ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಿಂದ 22ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇಂದು(ಫೆ.14) ಶ್ರೀ ದೇವಳದಲ್ಲಿ ಗೊನೆ ಮುಹೂರ್ತ ನೆರವೇರಿತು.ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಸದಸ್ಯರಾದ ದಯಾನಂದ ಕಟ್ಟೆಮನೆ,...

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ – ಫೆ.16 ರಂದು ಪದಗ್ರಹಣ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಘಟನಾ ಚತುರ, ಯುವಕರ ಕಣ್ಮಣಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ  ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ. ರಾಧಾಕೃಷ್ಣ ಬೊಳ್ಳೂರು ಅವರು...
Ad Widget

ಹರಿಹರ ಪಳ್ಳತ್ತಡ್ಕ : ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಹರಿಹರ ಪಳ್ಳತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.12ರಂದು ನಡೆಯಿತು.ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ರವರು ತೆಂಗಿನಕಾಯಿ ಒಡೆಯುವ ಮೂಲಕ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಧರ ಭಾಗವತ್ ರವರು ದೀಪ ಬೆಳಗಿಸುವ ಮೂಲಕ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರವನ್ನು ಉದ್ಘಾಟಿಸಿ...

ಆಡ್ತಲೆ : ಆನೆ ದಾಳಿ ಕೃಷಿ ಹಾನಿ – ಶಾಸಕರ ಭೇಟಿ

ಅರಂತೋಡು ಗ್ರಾಮದ ಅಡ್ತಲೆ ಮತ್ತಿತರ ಭಾಗಗಳಲ್ಲಿ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ, ಕಿರ್ಲಾಯ ಶಾಲೆಯ ಆವರಣಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿಯಾಗಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ, ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯ ಹರೀಶ ಕಂಜಿಪಿಲಿ, ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು, ಬೂತ್...

ಜೆಸಿಐ ಉಡುಪಿ ಸಿಟಿ ವತಿಯಿಂದ ಕೃಷ್ಣ ಅಚ್ರಪ್ಪಾಡಿಯವರಿಗೆ ಸನ್ಮಾನ

ಉಡುಪಿ ಸಿಟಿಯ ಜೆಸಿಐ ವತಿಯಿಂದ ನಡೆದ ಟಾಪ್ ಟ್ರೈನರ್ಸ್ ಟ್ರೈನಿಂಗ್ ನಲ್ಲಿ ಭಾಗವಹಿಸಿದ್ದ ಕೃಷ್ಣ ಅಚ್ರಪ್ಪಾಡಿಯವರ ಸಾಧನೆಯನ್ನು ಗುರುತಿಸಿ ಜ.31 ರಂದು ಸನ್ಮಾನ ಮಾಡಲಾಯಿತು.ಕೃಷ್ಣ ಅಚ್ರಪ್ಪಾಡಿಯವರು ವಿದ್ಯುತ್ ಹರಿಯುವಾಗ  ಬರಿಗೈಯಿಂದ ನೇರವಾಗಿ ಮುಟ್ಟಿದಾಗ ಅವರ ಶರೀರವೆಲ್ಲಾ ವಿದ್ಯುತ್ ಮಯವಾಗುತ್ತದೆ. ಅವರ ಶರೀರದ ಯಾವುದೇ ಭಾಗಕ್ಕೆ ಟೆಸ್ಟರ್ ತಾಗಿಸಿದರೂ ಟೆಸ್ಟರ್ ಉರಿಯುತ್ತದೆ. ಆದರೆ ಇವರಿಗೆ ಏನೂ ಆಗುವುದಿಲ್ಲ(ಹಾಗಂತ...

ಬೆಳ್ಳಾರೆ : ಭಾರತ್ ಕೃಷಿ ಅಭಿವೃದ್ಧಿ
ಸಂಸ್ಥೆ ವತಿಯಿಂದ ಫಲಾನುಭವಿಗಳಿಗೆ ಏಣಿ ವಿತರಣೆ

ಬೆಳ್ಳಾರೆ, ಕೊಡಿಯಾಲ ಹಾಗೂ ಪೆರುವಾಜೆ ಮೂರು ಗ್ರಾಮಗಳ 35 ಮಂದಿ ಫಲಾನುಭವಿ ರೈತರಿಗೆ ಫೆ.11 ರಂದು ವಿಟ್ಲದ ಭಾರತ್ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿರಾಂಬೃತ ಯೋಜನೆಯ ಮೊದಲ ಹಂತದ ಏಣಿಯನ್ನು ವಿತರಿಸಲಾಯಿತು.ಈ ವಿತರಣಾ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು,ಶಪಿಡಿಒ ಹಾಗೂ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಫಲಾನುಭವಿ ರೈತರು ಪಾಲ್ಗೊಂಡಿದ್ದರು.

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಮುಖ್ಯಮಂತ್ರಿ ವಿಶೇಷ ಅನುದಾನದ ರಸ್ತೆಗಳ ಉದ್ಘಾಟನೆ
ಸವಲತ್ತುಗಳ ವಿತರಣೆ ; “ಸಂಪಾಜೆ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ” :ಎಂ.ಎ ಗಫೂರ್

"ಗ್ರಾಮಗಳ ಅಭಿವೃದ್ಧಿಯಿಂದ ನಿಜವಾದ ರಾಮ ಸ್ವರಾಜ್ಯ ಮೂಲಕ ಗಾಂಧೀಜಿಯ ಕನಸನ್ನು ನನಸು ಮಾಡಿ ಸಂಪಾಜೆ ಗ್ರಾಮ ಪಂಚಾಯತ್ ದೇಶಕ್ಕೆ ಮಾದರಿಯಾಗಿದೆ" ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ರವರ ವಿಶೇಷ ಮುತುವರ್ಜಿಯಿಂದ ಮುಖ್ಯ...

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.12ರಂದು ನಡೆಯಿತು.ಆಮಂತ್ರಣ ಪತ್ರಿಕೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನವರು ಉಪಸ್ಥಿತರಿದ್ದರು.

ಬೆಳ್ಳಾರೆ ಗ್ರಾ.ಪಂ.ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಭೇಟಿ ನೀಡಿದ ಕೆ.ಪಿ.ಎಸ್ ವಿದ್ಯಾರ್ಥಿಗಳು

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ-ಗ್ರಂಥಾಲಯದಲ್ಲಿ ಫೆ.10 ರಂದು "ಶಾಲಾ ವಿದ್ಯಾರ್ಥಿಗಳು ಒಂದು ದಿನ" ಕಾರ್ಯಕ್ರಮ ನಡೆಯಿತು.  ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಖುಷಿಪಟ್ಟರು.‌ಈ ಸಂದರ್ಭದಲ್ಲಿ ಸಹಶಿಕ್ಷಕರುಗಳಾದ ಅರುಣಾಕ್ಷಿ ಕೆ.ಎಲ್, ಸುಶೀಲ ಹೆಗಡೆ, ಇಳಶ್ರೀ ಸಿ.ಜಿ, ತೃಪ್ತಿ ಎಂ.ಎಂ ಉಪಸ್ಥಿತರಿದ್ದರು.ಗ್ರಂಥಾಪಾಲಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ ವಂದಿಸಿದರು.

ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾದಿಂದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಸುಳ್ಯ ಭಾಗದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಯ ವ್ಯವಸ್ಥೆಗಳ ಮತ್ತು ಬೇಡಿಕೆಗಳ ಬಗ್ಗೆ ಗಮನಿಸಲಾಯಿತು. ಹೊಸ ಕಟ್ಟಡದ ಬೇಡಿಕೆಯಿದ್ದು, ಶಾಸಕರ ಜೊತೆ ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವ ಭರವಸೆ ನೀಡಿದರು.ಈ...
Loading posts...

All posts loaded

No more posts

error: Content is protected !!