- Thursday
- June 25th, 2026
ಸುಬ್ರಹ್ಮಣ್ಯ ಜುಲೈ 11: ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ದೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಆರೋಗ್ಯ ಕೇಂದ್ರ, ಶ್ರೀ ಸುಬ್ರಹ್ಮಣ್ಯ ಮಠ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಸೀನಿಯರ್ ಚೇಂಬರ್, ಡಾl ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಅರಣ್ಯ ಇಲಾಖೆ,...
ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ.ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ), ಚಂದ್ರನ್ ಕೂಟೇಲ್ ಮೊದಲಾದವರು ಇದ್ದರು.ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ನೀಡಲಾಗುತ್ತಿತ್ತು....
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಡಬ, ಪಶು ಆಸ್ಪತ್ರೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.14 ಸೋಮವಾರದಂದು ಬೆಳಿಗ್ಗೆ 10:00 ಗಂಟೆಯಿಂದ “ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್...
ಇತ್ತೀಚೆಗೆ ಪೆರಾಜೆ ಕಲ್ಚರ್ಪೆ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಐವರ್ನಾಡು ನಿವಾಸಿ ಗೋಪಿನಾಥ ನಿಡುಬೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಕೊಡಿಯಾಲ ಶಕ್ತಿ ಕೇಂದ್ರದಲ್ಲಿ ವಿಕಸಿತ್ ಭಾರತ ಕಾರ್ಯಕ್ರಮ "ಸಂಕಲ್ಪದಿಂದ ಸಾಧನೆಗೆ" ಮೋದಿಜಿಯವರ ಆಡಳಿತದ ಹನ್ನೊಂದನೇ ವರ್ಷಾಚರಣೆ ಅಭಿಯಾನದ ಅಂಗವಾಗಿ ಗುರುಪೂರ್ಣಿಮೆ ವಿಶೇಷ ಸಂಧರ್ಭದಲ್ಲಿ ಇಂದು ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅಭಿಯಾನದ ಜಿಲ್ಲಾ ಸಂಚಾಲಕರಾದ ಹರೀಶ್ ಕಂಜಿಪಿಲಿ, ಸುಳ್ಯ...
ಜೆಸಿಐ ವಲಯ 15ರ ವ್ಯವಹಾರ ವಿಭಾಗದ ಮಾಸಿಕ ಹಬ್ಬದ ಅಂಗವಾಗಿ ವ್ಯವಹಾರ ಸಂಸ್ಥೆ ಅಥವಾ ಅಂಗಡಿಗಳಲ್ಲಿ ಜೆ.ಸಿ ವಾಣಿಯನ್ನು ಪ್ರದರ್ಶಿಸಲು ಪ್ರೆರೇಪಿಸುವ “ಮನೆ-ಮನಗಳಲ್ಲಿ ಜೆಸಿವಾಣಿ” ಕಾರ್ಯಕ್ರಮ ಬೆಳ್ಳಾರೆ ಜೆ.ಸಿ.ಐ ವತಿಯಿಂದ ನಡೆಯಿತು. ಬೆಳ್ಳಾರೆಯ ಕಿರಣ್ ಪ್ರಿಂಟರ್ಸ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೆ.ಸಿ.ಐ ನ ಸ್ಥಾಪಕ ಕಾರ್ಯದರ್ಶಿ ಕೃಷ್ಣಪ್ಪ ಮೂಲ್ಯ ಅವರು ಕಿರಣ್ ಪ್ರಿಂಟರ್ಸ್...
(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)ಬೆಳ್ಳಾರೆ ಗ್ರಾಮ ಪಂಚಾಯಿತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಅಧ್ಯಕ್ಷೆ ನಮಿತಾ.ಎಲ್ ರೈಯವರ ಅಧ್ಯಕ್ಷತೆಯಲ್ಲಿ ಜು.9ರಂದು ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕಟ್ಟಡದಲ್ಲಿ ನಾಡಗೀತೆಯೊಂದಿಗೆ ಆರಂಭವಾಯಿತು.ಬೆಳ್ಳಾರೆಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಯವರು ಸ್ವಾಗತಿಸಿ, ವರದಿ ವಾಚಿಸಿದರು. ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಬಿ.ಐ.ಆರ್.ಟಿ.ಬಿ.ಆರ್.ಸಿ ಕಛೇರಿ...
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂ ನಲ್ಲಿ ನೂತನ ಚಿನ್ನಾಭರಣಗಳ ಮಳಿಗೆ “ಸ್ವರ್ಣಂ ಜ್ಯುವೆಲ್ಸ್” ಜು.07 ರಂದು ಶುಭಾರಂಭಗೊಂಡಿತು. ಮುಳಿಯ ಗೋಲ್ಡ್ & ಡೈಮಂಡ್ಸ್ ನ ಮಾಲೀಕರಾದ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣನಾರಾಯಣ ಮುಳಿಯ ಅವರು ಮಳಿಗೆಯನ್ನು ಉದ್ಘಾಟಿಸಿದರು. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್...
ಅರಂತೋಡು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿದ್ದು, ಘಟಕ ಸಂಪೂರ್ಣ ಹೊತ್ತಿ ಉರಿದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ತ್ಯಾಜ್ಯ ಎಲ್ಲವೂ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
ದೇವಚಳ್ಳ ಗ್ರಾಮದ ಕರಂಗಲ್ಲು ಎಂಬಲ್ಲಿ ಸೇತುವೆಯೊಂದು ಕುಸಿತಗೊಂಡಿದ್ದು, ಹರಿಹರ ಪಳ್ಳತ್ತಡ್ಕ-ಮುಳ್ಳುಬಾಗಿಲು-ಕರಂಗಲ್ಲು ಮೂಲಕವಾಗಿ ಕಂದ್ರಪ್ಪಾಡಿ ಸಂಪರ್ಕಿಸುವ ರಸ್ತೆಯಲ್ಲಿರುವ ಸೇತುವೆ ಇದಾಗಿದೆ. ಕರಂಗಲ್ಲು, ದೊಡ್ಡಕಜೆ, ಹೆರ್ಕಜೆ ಸೇರಿದಂತೆ ಆ ಭಾಗದಿಂದ ಜನರು ಹರಿಹರಕ್ಕೆ ಬರಬೇಕಿದ್ದರೆ ಈ ಸೇತುವೆಯ ಮೂಲಕವೇ ಬರಬೇಕಾಗಿದ್ದು, ಸ್ಥಳಕ್ಕೆ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ರವರು...
Loading posts...
All posts loaded
No more posts
