- Saturday
- March 7th, 2026
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಗೆ ಜಿಲ್ಲಾ ಗವರ್ನರ್ ರೊ.ರಾಮಕೃಷ್ಣ ಪಿ.ಕೆ.ಯವರು ಫೆ.24 ರಂದು ಭೇಟಿ ನೀಡಿದರು. ರಾತ್ರಿ ಬೆಳ್ಳಾರೆಯ ದೇವಿ ಹೈಟ್ಸ್ ಸಭಾಂಗಣದಲ್ಲಿ ಸಭಾಕಾರ್ಯಕ್ರಮ ನಡೆಯಿತು. ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ವಿಶ್ವನಾಥ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ವೀರನಾಥ್ ವರದಿ ಮಂಡಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಇಬ್ಬರಿಗೆ ಸನ್ಮಾನ ನಡೆಯಿತು....
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಫೆ. 26 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ1- ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಆಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಫೆ.28 ಶನಿವಾರದಂದು ಪೂರ್ವಾಹ್ನ 10:30ಕ್ಕೆ ಯೇನೆಕಲ್ಲು ಸಂತೃಪ್ತಿ ಸಭಾಭವನದಲ್ಲಿ “ಅಡಿಕೆ ಕೃಷಿ ನಿರ್ವಹಣೆ - ರೋಗ ನಿವಾರಣೆ ಮಾಹಿತಿ ಕಾರ್ಯಕ್ರಮ” ನಡೆಯಲಿದ್ದು, ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಭವಾನಿಶಂಕರ ಪೂಂಬಾಡಿ ಕಾರ್ಯಕ್ರಮವನ್ನು...
ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಕನಕಪುರ ಐವರ್ನಾಡು ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 29, 30 ಹಾಗೂ ಮೇ.01 ರಂದು ನಡೆಯಲಿದೆ. ಬ್ರಹ್ಮಕಲಶೋತ್ಸವದ ಸಮಿತಿ ರಚನೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಸೆಲ್ವಕುಮಾರ್, ಅಧ್ಯಕ್ಷರಾಗಿ ಮುತ್ತುಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಕನ್ನದಾಸನ್ ಆಯ್ಕೆಯಾದರು. ಸದಸ್ಯರುಗಳಾಗಿ ಪೆರುಮಾಳ್, ವಿಜಯರಾಜ್, ರಾಮಸ್ವಾಮಿ, ಅಲಗರಾಜ್, ಜ್ಞಾನಶೇಖರ, ಗುಣಶೇಖರ, ಪದ್ಮನಾಭ ಆಯ್ಕೆಯಾಗಿದ್ದಾರೆ.
ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ” ಫೆ.24ರಂದು ಕಾಲೇಜಿನ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ಮಾತನಾಡುತ್ತಾ, “ಭಾಷೆಗಳು ಉಳಿಯಬೇಕಾದರೆ...
ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 8ನೇ ತರಗತಿ ವಿದ್ಯಾರ್ಥಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಮಾದರಿ ಗ್ರಾಮ ಪಂಚಾಯತ್ ರಾಜ್ಯದ ಆರು ಮಾದರಿ ಗ್ರಾಮ ಪಂಚಾಯತ್ ಗಳಲ್ಲಿ ಒಂದಾಗಿರುವ ಸುಳ್ಯ ತಾಲೂಕಿನ ಏಕೈಕ ಪಂಚಾಯತ್ ಎಂದು ಹೆಗ್ಗಳಿಕೆ ಗಳಿಸಿರುವ ಅರಂತೋಡು ಗ್ರಾಮ ಪಂಚಾಯತ್ ಗೆ ಅಧ್ಯಯನ ನಡೆಸಲು ಮತ್ತು ಮಾಹಿತಿ...
ಅರಂತೋಡು ಗ್ರಾಮದ ಅಡ್ತಲೆ, ಕಿರ್ಲಾಯ, ಬೆದ್ರುಪಣೆ ಭಾಗದಲ್ಲಿ ನಿರಂತರ ಕೃಷಿ ತೋಟಗಳಿಗೆ ದಾಳಿ ಮಾಡಿ ಹಾನಿ ಮಾಡುತ್ತಿದ್ದ ಆನೆಗಳ ಹಿಂಡು ಕೆಲ ದಿನಗಳಿಂದ ಮಡಪ್ಪಾಡಿ ಕಡೆಗೆ ಆಗಮಿಸಿವೆ. ಮಡಪ್ಪಾಡಿ ಗ್ರಾಮದ ದಿನೇಶ್ ಮಡಪ್ಪಾಡಿ ಅವರ ತೋಟಕ್ಕೆ ಫೆ.24 ರಂದು ರಾತ್ರಿ ಏಳು ಆನೆಗಳಿರುವ ಹಿಂಡು ದಾಳಿ ನಡೆಸಿ ಕೃಷಿ ಹಾನಿ ಮಾಡಿದೆ. ತೋಟದಲ್ಲಿ ಡೀಸಿಲ್ ಪಂಪನ್ನು...
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಕೆ.ಎಸ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೆಡ್ ಕ್ರಾಸ್ ಯೂನಿಟ್, ರೋವರ್ಸ್ ಅಂಡ್ ರೇಂಜರ್ಸ್ ಯೂನಿಟ್ ಹಾಗೂ ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್ ಇವುಗಳ ಜಂಟಿ ಆಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಲಿದ್ದು,...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಯೆನೆಪೋಯ(ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ...
ಸುಳ್ಯದ ಬೊಳುಬೈಲಿನಲ್ಲಿ ಫೆ.21 ರಂದು ನಡೆದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ ಕುಕ್ಕೆಶ್ರೀ ವಸಂತ್ ರವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಫೆ. 23 ರ ರಾತ್ರಿ ನಿಧನರಾದ ಘಟನೆ ನಡೆದಿದೆ. ಕುಕ್ಕೆಶ್ರೀ ವಸಂತ್ ಅವರು ಕುಟುಂಬದೊಂದಿಗೆ ಮಡಂತ್ಯಾರಿಗೆ ಹೊರಟಿದ್ದ ವೇಳೆ ಬೊಳುಬೈಲಿನಲ್ಲಿ ಅವರ ಕಾರಿಗೆ ಹಿಂಬದಿಯಿಂದ ಅತೀ ವೇಗವಾಗಿ ಬಂದ ಕಾರಿಗೆ ಢಿಕ್ಕಿಯಾಯಿತು. ಪರಿಣಾಮ...
Loading posts...
All posts loaded
No more posts
