- Monday
- June 8th, 2026
ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹರಿಹರ ಪಲ್ಲತ್ತಡ್ಕದಲ್ಲಿ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಘಟನಾ ಸ್ಥಳಗಳಿಗೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಆ.03 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹರಿಹರ ಪಲ್ಲತ್ತಡ್ಕ ಗ್ರಾಮದ ಹರಿಹರ ಪೇಟೆಯಲ್ಲಿ ಭಾರೀ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ಸ್ಥಳ ಹಾಗೂ ಅಂಗಡಿಗಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ.ಕೆ.ವಿ, ಪುತ್ತೂರು ಎ.ಸಿ ಗಿರೀಶ್...
ಐನೆಕಿದು ಗ್ರಾಮದ ಕೆದಿಲ ಶಶಿಧರ್ ರವರ ತೋಟಕ್ಕೆ ಆನೆ ದಾಳಿ ನಡೆಸಿದ ಘಟನೆ ಇಂದು ಬೆಳಗಿನ ಜಾವ 5.30ಕ್ಕೆ ಸಂಭವಿಸಿದೆ. ಎರಡು ದಿವಸಗಳ ಹಿಂದೆ ಇದೇ ಗ್ರಾಮದ ರವಿ ಕೆದಿಲರವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಇದರಿಂದ ಕೃಷಿಗೆ ಸಾಕಷ್ಟು ಹಾನಿಯಾಗಿತ್ತು. ಇದೀಗ ಆನೆ ದಾಳಿ ಈ ಪ್ರದೇಶದಲ್ಲಿ ಹೆಚ್ಚಾಗುತ್ತಿದ್ದು ಕೃಷಿಗೆ ವ್ಯಾಪಕ ಹಾನಿಯಾಗುತ್ತಿದೆ.
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮುರುಳ್ಯ – ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಲೆಕ್ಕಾಡಿ ಕಟ್ಟಡದಲ್ಲಿ...
ಮಾ.02ರಂದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ತೆಂಗಿನ ಮರ ಏರುವ ಕುರಿತು ಶ್ರೀ ವಿಠಲ ಗೌಡ ಕಡೀರ ಇವರು ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರು ಮತ್ತು ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಾಲೆಯ ರಾಮನ್ ಇಕೋ ಕ್ಲಬ್ ಕಾರ್ಯಕ್ರಮ ನಡೆಸಿಕೊಟ್ಟಿತು.
ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ ಮಾ.01ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶ್ರೀ ಅಚ್ಚುತ ಗೌಡ ಪಟ್ರಮೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 1,98,500/- ಚೆಕ್ ನ್ನು...
ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಫೆ. 11 ರಂದು ಮೀನುಗಾರಿಕಾ ಸಚಿವರಾದ ಎಸ್. ಅಂಗಾರರವರ ಸುಳ್ಯದ ಕಛೇರಿಯಲ್ಲಿ ನಡೆದ ಸಭೆಯಲ್ಲಿ "ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್” ಇದರ ನೂತನ ಆಡಳಿತ ಮಂಡಳಿಯ ರಚನೆ ನಡೆಯಿತು. ಅಧ್ಯಕ್ಷ,ಉಪಾಧ್ಯಕ್ಷ ಹಾಗೂ ನಿರ್ದೇಶಕರುಗಳಾಗಿ 11 ಜನರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಹೇಶ್ ಕುಮಾರ್ ಮೇನಾಲ, ಉಪಾಧ್ಯಕ್ಷರಾಗಿ...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ವತಿಯಿಂದ ಫೆ.11 ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಮತ್ತು ರೈತ ಉತ್ಪಾದಕ ಸಂಸ್ಥೆ ರಚಿಸುವ ಬಗ್ಗೆ ಮಾಹಿತಿ ಹಾಗೂ ತಾಳೆ ಬೆಳೆ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.ಸುಬ್ರಹ್ಮಣ್ಯ...
ರೈತರ ಆದಾಯ ದ್ವಿಗುಣ ಮಾಡುವ ಉದ್ದೇಶದಿಂದ ರೈತ ಉತ್ಪಾದಕ ಸಂಸ್ಥೆ ರಚನೆಗೆ ಕೇಂದ್ರ ಸರಕಾರ ಈಗಾಗಲೇ ಕರೆಕೊಟ್ಟಂತೆ ರಚನೆಗೊಂಡ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ (ರಿ) ಪುತ್ತೂರು ಇದರ ವತಿಯಿಂದ ನಡೆಯುತ್ತಿರುವ ವಿನೂತನ ಒಪ್ಪಂದ ಆಧಾರಿತ ಜೇನು ಕೃಷಿ ಕಾರ್ಯಕ್ರಮದಲ್ಲಿ ಈಗಾಗಲೇ ಜೇನು ಕೃಷಿಯಲ್ಲಿ ತೊಡಗಿಕೊಂಡ ಅಜ್ಜಾವರ ಮಂಡೆಕೋಲು ಉತ್ಸಾಹಿ ರೈತರ ಗುಂಪಿನ ಪ್ರಥಮ ಜೇನು...
Loading posts...
All posts loaded
No more posts
