ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ವಾಹನ ದಟ್ಟಣೆ

ಸುಬ್ರಹ್ಮಣ್ಯ ಮೇ 10 : ರಾಜ್ಯದ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜಾ ಹಿನ್ನೆಲೆಯಲ್ಲಿ ರವಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಹನ ದಟ್ಟನೆಯೊಂದಿಗೆ ಭಕ್ತ ಸಮೂಹವೇ ಕ್ಷೇತ್ರಕ್ಕೆ ಆಗಮಿಸಿತ್ತು. ರಾಜ್ಯದ ವಿವಿಧ ಮೂಲಗಳಿಂದ ಆಗಮಿಸಿದ ಭಕ್ತಾದಿಗಳನ್ನು ಹೊತ್ತ ವಾಹನಗಳು ಕಾಶಿ ಕಟ್ಟೆಯಿಂದಲೇ ನಿಧಾನವಾಗಿ ಚಲಿಸಿ ಕುಕ್ಕೆ ರಥಬೀದಿಯ ಸರ್ಕಲ್ ನಿಂದ ಅಲ್ಲಲ್ಲಿ ಪಾರ್ಕಿಂಗ್ ಪ್ರದೇಶಗಳಿಗೆ ತೆರಳಿದವು. ಕ್ಷೇತ್ರದಲ್ಲಿರುವ ಎಲ್ಲಾ ಪಾರ್ಕಿಂಗ್...

ಸುಬ್ರಹ್ಮಣ್ಯದಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಗ್ರಾಮ ಸಮಿತಿ ಮಹಾ ಅಭಿಯಾನ

ಸುಬ್ರಹ್ಮಣ್ಯ ಮೇ 10 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಗೌಡ ಸಮುದಾಯ ಭವನದ ನಿರ್ಮಾಣಕ್ಕಾಗಿ ಮಾಹಿತಿ ನೀಡಿ ಧನ ಸಂಗ್ರಹಿಸುವ ಎರಡನೆಯ ಹಂತದ ಬೃಹತ್ ಅಭಿಯಾನ ಸುಬ್ರಹ್ಮಣ್ಯದಲ್ಲಿ ಶನಿವಾರ ಜರಗಿತು. ಕಡಬ ತಾಲೂಕಿನ 42 ಗ್ರಾಮಗಳಲ್ಲಿ ಈಗಾಗಲೇ ಮೊದಲ ಹಂತದ ಅಭಿಯಾನ ಪೂರ್ತಿಗೊಂಡು ಎರಡನೇ ಹಂತದ...
Ad Widget

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರದಿಂದ ಶನಿವಾರದ ವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಒಂದು ಸಮಗ್ರ ನೋಟ ; ಈ ವಾರ(ಮೇ.04 ರಿಂದ ಮೇ.09) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆಯಲ್ಲಿ ಕಂಡುಬಂದ ಏರಿಳಿತಗಳೇನು…!? ಎಂಬುವುದನ್ನು ವಿವರವಾಗಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದು, ಈ ವಾರ ಮೇ.04 ಸೋಮವಾರದಿಂದ ಮೇ.09 ಶನಿವಾರದವರೆಗೆ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ...

ನಿಧನ : ಹೊನ್ನಮ್ಮ ನಡುತೋಟ ಕುಲ್ಕುಂದ

ಸುಬ್ರಹ್ಮಣ್ಯ ಮೇ 09 : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆಯಲ್ಲಿ ವಾಸವಿರುವ ದಿ. ವೀರಪ್ಪಗೌಡ ನಡುತೋಟ ಅವರ ಪತ್ನಿ ಹೊನ್ನಮ್ಮ(73) ಇಂದು ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅವರು ಪುತ್ರ ವಿಜಯ್, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ದಿನಾಚರಣೆ – “ಸ್ವಚ್ಛತೆ-ಆರೋಗ್ಯ-ರಕ್ಷಣೆ-ಬದುಕು” ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮ ಆಯೋಜನೆ ; ಕಾಲೇಜಿನ ಸ್ವಚ್ಛತಾ-ರಕ್ಷಣಾ ಸಿಬ್ಬಂದಿಗಳಿಗೆ ಗೌರವಾರ್ಪಣೆ

ಸುವರ್ಣ ಸಂಭ್ರಮದ ಹೊಸ್ತಿಲಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ದಿನಾಚರಣೆಯನ್ನು ಮೇ 08ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು "ಸ್ವಚ್ಛತೆ-ಆರೋಗ್ಯ-ರಕ್ಷಣೆ-ಬದುಕು" ಎಂಬ ಶೀರ್ಷಿಕೆಯಡಿಯಲ್ಲಿ ಮಾಹಿತಿ ಹಾಗೂ ಗೌರವಾರ್ಪಣೆ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿಗೆ ಸ್ನಾತ್ತಕೋತ್ತರ ವಿಭಾಗದಲ್ಲಿ ಚಿನ್ನದ ಪದಕದೊಂದಿಗೆ ಒಟ್ಟು 5 ರ‍್ಯಾಂಕ್

ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ 2026ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತ್ತರ ವಿಭಾಗದ 05 ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ರ‍್ಯಾಂಕ್‌ಗಳನ್ನು ತಮ್ಮದಾಗಿಸಿಕೊಂಡಿದ್ದು, ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ.ಜಿ ರವರ ಮಾರ್ಗದರ್ಶನದಲ್ಲಿ...

ಗುತ್ತಿಗಾರು : ಚೆಸ್ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಹಾಗೂ ಅರಿವು ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಮೇ.04 ರಿಂದ ಮೇ.09 ರವರೆಗೆ ಗುತ್ತಿಗಾರು ಗ್ರಾಮ ಪಂಚಾಯತ್ ನ ಪ.ವರ್ಗದ ಸಭಾಭವನದಲ್ಲಿ ನಡೆಯಿತು.ಈ ಕಾರ್ಯಾಗಾರವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅಜಿತ್.ಜಿ.ಕೆ, ಮಾಜಿ ಯೋಧರಾದ ಯಶವಂತ ಕಲ್ಮಕಾರು, ಟ್ರಸ್ಟ್ ಉಪಾಧ್ಯಕ್ಷರಾದ ಮೋಹನ್...

ನಡುಗಲ್ಲು : ನಿಯಂತ್ರಣ ತಪ್ಪಿ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು

ಸುಳ್ಯದಿಂದ ಎಂಗೇಜ್ಮೆಂಟ್ ಮುಗಿಸಿ ನಡುಗಲ್ಲು ಕಡೆಗೆ ಬರುತಿದ್ದ ಪಾನಾತ್ತಿಲದ ವ್ಯಕ್ತಿಗೆ ಸೇರಿದ ಮಾರುತಿ 800 ಕಾರೊಂದು ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ಮೈಲುಗಲ್ಲಿಗೆ ಹೊಡೆದ ಪರಿಣಾಮವಾಗಿ ಕಾರು ಮಗುಚಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ತಾಯಿ ವಿಮಲ(55) ಮಕ್ಕಳಾದ ಚೈತ್ರ(30) ಶ್ರುತಿ(27) ಹಾಗೂ ಕಾರು ಚಾಲಕ ಉಮೇಶ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ...

ಅಮರ ಸುಳ್ಯ ಸುದ್ದಿ “ತೆರೆ-ಮರೆಯ ಸಾಧಕರು” – ಸಂಚಿಕೆ 01 ; ನಟನಾ ಕ್ಷೇತ್ರದ ಹಾದಿಯ ಕಥೆ – ಹಳ್ಳಿ ಹೈದನ ಕಲಾ ಪಯಣ ; ರಿಯಾಲಿಟಿ ಶೋ, ಸೀರಿಯಲ್, ವಾಯ್ಸ್ ಡಬ್ಬಿಂಗ್, ಸ್ಟೇಜ್ ಶೋ, ಡ್ರಾಮಾ – ನಟನೆಯ ಎಲ್ಲಾ ವಿಭಾಗಗಳಲ್ಲೂ ಛಾಪನ್ನು ಮೂಡಿಸುತ್ತಿರುವ “ಕಡಬದ ದೀಕ್ಷಿತ್ ಗೌಡ ಕುಂತೂರು ಪದವು” – ಬರಹ : ಉಲ್ಲಾಸ್ ಕಜ್ಜೋಡಿ

ಕಲೆ ಅಥವಾ ಪ್ರತಿಭೆ ಯಾರ ಸ್ವತ್ತೂ ಅಲ್ಲ, ಪ್ರತಿಯೊಬ್ಬರಲ್ಲೂ ಕೂಡ ಏನಾದರೂ ಒಂದು ಕಲೆ ಅಥವಾ ಪ್ರತಿಭೆ ಇದ್ದೇ ಇರುತ್ತದೆ. ಅದು ನಟನೆ, ಬರವಣಿಗೆ, ಚಿತ್ರಕಲೆ, ಶಿಲ್ಪಕಲೆ, ನೃತ್ಯ, ಸಂಗೀತ, ನಾಟಕ, ಅಭಿನಯ, ಛಾಯಾಗ್ರಹಣ ಹೀಗೆ ಏನಾದರೂ ಆಗಿರಬಹುದು. ಕಲೆ ಅಥವಾ ಪ್ರತಿಭೆಗೆ ಬಡವ-ಶ್ರೀಮಂತ, ಹಳ್ಳಿ-ಪಟ್ಟಣ, ಮೇಲು-ಕೀಳು ಎನ್ನುವ ಭೇದಭಾವವಿಲ್ಲ, ಅದು ಕೇಳುವುದೊಂದೇ “ಇಂದು ನೀನು...

ಪಂಜ : ಉಷಾ ಮೆಡಿಕಲ್ಸ್ ಸ್ಥಳಾಂತರಗೊಂಡು ಶುಭಾರಂಭ

ಗಣೇಶ್ ಭಟ್ ಮಜಲುಮಾರು ಮಾಲೀಕತ್ವದ ಉಷಾ ಮೆಡಿಕಲ್ಸ್ ಪಂಜದ ಸಂತೆಕಟ್ಟೆ ಮುಂಭಾಗದ ಸಾಗರ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡಿತು. ಕೃಷ್ಣ ಭಟ್ ಮುಕ್ಕುಡ ಪೆರ್ಮಜೆ ಮತ್ತು ವೇ.ಮೂ.ಬರ್ಲಾಯಬೆಟ್ಟು ಕೃಷ್ಣ ಭಟ್ ಗಣಪತಿ ಹವನ ನೆರವೇರಿಸಿ, ದೇವತಾ ಪ್ರಾರ್ಥನೆ ಮಾಡಿದರು. ಮೆಡಿಕಲ್‌ನ ಮಾಲಕರಾದ ಗಣೇಶ್ ಭಟ್ ಮಜಲುಮಾರು, ಶ್ರೀಮತಿ ಅರುಣಾ.ಜಿ ಭಟ್, ರಾಮಚಂದ್ರ ಭಟ್ ಮಜಲುಮಾರು, ಶ್ರೀಮತಿ ಈಶ್ವರಿ...
Loading posts...

All posts loaded

No more posts

error: Content is protected !!