- Thursday
- April 23rd, 2026
ಕುಂಡಡ್ಕ- ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 2021-23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ಕೂರಿನಲ್ಲಿ ಜು.20 ರಂದು ನಡೆಯಿತು. ಗೌರವಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಮುಕ್ಕೂರು, ಅಧ್ಯಕ್ಷರಾಗಿ ಜಯಂತ ಕುಂಡಡ್ಕ, ಕಾರ್ಯದರ್ಶಿಯಾಗಿ ಶಶಿಕುಮಾರ್ ಬಿ.ಎನ್., ಕೋಶಾಧಿಕಾರಿಯಾಗಿ ಜೀವನ್ ಕೊಂಡೆಪ್ಪಾಡಿ ಆಯ್ಕೆಯಾದರು. ನೂತನ ಸಮಿತಿಯನ್ನು ಅಭಿನಂದಿಸಿ ಮಾತನಾಡಿದ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಸನ್ಮಾನ ಹಾಗೂ ಉಪನ್ಯಾಸ ಜುಲೈ 21 ರಂದು ಪೂ ಪೂ.ಗಂಟೆ 10ಕ್ಕೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಉದ್ಘಾಟನೆಯನ್ನು ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ನೆರವೇರಿಸಲಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಕಣಕಾರರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ...
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಗ್ರಾಮ ಪಂಚಾಯತ್ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಪ್ರಯುಕ್ತ "ಹಸಿರು-ಉಸಿರು" ವನಮಹೋತ್ಸವ ಕಾರ್ಯಕ್ರಮ ಜು. 22ರಂದು ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ನಡೆಯಲಿದೆ. ಸುಳ್ಯದ ವಲಯ...
ಮೆಸ್ಕಾಂ ಕಛೇರಿ ಎದುರು ನಗರ ಪಂಚಾಯತ್ ವತಿಯಿಂದ ಇಂಟರ್ ಲಾಕ್ ಅಳವಡಿಸಲಾಗಿದ್ದು ಅಲ್ಲಿರುವ ವಿದ್ಯುತ್ ಕಂಬ ತೆಗೆಯದೇ ಇಂಟರ್ ಲಾಕ್ ಅಳವಡಿಸಿದ್ದಾರೆ. ಇಲ್ಲಿ ರಸ್ತೆ ತಿರುವಿನಿಂದ ಕೂಡಿದ್ದು ಎಚ್ಚರ ತಪ್ಪಿದರೆ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ಕಂಬ ತೆರವುಗೊಳಿಸಲು ಸ್ಥಳೀಯಾಡಳಿತ ಹಾಗೂ ಮೆಸ್ಕಾಂ ಗಮನಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಗುತ್ತಿಗಾರು ಭಾಗದಲ್ಲಿ ಅಂಬ್ಯುಲೆನ್ಸ್ ಇಲ್ಲದೇ ತುರ್ತು ಸೇವೆಗಳಿಗೆ ಪರದಾಡುವಂತ ಸ್ಥಿತಿ ಇತ್ತು. ಇದೀಗ ಖಾಸಗಿಯವರು ಅಂಬ್ಯುಲೆನ್ಸ್ ಸೇವೆ ಆರಂಭಿಸಿದ್ದಾರೆ. ಶಿವ ಆಂಬ್ಯುಲೆನ್ಸ್ ಸೇವೆಆರಂಭವಾಗಿದ್ದು, ಗುತ್ತಿಗಾರು ಪೇಟೆಯ ಜೀಪು ಸ್ಟಾಂಡ್ ಬಳಿ ಈ ಆಂಬ್ಯುಲೆನ್ಸ್ ಇರಲಿದ್ದು ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿಈ ನಂಬರ್ ಗಳನ್ನು 9481327944, 6360251248ಸಂಪರ್ಕಿಸಲು ಕೋರಲಾಗಿದೆ.
ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಸುಳ್ಯದ ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರಿನ 4 ಹೆಚ್ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ, ಸಮವಸ್ತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.ಈ ಕಾರ್ಯಕ್ರಮದಲ್ಲಿ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಹರೀಶ್ ಕಡಪಳ, ಉಪಾಧ್ಯಕ್ಷರಾದ ಜಯಶ್ರೀ, ಮುಖ್ಯಶಿಕ್ಷಕಿ ಶ್ರೀಮತಿ ಶ್ವೇತಾ, ಸಹಶಿಕ್ಷಕರಾದ ಚಿನ್ನಸ್ವಾಮಿ, ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಅಚ್ರಪ್ಪಾಡಿ...
ಪಂಜ ಹೋಬಳಿ ನಾಡ ಕಛೇರಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಜು.19 ರಂದು ಸಚಿವ ಎಸ್ ಅಂಗಾರ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಕಂದಾಯ ನಿರೀಕ್ಷಕ ಎಂ ಎಲ್ ಶಂಕರ, ಡಾ. ರಾಮಯ್ಯ ಭಟ್ , ಶಿವರಾಮಯ್ಯ ಕರ್ಮಜೆ ,ತಾಲೂಕು ಪಂಚಾಯತ್ ಮಾಜಿ ಸದಸ್ಯ...
ಸವಣೂರಿನ ಚಂದ್ರನಾಥ ಬಸದಿಯ ಸಮೀಪದ ಗದ್ದೆಯೊಂದು ಹಲವು ವರ್ಷಗಳಿಂದ ಬೇಸಾಯ ಮಾಡದೇ ಹಡೀಲು ಬಿದ್ದಿದ್ದು, ಸವಣೂರಿನ ಸಮಾನ ಮನಸ್ಕ ಯುವಕರ ತಂಡ ಅಂಬಾ ಬ್ರದರ್ಸ್ ಇದರ ವತಿಯಿಂದ ಈ ಗದ್ದೆಯಲ್ಲಿ ಈ ಬಾರಿ ಬೇಸಾಯ ಆರಂಭವಾಗಿದೆ.ಅಂಬಾ ಬ್ರದರ್ಸ್ ತಂಡವು ಈಗಾಗಲೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಹಡೀಲು ಬಿದ್ದ ಗದ್ದೆಯಲ್ಲಿ ಭತ್ತದ ಬೇಸಾಯಕ್ಕೆ ಮುಂದಾಗಿದ್ದು ಈ...
ದ.ಕ. ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಗುತ್ತಿಗಾರು, ಗ್ರಾಮಪಂಚಾಯತ್ ದೇವಚಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಜು.17 ರಂದು ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಅಪೌಷ್ಟಿಕ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿಶ್ವ ಜನಸಂಖ್ಯಾ...
ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸೇವಾ ಭಾರತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಸುಮಾರು 25 ಜನ ಕಾರ್ಯಕರ್ತರು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಡು ಕಡಿಯುವುದು, ಕಸ ಹೆಕ್ಕುವುದು, ಬ್ಲೀಚಿಂಗ್ ಹಾಗೂ ಇತರ ಎಲ್ಲಾ ರೀತಿಯ ಕೆಲಸಗಳ ಮೂಲಕ ಪೂರ್ಣ ಪ್ರಮಾಣದ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಟ್ಟರು.ಸೇವಾ ಭಾರತಿ ಪ್ರಮುಖರಾದ...
Loading posts...
All posts loaded
No more posts
