- Wednesday
- September 16th, 2026
ಸುಪ್ರಸಿದ್ದ ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರಿನ ಮಳಿಗೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀಮತಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮಿಕಾಂತ್ ಆಚಾರ್ಯ, ಶ್ರೀಮತಿ ವೇದ ಲಕ್ಷ್ಮಿಕಾಂತ್ ಆಚಾರ್ಯ, ಸುಧನ್ವ.ಬಿ ಆಚಾರ್ಯ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ಲಾ.ಎ ಅವರು ಧ್ವಜಾರೋಹಣವನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಪಂಚಾಯತ್ ನ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಸಾದ್ ಕುಮಾರ್ ರೈ ಹಾಗೂ ಸದಸ್ಯರಾದ ರಾಹುಲ್ ಆಡ್ಪಂಗಾಯ, ಶ್ವೇತ ಕುಮಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ...
ಪಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಧ್ವಜಾರೋಹಣ ನೆರವೆರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್.ಯು.ಬಿ. ಕಾರ್ಯಕ್ರಮಕ್ಕೆ ಸ್ವಾಗತಿಸಿ ವಂದಿಸಿದರು. ಉಪಾಧ್ಯಕ್ಷರಾದ ಶ್ರೀ ನಾರಾಯಣ.ಎನ್ ಹಾಗೂ ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ ಇವರು 79ನೇ ಸ್ವಾತಂತ್ರ್ಯೊತ್ಸವದ ಕುರಿತು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ...
ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವನ್ನು ಪೂರ್ವಾಹ್ನ 8:30 ಗಂಟೆಗೆ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಹೊಸೊಳಿಕೆ ರವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರತ್ಸೋವದ ಪ್ರಯುಕ್ತ ವಿಶೇಷ ಗ್ರಾಮ ಸಭೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಪದಾಧಿಕಾರಿಗಳು ಮತ್ತು ಪಂಚಾಯತ್...
ಸರಕಾರಿ ಮಾದರಿ ಹಿರಿಯ ಪಿಎಂ ಶ್ರೀ ಶಾಲೆ ಗುತ್ತಿಗಾರು ಇಲ್ಲಿ ಆಗಸ್ಟ್ 15 ರಂದು 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಆಚರಣೆಯನ್ನು ಮಾಡಲಾಯಿತು.ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಬಲಿದಾನಗೈದ ನೇತಾರರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಯಾನಂದ...
ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ವಿಕಾಸ ಸಭಾಭವನದ ಎದುರು ಭಾರತದ 79ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಕುತ್ಯಾಡಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಿಡಿಓ ಶ್ಯಾಮ್ ಪ್ರಸಾದ್, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ದೇವಚಳ್ಳದಲ್ಲಿ ಧ್ವಜಾರೋಹಣವನ್ನು ಪ್ರೇಮ ಚನಿಯಪ್ಪ ಕಲ್ಲುಪಣೆ, LCRP ಸಂಜೀವಿನಿ ಸ್ವ-ಸಹಾಯ ಸಂಘ ಇವರು ನೆರವೇರಿಸಿದರು. ನಂತರ ಅಮೃತ ಸರೋವರ ಕಂದ್ರಪ್ಪಾಡಿ ಬಳಿ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಹಿರಿಯಡ್ಕರವರು ಧ್ವಜಾರೋಹಣ ನೆರೆವೇರಿಸಿದರು.ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಕಾಶಿಕಟ್ಟೆ ಮಹಾಗಣಪತಿ ದೇವಸ್ಥಾನದಿಂದ ವಿದ್ಯಾಲಯದವರೆಗೆ ಅದ್ದೂರಿಯ ಮೆರವಣಿಗೆಯಲ್ಲಿ ಬಂದು ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ವಾಯು ಸೇನೆಯ ನಿವೃತ್ತ ಯೋಧರಾದ ಶ್ರೀ ಜೆ.ಪಿ.ಎಂ ಚೆರಿಯನ್ ನೆರವೇರಿಸಿದರು. ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಮಾಸ್ಟರ್ ಅಭಿನಂದನಾ ಶರ್ಮ ವಹಿಸಿದ್ದರು. ಹಾಗೆ ಧ್ವಜಾರೋಹಣ ನೆರವೇರಿಸಿದ ಶ್ರೀ...
ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯದಾಸ್ ವಾಡ್ಯಪ್ಪನಮನೆ ಧ್ವಜಾರೋಹಣವನ್ನು ನೆರವೇರಿಸಿದರು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಹಶಿಕ್ಷಕರಾದ ಶ್ರೀಮತಿ ಭವ್ಯ ರವರು “ಸ್ವಾತಂತ್ರ್ಯ ದಿನಾಚರಣೆಯ ಮಹತ್ವ” ದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು...
ಸುಬ್ರಹ್ಮಣ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಸಪಲ್ಯ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್ ಚಿದಾನಂದ.ಕೆ, ಸಹಾಯಕ ಇಂಜಿನಿಯರ್ ಹರಿಕೃಷ್ಣ, ಸಹಾಯಕ ಲೆಕ್ಕಾಧಿಕಾರಿ ಗಣೇಶ್, ಕಿರಿಯ ಇಂಜಿನಿಯರ್ ಬಾಲಕೃಷ್ಣ, ಕಿರಿಯ ಇಂಜಿನಿಯರ್ ಸಬ್ ಸ್ಟೇಷನ್ ಜೆ.ಇ ಸುನೀತಾ ಹಾಗೂ ಪಂಜ ಶಾಖೆಯ ಸಿಬ್ಬಂದಿಗಳು, ಗುತ್ತಿಗಾರು ಶಾಖೆಯ...
Loading posts...
All posts loaded
No more posts
