- Tuesday
- June 16th, 2026
ಇತಿಹಾಸ ಪ್ರಸಿದ್ಧ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.08, 9 ಹಾಗೂ 10 ರಂದು ನಡೆಯಲಿದ್ದು, ಫೆ.02 ರಂದು ಗೊನೆಮುಹೂರ್ತ ನಡೆಯಿತು.ದೇವಸ್ಥಾನದ ಅರ್ಚಕರಾದ ರಾಮಚಂದ್ರ ಪಿ.ಜಿ.ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವೈದಿಕ ಮುಖ್ಯಸ್ಥರಾದ ರಾಜಾರಾಮ ರಾವ್ ಉದ್ದಂಪಾಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್ ಭಟ್ ಬಾಂಜಿಕೋಡಿ, ಸದಸ್ಯರಾದ ಶಿವರಾಮ ನೆಕ್ರೆಪ್ಪಾಡಿ, ಮುರಳೀಧರ ಕೊಚ್ಚಿ,...
ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.31 ರಂದು ಶ್ರೀ ಗುಳಿಗರಾಜ ದೈವದ ವಾರ್ಷಿಕ ನೇಮೋತ್ಸವವು ನಡೆಯಿತು.ಬೆಳಿಗ್ಗೆ ಗಣಹೋಮ, ಭಂಡಾರ ಹೊರಡುವುದು, ಶಿವಪೂಜೆ, ಬ್ರಹ್ಮ ರಾಕ್ಷಸ ಪೂಜೆ ಹಾಗೂ ಕಲಶ ಪೂಜೆ ನಡೆದು ಮದ್ಯಾಹ್ನ ಮಹಾಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು.ನಂತರ ಸಂಜೆ ದೀಪಾರಾಧನೆ, ಮಹಾತಂಬಿಲ ಹಾಗೂ ಅನ್ನಸಂತರ್ಪಣೆ ನಡೆದು ರಾತ್ರಿ ಯಕ್ಷಮಣಿ ಗಿರೀಶ್...
ಯಕ್ಷ ಮಿತ್ರರು ಪಂಜ ಇದರ ಆಶ್ರಯದಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಸಹಯೋಗದೊಂದಿಗೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ದ್ವಜಾರೋಹನದ ಅಂಗವಾಗಿ ಸಶಿಹಿತ್ಲು ಶ್ರೀ ಭಗವತೀ ಪ್ರಸಾದಿತ ಯಕ್ಷಗಾನ ಮಂಡಳಿ ಸಶಿಹಿತ್ಲು ಮಂಗಳೂರು ಇವರಿಂದ ಬಂಟಮಲೆ ಭಾರ್ಗವಿ ಎಂಬ ತುಳು ಯಕ್ಷಗಾನ ಪದರ್ಶನಗೊಂಡಿತು. ಈ ಸಂದರ್ಭದಲ್ಲಿ ಪಂಜ ಶ್ರೀ...
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಫೆ.15 ಆದಿತ್ಯವಾರ ಹಾಗೂ ಫೆ.16 ಸೋಮವಾರದಂದು “ಮಹಾ ಶಿವರಾತ್ರಿ ಉತ್ಸವ” ಹಾಗೂ “ಆಹೋರಾತ್ರಿ ಭಜನಾ ಸೇವೆ, ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ, ಶ್ರೀ ರಂಗಪೂಜೆ, ನಾಲ್ಕು ಯಾಮಗಳಲ್ಲಿ ಶಿವ ಕಲ್ಪೋಕ್ತ ಪೂಜೆ” ನಡೆಯಲಿದ್ದು, ಫೆ.15 ರಂದು ಬೆಳಿಗ್ಗೆ 6:00 ಗಂಟೆಗೆ ದೀಪಾರಾಧನೆಯೊಂದಿಗೆ ಅಹೋರಾತ್ರಿ ಭಜನಾ...
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಯಮನೂರಪ್ಪ ಸಿದ್ಧಪ್ಪ ಹರಗಿ(ವೈ.ಎಸ್ ಹರಗಿ) ರವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಮೂಲತಃ ಮೈಸೂರು ಜಿಲ್ಲೆಯವರಾದ ಇವರು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದಾರೆ.
ಬೆಳ್ಳಾರೆ ಮಂಡಲದ ಬೆಳ್ಳಾರೆ ಪೆರುವಾಜೆ, ಕೊಡಿಯಾಲ ಗ್ರಾಮದವತಿಯಿಂದ ಹಿಂದೂ ಸಮಾಜದ ಏಕತೆ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಹಾಗೂ ರಾಷ್ಟ್ರೀಯ ಪ್ರಜ್ಞೆಯನ್ನು ಬಲಪಡಿಸುವ ಉದ್ದೇಶದಿಂದ ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆಯು ಫೆ.1 ರಂದು ಬೆಳ್ಳಾರೆಯ ಮಾಸ್ತಿಕಟ್ಟೆಯಿಂದ ನಡೆಯಿತು.ಶೋಭಾಯಾತ್ರೆಯ ಬಳಿಕ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಸಭಾ ಕಾರ್ಯಕ್ರಮ ಜರುಗಿತು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು...
ನವದೆಹಲಿ : “ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್” ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ...
ಪಂಜ ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಜ.31 ರಂದು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಸಂಜೆ ಪಂಜ ಶಿವಳ್ಳಿ ವಲಯದ ಮಹಿಳಾ ಸದಸ್ಯರಿಂದ ಭಜನಾ ಸಂಕೀರ್ತನೆ, ಶ್ರೀ ಚಾಮುಂಡೇಶ್ವರಿ ಕುಣಿತ ಭಜನಾ ತಂಡ ಪಲ್ಲೋಡಿ ರವರಿಂದ ಕುಣಿತ ಭಜನೆ, ರಾತ್ರಿ ಶ್ರೀ...
ಸುಬ್ರಹ್ಮಣ್ಯ ಫೆಬ್ರವರಿ 01 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಶದಾದ್ಯಂತ ವಿವಿಧ ಭಾಗಗಳಿಂದ ಸಾವಿರಾರು ಜನರು ದಿನಂಪ್ರತಿ ಆಗಮಿಸುತ್ತಿದ್ದಾರೆ. ಅದರೊಂದಿಗೆ ರಸ್ತೆಗಳ ಇಕ್ಕೆಲೆಗಳಲ್ಲಿ, ನಿರ್ಜನ ಪ್ರದೇಶಗಳಲ್ಲಿ ವಿವಿಧ ವಾಹನಗಳಲ್ಲಿ ಬರತಕ್ಕಂತಹ ಪ್ರಯಾಣಿಕರು ಎಲ್ಲಿಂದರಲ್ಲಿ ಕಸ, ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ತಟ್ಟೆಗಳನ್ನು ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಹಾಕಿ ಪರಿಸರವನ್ನ ಮಲಿನ ಮಾಡುವಂತದ್ದು ಸರ್ವೇಸಾಮಾನ್ಯವಾಗಿದೆ. ಹಾಗೆಯೇ...
ಸುಳ್ಯ : “ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ದೊರಕಿಸಿಕೊಡುವುದೇ ಕಲೆ ಮತ್ತು ಸಾಹಿತ್ಯದ ಮೂಲ ಧ್ಯೇಯ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ಸ್ವಸ್ಥ ಸಮಾಜ ಕಟ್ಟಲು ಸಾಧ್ಯವಿಲ್ಲ” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಸುಳ್ಯ ಪ್ರೆಸ್ ಕ್ಲಬ್, ಕಾರ್ಯನಿರತ...
Loading posts...
All posts loaded
No more posts
