- Friday
- June 26th, 2026
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಜು.01 ರಂದು ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.ಬೀಳ್ಕೊಡುಗೆ ಸಮಾರಂಭದಲ್ಲಿ ಶ್ರೀಮತಿ ಉಷಾ ಅನಂತರಾಮ ಮಣಿಯಾನಮನೆ ದಂಪತಿಗಳನ್ನು ಫಲ-ಪುಷ್ಪ, ಸ್ಮರಣಿಕೆ ನೀಡಿ ಶಾಲು-ಹಾರ ಹಾಕಿ ಗೌರವಿಸಲಾಯಿತು.ಸೊಸೈಟಿ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ...
ದಾರುಲ್ ಹಿಕ್ಮಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ ಇದರ ಮಂತ್ರಿ ಮಂಡಲ ರಚನೆಯು ದಿನಾಂಕ 28.06.2025ರಂದು ನಡೆಯಿತು. 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮುಖ್ಯಮಂತ್ರಿಯಾಗಿ ಮಹಮ್ಮದ್ ರಹೀಝ್ ಕೆ.ಎಂ(8ನೇ ತರಗತಿ), ಶಾಲಾ ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ಅಫ್ರೀದ್(8ನೇ ತರಗತಿ) ಮತ್ತು ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಅಸೀದ್(8ನೇ ತರಗತಿ) ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ಶಮೀಮ್(7ನೇ ತರಗತಿ),...
ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ ಜೂ.30 ರಂದು ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಗೋಪಿನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವಿದ್ಯಾ ಶಂಕರಿ ಶಿಕ್ಷಕಿ ರವರು ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ ಪ್ರಿಯಾ ರಾಜಮೋಹನ್ ಆಡಳಿತಾಧಿಕಾರಿ ಸಖೀ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ರವರು ಸಂಪನ್ಮೂಲ...
ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಏನಕಲ್ಲು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಮಂಗಳವಾರ ಸಂಜೆ ನಡೆಯಲಿರುವುದು. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲೆ 317 ಡಿ ಇದರ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಗೋವರ್ಧನ ಶೆಟ್ಟಿ ಉಪಸ್ಥಿತರಿರಲಿದ್ದಾರೆ. ನೂತನ ಅಧ್ಯಕ್ಷರಾಗಿ ವಿಮಲಾ...
ಸುಬ್ರಹ್ಮಣ್ಯ : ಜೂನ್ 28 ರಿಂದ ಜುಲೈ 1 ರವರೆಗೆ ಉತ್ತರಕಾಂಡದ ಹರಿದ್ವಾರಾದಲ್ಲಿ ನಡೆಯುವ 18 ವರ್ಷದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬದ ಆಶಿಷ್ ಕೆ.ವೈ ಕೋಟೆಬಾಗಿಲು ಆಯ್ಕೆಯಾಗಿದ್ದಾರೆ.ಗುಜರಾತಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡಕ್ಕೆ ಆಯ್ಕೆಯಾಗಿ ಇವರು ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡವನ್ನು ಪ್ರತಿನಿಧಿಸಲಿದ್ದಾರೆ. ತರಬೇತುದಾರರಾದ ರಂಗನಾಥ ರವರ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕರಾದ ಮನೋಜ್ ಕುಮಾರ್ ಬಿ.ಎಸ್ ರವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ಆಧೀನದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಅರ್ಥಶಾಸ್ತ ಪ್ರಾಧ್ಯಾಪಕರಾದ ಡಾ.ತಿಮ್ಮಯ್ಯ.ಟಿ.ಡಿ ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಎಕಾಮಿಕ್ಸ್ ಆಫ್ ಅರೆಕಾನಟ್ ಕಲ್ಟಿವೇಷನ್ ವಿತ್ ಸ್ಪೆಷಲ್ ರೆಫರೆನ್ಸ್...
ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ.) ಸುಳ್ಯ ಗಾಂಧಿನಗರ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯು ಜೂ.29 ರಂದು ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಯೋಜನೆಯ ಫಲಾನುಭವಿಗಳ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು. ಪಿಯುಸಿ ವಿಭಾಗದಲ್ಲಿ ಶ್ರೀ ಮಂಜು ಸಂಘದ ಸದಸ್ಯರಾದ ವಸಂತಿ ರವರ ಮಗ ಕೌಶಿಕ್(548), ಶ್ರೀದೇವಿ ಸಂಘದ ಸದಸ್ಯರಾದ ಬಾಲಕೃಷ್ಣರವರ ಮಗಳು...
ಎಡಮಂಗಲದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದು, ವಾಹನಗಳು ಮತ್ತು ನಡೆದುಕೊಂಡು ಹೋಗುವ ಪ್ರಯಾಣಿಕರಿಗೆ ಸಮಸ್ಯೆ ಉಂಟುಮಾಡುತ್ತಿದೆ. ಈ ದುಸ್ಥಿತಿಯನ್ನು ಕಂಡ ರೈಲ್ವೆ ನಿತ್ಯ ಪ್ರಯಾಣಿಕರು ಹಾಗೂ ಸ್ಥಳೀಯರು ಶ್ರಮದಾನ ನಡೆಸಿ ಸಂಪರ್ಕ ರಸ್ತೆಯನ್ನು ದುರಸ್ತಿ ಮಾಡುವ ಕಾರ್ಯದಲ್ಲಿ ತೊಡಗಿಕೊಂಡರು. ಈ ಬಗ್ಗೆ ರೈಲ್ವೆ ಇಲಾಖೆ ಹಾಗು ಸ್ಥಳೀಯ ಆಡಳಿತ ಹದಗೆಟ್ಟ ರಸ್ತೆಯ ಬಗ್ಗೆ...
ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ 3ನೇ ವರ್ಷಕ್ಕೆ ಪಾದಾರ್ಪಣೆ ಪ್ರಯಕ್ತ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ, ಅಧ್ಯಕ್ಷರಾದ ಜನಾರ್ಧನ ದೋಳ, ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ, ನಿರ್ದೇಶಕರಾದ ಪ್ರಕಾಶ್ ಕೆರ್ಪಳ, ಸಚಿನ್ ಕುಮಾರ್ ಬಳ್ಳಡ್ಕ, ಶ್ರೀಮತಿ ಭವಾನಿ ಬಿಳಿಮಲೆ, ಕೇಶವ ನಾಯಕ್, ಚಿದಾನಂದ ವಿದ್ಯಾನಗರ, ಸತೀಶ್...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಅರೆಭಾಷೆ ಸಂಘದ ಉದ್ಘಾಟನೆ ಮತ್ತು ಕಾಲೇಜು ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಕಾರ್ಯಕ್ರಮವು ಜೂ.28 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರು ವಹಿಸಿ "ಅರೆಬಾಷೆ ತ್ರೈಮಾಸಿಕ ಪತ್ರಿಕೆ ಹಿಂಗಾರದಲ್ಲಿ ವಿದ್ಯಾರ್ಥಿ ಸಾಹಿತ್ಯಕ್ಕಾಗಿಯೇ ಪುಟಗಳನ್ನು...
Loading posts...
All posts loaded
No more posts
