- Monday
- September 14th, 2026
ಬಂಟ್ವಾಳ : “ಸಾಹಿತ್ಯವು ನಿರಂತರ ಸ್ಥಿತ್ಯಂತರಗಳ ಪಯಣವಾಗಿದ್ದು, ಇಲ್ಲಿನ ಸಾಹಿತ್ಯ ಕೇವಲ ಪುಸ್ತಕದಲ್ಲಿ ಉಳಿಯದೆ, ಜನಪದ, ಯಕ್ಷಗಾನದ ಮೂಲಕ ಜನಜೀವನದಲ್ಲಿ ಬೆರೆತುಹೋಗಿದೆ” ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಕುರುಂಜಿ ಹೇಳಿದರು. ಬಂಟ್ವಾಳದಲ್ಲಿ ನಡೆದ ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಸಾಹಿತ್ಯ-ಸಂಸ್ಕೃತಿ ವಿಚಾರಗೋಷ್ಠಿಯಲ್ಲಿ "ಸಾಹಿತ್ಯದ ಸ್ಥಿತ್ಯಂತರಗಳು" ಎಂಬ ವಿಚಾರದ ಕುರಿತು...
ಪೆರುವಾಜೆ : ಸುಳ್ಯ, ಪುತ್ತೂರು, ಕಡಬ ತಾಲೂಕಿನ ಇಪ್ಪತ್ತೆರಡು ಗ್ರಾಮಗಳಿಗೆ ಒಳಪಟ್ಟಿರುವ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಎ.10 ಮತ್ತು 11 ರಂದು ಪ್ರತಿಷ್ಠಾ ವರ್ಧಂತಿ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ, ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮ ನಡೆಸುವ ನಿಟ್ಟಿನಲ್ಲಿ ಭಕ್ತಾದಿಗಳ ಸಭೆಯು...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ಮತ್ತು ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ಮಾ.29 ಹಾಗೂ 30 ರಂದು “ಶ್ರೀ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ”ವು ನಡೆದಿದ್ದು, ಮಾ.29 ರಂದು ರಾತ್ರಿ ಸುದರ್ಶನ ಹೋಮ, ವಾಸ್ತು ಹೋಮ, ಆವಾಹನೆ, ಭಾದಾ ಉಚ್ಚಾಟನೆ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ ಹಾಗೂ ನಾಗದೇವರ ಸಾನಿಧ್ಯದಲ್ಲಿ ಆಶ್ಲೇಷ ಬಲಿ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕರಾದ ಮನೋಜ್ ಕುಮಾರ್ ಬಿ.ಎಸ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರು ವಿ.ವಿಯ 44ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಪದವಿ ಪ್ರಧಾನ ಮಾಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಆಧೀನದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸ್ಮಾರಕ...
“ಸುಂದರ ಸಂಸ್ಕೃತಿಯನ್ನು ಉಳಿಸುವ ರೀತಿಯಲ್ಲಿ ಪೋಷಕರು ಮಕ್ಕಳನ್ನು ಬೆಳೆಸಬೇಕು” ಎಂದು ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಉಡುಪಿ ಇದರ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಶ್ರೀಮತಿ ಹರಿಣಾಕ್ಷಿ ಎಂ.ಡಿ. ಹೇಳಿದರು. ಅವರು ಮಾ.30 ರಂದು ಸುಳ್ಯದ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆದ “ಅಮ್ಮ ಚಿಣ್ಣರ ಮನೆಯಲ್ಲಿ ವಾರ್ಷಿಕೋತ್ಸವ” ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಆಗಮಿಸಿ ಮಾತನಾಡಿದರು. “ಅನ್ಯ...
ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ, ಇದರ ಅಭಿವೃದ್ಧಿ ಮತ್ತು ಸರ್ವತೋಮುಖ ಬೆಳವಣಿಗೆ ಹಾಗೂ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಉದ್ದೇಶ ಮತ್ತು ದೂರದೃಷ್ಠಿಯಲ್ಲಿ ಇಂದು ಶಾಲಾ ಸಭಾ ಭವನದಲ್ಲಿ ಸಮಾಲೋಚನ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಶಾಲಾ ಸಂಸ್ಥಾಪಕ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್, ಅಬ್ದುಲ್ಲಾ ಮಾಸ್ವರ್ (ನಿವೃತ್ತ ಮುಖ್ಯ ಶಿಕ್ಷಕರು, ಅರಂತೋಡು) ದಾಮೋದರ...
ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್-19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ ದಿಲ್ಲಿಯತ್ತ...
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವುಗಳ ಸಹಯೋಗದಲ್ಲಿ ಏ.04 ಶನಿವಾರದಂದು ಗುತ್ತಿಗಾರಿನ ಸಂತೆ ಮಾರುಕಟ್ಟೆಯಲ್ಲಿ ಸ್ವ-ಸಹಾಯ ಸಂಘದ...
ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ ಈಗ ಪ್ರತಿಷ್ಟಿತ ಟಾಟಾ ಕಂಪನಿಯ ಉತ್ಪನ್ನಗಳ ಅದಿಕೃತ ವಿತರಕರು… ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಆಸರೆ ಇಲೆಕ್ಟ್ರಾನಿಕ್ಸ್ ಬ್ರಾಂಡೆಡ್ ವಸ್ತುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು ಇದೀಗ ಪ್ರತಿಷ್ಟಿತ ಟಾಟಾ ಕಂಪನಿಯ ವಸ್ತುಗಳ ಅಧೀಕೃತ ವಿತರಕರಾಗಿದ್ದಾರೆ.. ಇಲ್ಲಿ ಟಾಟಾ ಕಂಪನಿಯ ಎರ್ ಕೂಲರ್, ಟಿವಿ ಪ್ರಿಡ್ಜ್ ವಾಷಿಂಗ್ ಮೆಷಿನ್ ಹಾಗೂ ಎಲ್ಲಾ ಗೃಹಬಳಕೆ ಉಪಕರಣಗಳು ದೊರೆಯುತ್ತದೆ...
ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿಗೆ ತೆರಳುವ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ನಾಗೇಶ್ ಕುಲಾಲ್, ಹಿದಾಯ ಪಬ್ಲಿಕ್ ಸ್ಕೂಲ್ ಶಿಕ್ಷಕಿ...
Loading posts...
All posts loaded
No more posts
