- Sunday
- September 13th, 2026
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ತಾಲೂಕು ಘಟಕದಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನು ಜ್ಞಾನದೀಪ ಶಾಲೆಯಲ್ಲಿ ಜು.14 ರಂದು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಗದಾಧರ್ ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ "ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ" ದ ಮಹತ್ವದ ಕುರಿತು ಮಾತನಾಡಿದರು. ತಾಲೂಕಿನ ಸಂಚಾಲಕರಾದ ನಂದನ್ ಪವಿತ್ರಮಜಲು ಸದಸ್ಯತ್ವದ ಮಹತ್ವವನ್ನು ವಿವರಿಸಿದರು. ಎಬಿವಿಪಿಯ ಸಕ್ರಿಯ...
ಅರಂತೋಡು ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಸುಮಾರು 24 ವರ್ಷ ಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದ ಯೋಗೀಶ್(42) ರವರು ಜು.16 ರಂದು ನಿಧನರಾದರು. ಮೃತರು ತಾಯಿ ಮೀನಾಕ್ಷಿ, ಪತ್ನಿ ಲಲಿತಾ(ರೇಶ್ಮಾ), ಪುತ್ರರಾದ ಧನುಷ್ ಹಾಗೂ ಗೌಶಿಕ್ ರನ್ನು ಅಗಲಿದ್ದಾರೆ.
ನಡುಗಲ್ಲಿನಲ್ಲಿ ನಡೆದ ಭಾಜಪಾ ಗುತ್ತಿಗಾರು ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಮಾವೇಶ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬಾಳುಗೋಡು ಭಾಜಪಾ ಬೂತ್ ಸಮಿತಿಯ ಕಾರ್ಯಕರ್ತರು ಊರಿನ ಕೆಲವು ಬೇಡಿಕೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು.ಬಾಳುಗೋಡಿನ ಶಿಥಿಲಗೊಂಡ ಮುಳುಗು ಸೇತುವೆಯನ್ನು ಮೇಲ್ದರ್ಜೆಗೇರಿಸುವುದು, ಈಗ ಇರುವ BSNL ಟವರ್ ಸರಿಯಾಗಿ ಕಾರ್ಯನಿರ್ವಹಿಸದಿರುವುದರ ಬಗ್ಗೆ, ಬಾಳುಗೋಡು-ಮಿತ್ತಡ್ಕ ರಸ್ತೆ ಹಾಗೂ ಕಾಲು ಸೇತುವೆ ನಿರ್ಮಿಸುವುದು, ಬಾಳುಗೋಡಿನಿಂದ...
ಜು.15 ರಂದು ಗುತ್ತಿಗಾರು ಗ್ರಾಮದ ನಡುಗಲ್ಲಿನಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಕೊಲ್ಲಮೊಗ್ರು ಬಿ.ಜೆ.ಪಿ ಬೂತ್ ಸಮಿತಿಯ ಕಾರ್ಯಕರ್ತರು ಹಾಗೂ ಮುಳ್ಳುಬಾಗಿಲು, ಕಜ್ಜೋಡಿ, ಕರಂಗಲ್ಲು ಹಾಗೂ ಕಟ್ಟ ಭಾಗದ ಜನರು ಈ ಭಾಗದ ನೆಟ್...
ಜು.15 ರಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ನಡುಗಲ್ಲಿಗೆ ಬಂದಿದ್ದು, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಿದ ಸಂಸದರು ನಂತರ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ...
ಕೊಡಿಯಾಲ ಗ್ರಾಮದ ಕುಂಡೀಲಿ ಪ.ಜಾತಿ ಕಾಲೋನಿಯ ದೈವಸ್ಥಾನದ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆಗೆ 2024-2025ನೇ ಸಾಲಿನ ಸಂಸದರ ನಿಧಿಯಿಂದ 2 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕಾಮಗಾರಿಯ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಂಬೆ, ಜಿಲ್ಲಾ ಪ್ರಧಾನ...
"ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ ಯುವಕ ಮಂಡಲದ ಸದಸ್ಯರ ಕಾರ್ಯ ಶ್ಲಾಘನೀಯ" ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಗೋಪಾಲ್ ಅಡ್ಕಾರು ಹೇಳಿದರು. ಅವರು ಜುಲೈ 13ರಂದು ಜಾಲ್ಸೂರು ಗ್ರಾಮ ಪಂಚಾಯತ್ ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು...
https://youtu.be/Ya5A4KGebRg?si=fTSRXDjLaqQxBNqt ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕದಲ್ಲಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಿ ನದಿಯ ಇನ್ನೊಂದು ಭಾಗಕ್ಕೆ ವಿದ್ಯುತ್ ಲೈನ್ ಎಳೆದು ಸಂಪರ್ಕ ಕಲ್ಪಿಸಲಾಗಿದ್ದು, ಹರಿಹರ ಪಳ್ಳತ್ತಡ್ಕದ ಗುಂಡಡ್ಕ ಎಂಬಲ್ಲಿ ಹೊಳೆಯ ಇನ್ನೊಂದು ಬದಿಯ ಸೀತಮ್ಮ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಲೈನ್ ನ ಮೇಲೆ ಮರ ಬಿದ್ದು ವಿದ್ಯುತ್ ಲೈನ್ ತುಂಡಾಗಿ ಅವರ ಮನೆಯ...
ಬೆಂಕಿ ಅವಘಡ ಸಂಭವಿಸಿದ ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಾಫ ರವರು ಜು.14 ರಂದು ಭೇಟಿ ನೀಡಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಘಟನೆ ಬಗ್ಗೆ ವಿವರಿಸಿ ಸುಮಾರು 60ಲಕ್ಷ ನಷ್ಟ...
ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆಯವರ ಅಧ್ಯಕ್ಷತೆಯಲ್ಲಿ ಜು.14 ರಂದು ನಡೆಯಿತು.ಸಭೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ದಿಗಂತ್ ಕಡ್ತಲ್ಕಜೆ, ಕೋಶಾಧಿಕಾರಿ ವೆಂಕಟರಮಣ ಹೊಸೊಳಿಕೆ, ಪ್ರಮುಖರಾದ ವೆಂಕಟ್ ವಳಲಂಬೆ ಹಾಗೂ ವಿವಿಧ ಸಮಿತಿಗಳ...
Loading posts...
All posts loaded
No more posts
