ಸೇವಾಜೆ : ಅಂಗನವಾಡಿ ಕೇಂದ್ರಕ್ಕೆ ಮೈಕ್ರೋಫೋನ್ ಕೊಡುಗೆ

ದೇವಚಳ್ಳ ಗ್ರಾಮದ ಸೇವಾಜೆ ಅಂಗನವಾಡಿ ಕೇಂದ್ರದ ಮಕ್ಕಳ ಉಪಯೋಗಕ್ಕಾಗಿ ಎಲ್‌.ಐ.ಸಿ ಏಜೆಂಟ್ ಪದ್ಮನಾಭ ಶೆಟ್ಟಿ ಅವರು ಮೈಕ್ರೋಫೋನ್ ಅನ್ನು ಕೊಡುಗೆಯಾಗಿ ನೀಡಿದರು. ಮಕ್ಕಳ ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಕಾರಿಯಾಗುವ ಈ ಕೊಡುಗೆಯನ್ನು ಅಂಗನವಾಡಿ ಕೇಂದ್ರ ಆತ್ಮೀಯವಾಗಿ ಸ್ವೀಕರಿಸಿದೆ.ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಅವರು ಪದ್ಮನಾಭ ಶೆಟ್ಟಿ ಅವರ ಸಾಮಾಜಿಕ ಸೇವಾಭಾವಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು...

ಬೆಳ್ಳಾರೆ : ಫುಟ್ ಪಾತ್ ಅವ್ಯವಸ್ಥೆ – ಸಾರ್ವಜನಿಕರಿಗೆ ಸಂಕಷ್ಟ ; ಸ್ಥಳೀಯಾಡಳಿತ ಎಚ್ಚೆತ್ತು ಗಮನಹರಿಸಿ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚರಂಡಿ ಮೇಲೆ ಹಾಸಿರುವ ಸಿಮೆಂಟ್ ಸ್ಲಾಬ್ ಗಳು ಸಮರ್ಪಕವಾದ ರೀತಿಯಲ್ಲಿ ಇಲ್ಲದೇ ಸಾರ್ವಜನಿಕರು ನಡೆದಾಡುವ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಮಕ್ಕಳು ಸೇರಿದಂತೆ ಹಲವರ ಕಾಲು ಸಿಲುಕಿ ಬಿದ್ದಿರುವ ಘಟನೆಗಳು ನಡೆದಿವೆ ಎಂದು ತಿಳಿದುಬಂದಿದ್ದು, ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತು ಗಮನಹರಿಸಿ ಈ ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
Ad Widget

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಿ-ಸಂಭ್ರಮದಿಂದ ನಡೆದ ಕಿರುಷಷ್ಠಿ ರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯನಿಗೆ ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿಯ ದಿನವಾದ ಶುಕ್ರವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ...

ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜು ವತಿಯಿಂದ “ಎಜೆ ಮ್ಯಾರಥಾನ್” ; “ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದು ಕೆವಿಜಿಯವರಿಗೆ ಸಂದ ಗೌರವ” : ಡಾ. ರೇಣುಕಾಪ್ರಸಾದ್ ಕೆ.ವಿ

ಸುಳ್ಯದ ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆಯು ಸುಳ್ಯದ ಪ್ರಮುಖ ರಸ್ತೆಯಲ್ಲಿ ಡಿ.26ರಂದು  ನಡೆಯಿತು.ಕಾಲೇಜಿನ ದಶಮಾನೋತ್ಸವದ ಪೂರ್ವಭಾವಿಯಾಗಿ ಕಾಲೇಜು ಸ್ಥಾಪಕರಾದ ಡಾ.ಕುರುಂಜಿ ವೆಂಕಟರಮಣ ಗೌಡರ 97ನೇ ಜನ್ಮದಿನಾಚರಣೆಯ ಪ್ರಯುಕ್ತ  "ಆರೋಗ್ಯಕ್ಕಾಗಿ ಓಟ" ಎಂಬ ಮ್ಯಾರಥಾನ್ ಗೆ ಎ.ಒ.ಎಲ್.ಇ ಕಮಿಟಿ 'ಬಿ' ಅಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ...

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ; “ಕ್ರೀಡೆ ದೈಹಿಕ  ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ” : ಟಿ.ಎಂ ಶಹೀದ್

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಜರುಗಿತು.ಕ್ರೀಡಾಕೂಟದ ಉದ್ಘಾಟನೆ ಯಯನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಉದ್ಘಾಟಿಸಿ ಕ್ರೀಡಾಳುಗಳ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿದ ಟಿ.ಎಂ. ಶಹೀದ್ ರವರು ಮಾತನಾಡಿ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆ ಮಾನಸಿಕ ಮತ್ತು ದೈಹಿಕ ಕ್ಷಮತೆಗೆ  ಸಹಕಾರಿ” ಎಂದರು. ಅನ್ಸಾರಿಯಾ...

ಇತ್ತೀಚೆಗೆ ನಿಧನರಾದ ಗಣೇಶ್ ನಾಯರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಗಣೇಶ್ ನಾಯರ್ ರವರಿಗೆ ಪರಿವಾರ ಸಂಘಟನೆಗಳ ಕಾರ್ಯಕರ್ತರ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜರಂಗದಳ, ಜಾಗರಣ ವೇದಿಕೆ ಮೂಲಕ ಅವರು ಮಾಡಿದ ಸಾಮಾಜಿಕ ಕಾರ್ಯಗಳನ್ನು ನೆನಪಿಸಿಕೊಂಡು, “ಅವರ ಕುಟುಂಬಕ್ಕೆ ಹಿಂದೂ ಸಮಾಜ ಬೆಂಬಲವಾಗಿ...

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಸಹಾಯಾನುದಾನದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ; “ಡಾ. ಕುರುಂಜಿಯವರ ನೆನಪು ಬಡವರ ಸೇವೆಯ ಮೂಲಕ ಅರ್ಥಪೂರ್ಣ” : ಜಯಪ್ರಕಾಶ್ ರೈ

ಡಾ. ಕುರುಂಜಿ ವೆಂಕಟ್ರಮಣ ಗೌಡರ 97ನೇ ಜಯಂತ್ಯೋತ್ಸವದ  ಅಂಗವಾಗಿ ಸಮಾಜ ಸೇವಾ ಕಾರ್ಯ ವಿಭಾಗದಲ್ಲಿ ಜಟ್ಟಿಪ್ಪಳ್ಳ ನಿವಾಸಿ ಕಮಲ ರವರಿಗೆ ಮನೆ ನಿರ್ಮಾಣ ಪೂರ್ತಿಗೊಳಿಸಲು ರೂ 1 ಲಕ್ಷ ಸಹಾಯಾನುದಾನ  ನೀಡಲಾಗಿದ್ದು, ಪೂರ್ಣ ಗೊಂಡ ಮನೆಯನ್ನು ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷರಾದ ಎನ್.ಜಯಪ್ರಕಾಶ್ ರೈ ನಾಮಫಲಕ ಅನಾವರಣಗೊಳಿಸಿ ಲೋಕಾರ್ಪಣೆ ಗೊಳಿಸಿದರು. ಹಿರಿಯರಾದ...

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟು ಹಬ್ಬದ ಅಂಗವಾಗಿ  ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಡಿ.25 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆಯ ಅಂಗವಾಗಿ ಸುಳ್ಯದ ಅಟಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ, ವಿಕ್ರಂ ಅಡ್ಪಂಗಾಯ, ಸುಭೋದ್ ಶೆಟ್ಟಿ ಮೇನಾಲ,...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 30,000ಕ್ಕೂ ಅಧಿಕ ಭಕ್ತಾದಿಗಳಿಂದ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕಾರ

ಸುಬ್ರಹ್ಮಣ್ಯ ಡಿಸೆಂಬರ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ  ಮಹೋತ್ಸವದ ಶುಕ್ರವಾರದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದು, ಅಂದಾಜು ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕರಿಸಿದ್ದಾರೆ. ದೂರದ ಊರುಗಳಾದ ಬೆಂಗಳೂರು, ಮೈಸೂರು, ಕೋಲಾರ, ದೊಡ್ಡಬಳ್ಳಾಪುರ, ಕಾರವಾರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡ,...

ಕುಕ್ಕೆ ಸುಬ್ರಹ್ಮಣ್ಯ : 58 ಭಕ್ತಾದಿಗಳಿಂದ ಎಡೆ ಸ್ನಾನ ಉರುಳು ಸೇವೆ

ಸುಬ್ರಹ್ಮಣ್ಯ ಡಿಸೆಂಬರ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಇಂದು ಡಿ.26 ಶುಕ್ರವಾರದಂದು ದೇವಳದ ಹೊರಾಂಗಣದಲ್ಲಿ ನಡೆದ ಎಡೆ ಸ್ನಾನ ಉರುಳು ಸೇವೆಯಲ್ಲಿ 32 ಪುರುಷರು ಹಾಗೂ 26 ಮಹಿಳೆಯರನ್ನು ಒಳಗೊಂಡಂತೆ 58 ಹರಕೆ ಹೊತ್ತ ಮತ್ತು ಹರಕೆ ಸಲ್ಲಿಸುವ  ಭಕ್ತಾದಿಗಳು ಎಡೆಸ್ನಾನ  ಉರುಳು ಸೇವೆ ಸಲ್ಲಿಸಿದರು. ಚಂಪಾಷಷ್ಠಿ ಜಾತ್ರೋತ್ಸವದಲ್ಲಿ...
Loading posts...

All posts loaded

No more posts

error: Content is protected !!