿಪ್ರಾಯ ಪಟ್ಟ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲಿಯೇ...
ನವದೆಹಲಿ : ರಾಜ್ಯದಲ್ಲಿ ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ...
ಸರ್ಕಾರದ ಆದೇಶದಂತೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ನಡೆಯುವ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮವು ಸುಳ್ಯ , ಸುಬ್ರಹ್ಮಣ್ಯ , ಬೆಳ್ಳಾರೆ ವಲಯಗಳಲ್ಲಿ ಕಲ್ಪಿಸಲಾಗುವ ಬಸ್ಸುಗಳ ವಿವರಗಳನ್ನು ನೀಡಿದೆ.
ಪ್ರಸ್ತುತ ಸಂದಿಗ್ಧ ಘಟ್ಟದಲ್ಲಿ ಮದ್ರಸ ಶಿಕ್ಷಣ ಮೊಟಕುಗೊಂಡದ್ದನ್ನು ಪರಿಹರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಮತ್ತು ಎಸ್ ಕೆ ಐ ಎಂ ವಿ ಬಿ ನಿರ್ದೇಶಿಸಿದ ಸಮಸ್ತ ಆನ್ಲೈನ್ ತರಗತಿಯನ್ನು ಯಶಸ್ವಿಗೊಳಿಸಲು ಸುಳ್ಯ ರೇಂಜ್ ಮದ್ರಸ ಮೇನೇಜ್ಮೆಂಟ್ ಅಸೋಸಿಯೇಶನ್ ಕರೆ ನೀಡಿತು. ಸುಳ್ಯದ ಪರಿವಾರಕಾನದ ಗ್ರಾಂಡ್ ಪರಿವಾರ್ ಹಾಲ್'ನಲ್ಲಿ ನಡೆದ ವಿಶೇಷ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಶ್ರಯದಲ್ಲಿರುವ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನೂತನ ಪ್ರಾಂಶುಪಾಲರಾಗಿ ಕಾಲೇಜಿನಲ್ಲಿ ಆಡಳಿತಾಧಿಕಾರಿಯಾಗಿದ್ದ ಡಾ. ಲೀಲಾಧರ್ ಡಿ.ವಿ ಯವರನ್ನು ಆಡಳಿತ ಮಂಡಳಿ ನೇಮಕಮಾಡಿದ್ದು, ಅಧಿಕಾರ ವಹಿಸಿಕೊಂಡರು. ಪ್ರಾಂಶುಪಾಲ ಪ್ರೊ. ಎನ್.ಎಸ್.ಶೆಟ್ಟರ್ರವರ ನಿವೃತ್ತಿಯಿಂದ ತೆರವಾದ ಪ್ರಾಂಶುಪಾಲ ಹುದ್ದೆಗೆ ಡಾ.ಲೀಲಾಧರ್ ಡಿ.ವಿ.ಯವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ನೇಮಕಗೊಳಿಸಿದ್ದರು....
ಸುಳ್ಯದ ಪ್ರತಿಷ್ಠಿತ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಡಾ.ಲೀಲಾಧರ್ ಡಿ.ವಿ ಪ್ರಾಂಶುಪಾಲರಾಗಿ ಇಂದು ನೇಮಕಗೊಂಡಿದ್ದಾರೆ.
ಶಾಲೆ ಪ್ರಾರಂಭ ಸದ್ಯಕ್ಕಿಲ್ಲ , ಹಂತ ಹಂತವಾಗಿ ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಉಡುಪಿಗೆ ಆಗಮಿಸಿದ್ದ ಅವರು ಪತ್ರಿಕಾಗೋಷ್ಠಿ ನಡೆಸಿ ಈ ಮಾತನ್ನು ಹೇಳಿದರು.ಈಗಾಗಲೇ ಜುಲೈ ನಿಂದ ಶಾಲೆಗಳು ಪ್ರಾರಂಭಿಸುವ ಕುರಿತಾಗಿ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮುಂದೂಡುವಂತೆ ಅಭಿಪ್ರಾಯಗಳು ಬಂದಿದ್ದವು. ಮಕ್ಕಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟಸಾಧ್ಯವಿದೆ....
Loading posts...
All posts loaded
No more posts
