ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

ಪುತ್ತೂರು : ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ. 24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ್ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಭೇಟಿ

ಸುಬ್ರಹ್ಮಣ್ಯ ಜನವರಿ 27 : ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜ.27ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವಿದ್ವತ್ ಸಮ್ಮೇಳನ ವಿಶ್ವ ಸಂಭ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಈ ಸಂದರ್ಭದಲ್ಲಿ ಶ್ರೀ...
Ad Widget

ಪಂಜ ಶಾಲೆಯಲ್ಲಿ ಮಕ್ಕಳೊಂದಿಗೆ ಎಸ್.ಐ ಸಂವಾದ ಕಾರ್ಯಕ್ರಮ

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಬ್ರಹ್ಮಣ್ಯ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಜ.27ರಂದು ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು. ಮಧ್ಯಾಹ್ನ ಶಾಲೆಗೆ ಭೇಟಿ ನೀಡಿದ ಪೊಲೀಸ್ ಉಪನಿರೀಕ್ಷಕರನ್ನು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಬರಮಾಡಿಕೊಂಡರು. ನಂತರ ಕ್ಲಾಸ್ ರೂಮ್‌ಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು. ಮಕ್ಕಳ...

ಸುಳ್ಯ : ಮತ್ತೆ ಕೈಕೊಟ್ಟ ವಿದ್ಯುತ್

ಇಂದು ಸುಳ್ಯ ಭಾಗದಲ್ಲಿ ಇಂದು ಹಗಲಿನ ವೇಳೆ ವಿದ್ಯುತ್ ಲೈನ್ ನಿರ್ವಹಣಾ ಕಾರ್ಯಕ್ಕೆ ಮೆಸ್ಕಾಂ ವಿದ್ಯುತ್ ಕಡಿತ ಮಾಡಿತ್ತು. ನಿರ್ವಹಣಾ ಕೆಲಸ ಮುಗಿದು ಸಂಜೆ ವಿದ್ಯುತ್ ಆಗಮಿಸಿತ್ತಾದರೂ ಕೆಲ ಹೊತ್ತಿನಲ್ಲಿ ಮತ್ತೆ ಕೈ ಕೊಟ್ಟಿದೆ. ಬೀರಮಂಗಲ ಸಮೀಪ 33 ಕೆ.ವಿ ಲೈನ್ ನ ವೈರ್ ಕಟ್ ಆಗಿದ್ದು 8:30 ವೇಳೆಗೆ ದುರಸ್ತಿ ಕಾರ್ಯ ನಡೆದು ವಿದ್ಯುತ್...

ಸುಬ್ರಹ್ಮಣ್ಯ : ಜ.29ರಂದು ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಮೆಸ್ಕಾಂ ಜನಸಂಪರ್ಕ ಸಭೆ

ಜ.29ನೇ ಗುರುವಾರದಂದು ಪೂರ್ವಾಹ್ನ 11:00 ಗಂಟೆಯಿಂದ 12:00 ಗಂಟೆಯವರೆಗೆ ಮೆಸ್ಕಾಂ ಮಂಗಳೂರು ಕಾರ್ಯ ಮತ್ತು ಪಾಲನಾ ವೃತ್ತದ ಮಾನ್ಯ ಅಧೀಕ್ಷಕ ಎಂಜಿನಿಯರ್(ವಿ) ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ಮೆಸ್ಕಾಂ ಸುಬ್ರಹ್ಮಣ್ಯ ಉಪವಿಭಾಗ ಕಛೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಖುದ್ದಾಗಿ ಅಥವಾ 08257-200699 ಮೂಲಕ ಸಲ್ಲಿಸಬಹುದು ಎಂದು...

ಸುಳ್ಯ ಸಂತ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಜ.26 ರಂದು ನಡೆಯಿತು. ಧ್ವಜಾರೋಹಣವನ್ನು ನಿವೃತ ಸಿ‌.ಆರ್.ಪಿ.ಎಫ್ ಯೋಧರಾದ  ವಿದ್ಯಾಧರ.ಎನ್ ಪಟ್ಟೆ ಇವರು ನೆರವೇರಿಸಿ ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು. ವೇದಿಕೆಯಲ್ಲಿ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲಾ ಉಪಾಧ್ಯಕ್ಷರಾದ ಪ್ರವೀಣ್ ಜಯನಗರ ಉಪಸ್ಥಿತರಿದ್ದು, ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ  ಶಾಲಾ ಸ್ಕೌಟ್ಸ್ ತಂಡ ರಾಜ್ಯಮಟ್ಟದ...

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ “ರಿಪಬ್ಲಿಕ್ ಸೇಲ್” ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ.ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಚಾರ್ಜಸ್‌ನ ಮೇಲೆ ವಿಶೇಷ ರಿಯಾಯಿತಿ ದರವು...

ಬೆಳ್ಳಾರೆಯಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಶಾಖೆ ಉದ್ಘಾಟನೆ

ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಶಾಖೆಯು ಬೆಳ್ಳಾರೆಯ ಮುಖ್ಯರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿ ಜ 26 ರಂದು ಉದ್ಘಾಟನೆಗೊಂಡಿತು‌.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು.ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಶುಭ ಹಾರೈಸಿದರು.ಉದ್ಘಾಟನಾ ಸಮಾರಂಭದಲ್ಲಿ ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...

ಕೊಲ್ಲಮೊಗ್ರು : ಪುರುಷ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿ ಎಂಬಲ್ಲಿ ಜ.27ರಂದು ಪುರುಷ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು.ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶ್ರೀ ದೈವದ ಗಂಧ-ಪ್ರಸಾದ ಸ್ವೀಕರಿಸಿದರು. ನಂತರ ಅನ್ನಸಂತರ್ಪಣೆ ನಡೆಯಿತು.

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.24ರಿಂದ ಫೆ.09 ರವರೆಗೆ ವರ್ಷಾವಧಿ ಜಾತ್ರೋತ್ಸವ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.24ರಿಂದ ಫೆ.09 ರವರೆಗೆ ವರ್ಷಾವಧಿ ಜಾತ್ರೋತ್ಸವ ನಡೆಯುತ್ತಿದ್ದು, ಜ.24ರಂದು ಗೊನೆ ಮುಹೂರ್ತ ನೆರವೇರಿತು.ಫೆ.01ರಂದು ಪೂರ್ವಾಹ್ನ 9:00 ರಿಂದ ವೇದ ಪಾರಾಯಣ ಆರಂಭ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆದು ಸಂಜೆ 6:00 ಗಂಟೆಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಂಜೆ 7:00 ಗಂಟೆಗೆ ಧ್ವಜಾರೋಹಣ, ಮಹಾಪೂಜೆ...
Loading posts...

All posts loaded

No more posts

error: Content is protected !!