- Friday
- April 24th, 2026
ಅಕೌಂಟೆಂಟ್ ಅಸಿಸ್ಟೆಂಟ್ , ಆಡಿಟರ್ ಹುದ್ದೆಗೆ ಸುಳ್ಯ ಆಸುಪಾಸಿನ ಬಿ.ಕಾಂ. ಆಗಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಬಾಲಕೃಷ್ಣ ನಡುಗಲ್ಲು , ಮೊ : 944871025
ಜೀವನ ಅಂದ ಮೇಲೆ ಅಲ್ಲಿ ಕಷ್ಟ, ಸುಖ, ನೋವು, ನಲಿವು ಎಲ್ಲವೂ ಬಂದು ಹೋಗುತ್ತಿರುತ್ತವೆ. ನಮ್ಮ ಜೀವನದಲ್ಲಿ ಕಷ್ಟ, ನೋವುಗಳು ಬಂದಾಗ “ಅಯ್ಯೋ ನಮ್ಮ ಜೀವನದಲ್ಲಿ ಕೆಟ್ಟ ದಿನಗಳು ಶುರುವಾಯ್ತು” ಅಂತ ಅಂದ್ಕೊಳ್ತೀವಿ, ಒಳ್ಳೆಯ ದಿನಗಳಿಗೋಸ್ಕರ ಕಾಯ್ತೀವಿ. ಅದೇ ರೀತಿ ನಮ್ಮ ಜೀವನ ಸಂತಸದಿಂದ ತುಂಬಿದ್ದರೆ “ನಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಶುರುವಾಗಿದೆ” ಅಂತ ಅಂದ್ಕೊಳ್ತೀವಿ....
ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ರೋವರ್ ಮತ್ತು ರೇಂಜರ್ ಘಟಕದ ವತಿಯಿಂದ ರೋವರ್ ಮತ್ತು ರೇಂಜರ್ ಪ್ರಾಥಮಿಕ ಹಂತದ ತರಬೇತಿಯನ್ನು ಜೂ. 21ರಂದು ದೃಶ್ಯ ಕೊಠಡಿಯಲ್ಲಿ ಆಯೋಜಿಸಲಾಗಿತ್ತು. ಬೆಳಗ್ಗೆ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ನಂತರ ಎಲ್ಲಾ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆದ ಯೋಗ ಮಾಹಿತಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಪಠ್ಯೇತರ ಚಟುವಟಿಕಾ ಘಟಕಗಳಾದ ಎನ್ ಎಸ್ ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್, ರೋವರ್ಸ್ - ರೇಂಜರ್ಸ್ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ನಿಕೊಳ್ಳಲಾಯಿತು. ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಪ್ರಮೋದ್ ಪಿ ಎ ಮುಖ್ಯ ಅತಿಥಿಯಾಗಿ...
ಅನುಭವವು ತಾನೇ ಜಗದ ಅತೀ ದೊಡ್ಡ ಪಾಠವು, ಅನುಭವವು ಕಲಿಸುವ ಪಾಠ ಎಂದೂ ಮರೆಯದು, ಬದುಕಿನಲ್ಲಿ ಎಂದೂ ಮರೆಯದು, ಅದು ಸೋಲೇ ಇರಲಿ ಇಲ್ಲ ಗೆಲುವೇ ಇರಲಿ, ಅದು ನೋವೇ ಇರಲಿ ಇಲ್ಲ ನಲಿವೇ ಇರಲಿ…ಬದುಕಿನ ಪ್ರತಿ ನಿಮಿಷ ಅನುಭವವೇ ತಾನೇ, ಒಂದೊಂದು ನಿಮಿಷವು ಇಲ್ಲಿ ಪಾಠವೇ ತಾನೇ…ಅನುಭವದ ಪುಸ್ತಕದಲ್ಲಿ ಸೋಲುನೂ ಒಂದು ಪಾಠ, ಗೆಲುವನ್ನು...
ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...
ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಹೈಸ್ಕೂಲ್ ವಿಭಾಗ ಇಲ್ಲಿ ಇಂದು 2022-23ನೇ ಶೈಕ್ಷಣಿಕ ಸಾಲಿನ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಮೊದಲಿಗೆ ಮಕ್ಕಳ ಪಥಸಂಚಲನ ನಡೆಯಿತು. ಈ ಕಾರ್ಯಕ್ರಮವನ್ನು ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಎರ್ಧಡ್ಕ ರವರು ಬ್ಯಾಂಡ್ ಬಾರಿಸುವ ಮೂಲಕ ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ...
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪ್ರಾರಂಭ ದಿನವಾದ ಇಂದು ಅದ್ದೂರಿಯಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ದಿನೇಶ್ ಹೆಚ್ ಎಲ್, ವೆಂಕಟೇಶ್, ಶಿಕ್ಷಕ ರಕ್ಷಕ ಸಂಘದ ದಿನೇಶ್ ಹಾಗೂ ಪೋಷಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಯಶವಂತ ರೈ, ಕಾಲೇಜು ಪ್ರಾಂಶುಪಾಲರಾದ ಸೋಮಶೇಖರ್ ನಾಯಕ...
ಉರುಳುತಿದೆ ಕಾಲವು, ಸಾಗುತಿದೆ ಜೀವವು…ಕನಸನೆಲ್ಲಾ ಮೂಟೆ ಕಟ್ಟಿ, ಕೊನೆಯೇ ಇರದ ದಾರಿ ಮುಟ್ಟಿ ಸಾಗುತಿದೆ ಜೀವವು, ಉರುಳುತಿದೆ ಕಾಲವು…ಕನಸಿನ ದಾರಿಯ ದಾಟಿ, ಮನಸಿನ ಮೌನವ ಮೀರಿ ಮೈಲಿಗಲ್ಲು ಇರದ ದಾರಿ ಹುಡುಕಿ ಸಾಗಿ…ಉರುಳುತಿದೆ ಕಾಲವು, ಸಾಗುತಿದೆ ಜೀವವು…ಏತಕೆ ತಿಳಿಯದ ಪಯಣ, ಸಾಗಿದೆ ಹುಡುಕಿ ಕಾರಣ…ಸಾಗುವುದೆಲ್ಲೋ, ಸೇರುವುದೆಲ್ಲೋ ತಿಳಿದೇ ಇಲ್ಲ…ಕ್ಷಣಿಕದ ಬದುಕಿನಲ್ಲಿ ಕ್ಷಣ ಕ್ಷಣವು ಅನುಭವ ತಾನೇ,...
Loading posts...
All posts loaded
No more posts
