ನಾಳೆ(ಜು.22) ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಬ್ರಾಯ ಸಂಪಾಜೆಯವರಿಗೆ ಸನ್ಮಾನ

ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 22ರಂದು ಪತ್ರಿಕಾ ದಿನಾಚರಣೆಯು ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿಗಳಾದ ಗಿರೀಶ್ ಅಡ್ಪಂಗಾಯ ತಿಳಿಸಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಲಿದ್ದು, ಆಕಾಶವಾಣಿ ಮಡಿಕೇರಿ ಕೇಂದ್ರದ ನಿವೃತ್ತ ಉದ್ಘೋಷಕರಾದ...

ಪೆರಾಜೆ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಉದ್ಘಾಟನೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪೆರಾಜೆಯಲ್ಲಿ ಜು.21 ಸೋಮವಾರದಂದು ಬೆಳಿಗ್ಗೆ 10:30ಕ್ಕೆ ಆಂಗ್ಲ ಮಾಧ್ಯಮ ಉದ್ಘಾಟನಾ(ದ್ವಿ-ಭಾಷಾ) ಕಾರ್ಯಕ್ರಮ ನೆರವೇರಿತು.ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ನೆಡ್ಚಿಲ್ ಅವರು ವಹಿಸಿಕೊಂಡರು.ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ ಅವರು ನೆರವೇರಿಸಿದರು. ಉದ್ಘಾಟನೆಯ ನಂತರ...
Ad Widget

ಸುಳ್ಯ : ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ.ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರು ಇಂದು ಸುಳ್ಯದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ...

ಆಸ್ತಿಕ್ ಬಾಳಿಕಳ ಪಾರ್ಥಿವ ಶರೀರ ಇಂದು ಅಪರಾಹ್ನ 2.15ಕ್ಕೆ ಸುಳ್ಯಕ್ಕೆ

ಸಂಜೆ ಮಡಪ್ಪಾಡಿ ಮನೆಯಲ್ಲಿ ಅಂತ್ಯಸಂಸ್ಕಾರ

ಕಣ್ಣೂರಿನ ಗೆಳೆಯನ ಮನೆಗೆ ತೆರಳಿದ್ದ ಆಸ್ತಿಕ್ ಬಾಳಿಕಳ ಕೆರೆ ನೀರಿನಲ್ಲಿ ಈಜಲು ಹೋಗಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದರು.‌ ಇಂದು ಆಸ್ತಿಕ್ ರವರ ಪಾರ್ಥಿವ ಶರೀರ ಅಪರಾಹ್ನ 2.15ಕ್ಕೆ ಸುಳ್ಯಕ್ಕೆ  ತಲುಪಲಿರುವುದಾಗಿ ತಿಳಿದುಬಂದಿದೆ. ನಿವೃತ್ತ ವೈದ್ಯಾಧಿಕಾರಿ ಡಾ| ನಂದಕುಮಾರ್ ಬಾಳಿಕಳ ರವರ ಪುತ್ರ ಆಸ್ತಿಕ್ ರಾಘವ್ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಎ.ಬಿ.ಶೆಟ್ಟಿ ಡೆಂಟಲ್ ಕಾಲೇಜ್ ನಲ್ಲಿ ಪ್ರಥಮ ವರ್ಷದ...

ಎಲ್ಲಾ  ಓಕೆ, ಜಂಕ್ ಪುಡ್ ಯಾಕೆ..?

ಇಂದು ಜಂಕ್ ಫುಡ್ ಜಾಗೃತಿ ದಿನ

✍️ಡಾ| ಮುರಲೀ ಮೋಹನ್ ಚೂಂತಾರು“ಬದುಕುವುದಕ್ಕಾಗಿ ತಿನ್ನಿ, ತಿನ್ನಲಿಕ್ಕಾಗಿ ಬದುಕಬೇಡಿ” ಎಂಬ ಮಾತನ್ನು ಪ್ರಾಯಶಃ ಇಂದಿನ ಕಾಲಘಟ್ಟದಲ್ಲಿ ನಮ್ಮ ಯುವಜನತೆ ಮತ್ತು ಮಕ್ಕಳಿಗೆ ಪುನಃ ನೆನಪಿಸಿಕೊಡಬೇಕಾದ ಅನಿವಾರ್ಯತೆ ಬಂದೊದಗಿದೆ ಎಂಬುದಂತೂ ನೂರಕ್ಕೆ ನೂರರಷ್ಟು ಸತ್ಯ. ನಮ್ಮ ದೇಹದ ದೈಹಿಕ, ಮಾನಸಿಕ ಬೌದ್ಧಿಕ ಮತ್ತು ಸರ್ವತೋಮುಖ ಬೆಳವಣಿಗೆಯಲ್ಲಿ ನಮ್ಮ ಆಹಾರ, ಬಹುಮುಖ್ಯ ಪಾತ್ರ ವಹಿಸುತ್ತದೆ. ಬಹಳಷ್ಟು ರೀತಿಯ ಆಧುನಿಕ...

ಅಂತಾರಾಜ್ಯ ಸಂಪರ್ಕಿಸುವ ಪೆರಾಜೆ ಕೂರ್ನಡ್ಕ ರಸ್ತೆ ಅವ್ಯವಸ್ಥೆ

ಶ್ರಮದಾನದ ಮುಖಾಂತರ ರಸ್ತೆ ದುರಸ್ತಿ ಮಾಡಿದ ನಿವಾಸಿಗಳು

ಅಂತಾರಾಜ್ಯ ಸಂಪರ್ಕಿಸುವ ಕೇರಳ ಗಡಿಭಾಗದ ಸಮೀಪದಲ್ಲಿ ಹಾದುಹೋಗುವ ಪೆರಾಜೆ ಕೂರ್ನಡ್ಕ ರಸ್ತೆ ಕೆಲವೆಡೆ ತೀರ ಹದಗೆಟ್ಟಿದ್ದು ಜನಪ್ರತಿನಿಧಿಗಳು ಹಾಗೂ ಸ್ಥಳೀಯಾಡಳಿತದ ನಿರ್ಲಕ್ಷ್ಯದಿಂದ ಈ ಭಾಗದ ನಿವಾಸಿಗಳು ಸಂಕಷ್ಟ ಅನುಭವಿಸುವಂತಾಗಿದೆ.‌ಇದೀಗ ಗ್ರಾಮಸ್ಥರೇ ಸೇರಿ ಶ್ರಮದಾನ ನಡೆಸಿ ರಸ್ತೆಯನ್ನು ದುರಸ್ತಿ ಮಾಡಿದ್ದಾರೆ.‌ ಶ್ರಮದಾನದಲ್ಲಿ ಚಿದಾನಂದ ಮಾವಾಜಿ, ಸಂದೇಶ್ ಗರುಗುಂಜ, ಜಯಪ್ರಕಾಶ ಹೊದ್ದೆಟ್ಟಿ, ಅನಂತ ಗರುಗುಂಜ, ವಿನಯ ಗರುಗುಂಜ, ಪವಿತ್ರ...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ಪ್ರಮಾಣ ಪತ್ರ ವಿತರಣೆ

ಸಾಧಕ ಶಿಕ್ಷಕಿಯರುಗಳಿಗೆ ಹಾಲ್ ಆಫ್ ಫೇಮ್ ಗೌರವ

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ಪ್ರಮಾಣ ಪತ್ರ ವಿತರಣೆ, ಸಾಧಕ ಶಿಕ್ಷಕಿಯರುಗಳಿಗೆ ಹಾಲ್ ಆಫ್ ಫೇಮ್ 2025 ಅಭಿನಂದನಾ ಕಾರ್ಯಕ್ರಮ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ, ಭಾರತ್ ಸೇವಕ್ ಸಮಾಜದ ಜಿಲ್ಲಾ ಸಂಯೋಜಕ ರಘುಕುಮಾರ್,...

ಮರ್ಕಂಜ : ಸರಕಾರಿ ಪ್ರೌಢಶಾಲೆಯಲ್ಲಿ ಕೋ-ಕೋ ಅಂಕಣ ರಚನೆ

ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಜು.19 ರಂದು ಕೋ-ಕೋ ಅಂಕಣ ರಚನೆಯು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ್.ಎಂ.ಟಿ ರವರ ಮಾರ್ಗದರ್ಶನದಲ್ಲಿ ಶ್ರಮಸೇವೆಯ ಮುಖಾಂತರ ನಡೆಯಿತು.ಶ್ರಮದಾನದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಭೀಮಗುಳಿ, ಸದಸ್ಯರುಗಳಾದ ದಿನಕರ ಕಾಳಮನೆ, ಕುಶಾಲಪ್ಪ ಕಬ್ಬಿನಡ್ಕ, ಹೇಮಕುಮಾರ್ ಕಂಜಿಪಿಲಿ, ಮಹಾವೀರ ಇಂದ್ರ, ಮಾಜಿ ಅಧ್ಯಕ್ಷರಾದ ಆನಂದ ಗೌಡ ಬಾನೂರು, ಮಾಜಿ ಸದಸ್ಯರಾದ ಕಾರ್ಯಪ್ಪ...

ಸುಬ್ರಹ್ಮಣ್ಯ : ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಹಾಗೂ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 20 : ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾ.ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಇವರುಗಳ ಜಂಟಿ ಆಶ್ರಯದಲ್ಲಿ ಇಂದು ಕುಮಾರಧಾರ ಕುಲ್ಕುಂದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.ಕುಮಾರಧಾರ ಸೇತುವೆ ಬದಿಯಿಂದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಮೂಲಕವಾಗಿ ಕುಲ್ಕುಂದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಕಾಲೋನಿ...

ಪಂಜ : ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ವತಿಯಿಂದ ಅರಣ್ಯಾಧಿಕಾರಿ ಸಂತೋಷ್‌ ಕುಮಾರ್ ರೈ ಹಾಗೂ ಶ್ರವಣ ಸ್ವರ ಪ್ರಶಸ್ತಿ ಪಡೆದ ಕು| ರಚನಾ ಚಿದ್ದಲ್ ರಿಗೆ ಗೌರವಾರ್ಪಣೆ

ಪಂಜ ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ವಲಯ ಅರಣ್ಯ ಅಧಿಕಾರಿಗಳಾಗಿ ಭಡ್ತಿಗೊಂಡು ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯದಲ್ಲಿರುವ ಸಂತೋಷ್‌ ಕುಮಾರ್ ರೈ ಯವರಿಗೆ ಮತ್ತು ಶ್ರವಣ ಸ್ವರ ಪ್ರಶಸ್ತಿ ಪಡೆದ ಕು| ರಚನಾ ಚಿದ್ದಲ್ ಇವರಿಗೆ ಗೌರವಾರ್ಪಣೆ ಮತ್ತು ಶ್ರೀ ದುರ್ಗಾಪೂಜೆ ಜು.18 ರಂದು ಪಂಜದ ಶಾರದಾಂಬಾ ಯಕ್ಷಗಾನ...
Loading posts...

All posts loaded

No more posts

error: Content is protected !!