Ad Widget

ಕೇಂದ್ರೀಯ ತೋಟಗಾರಿಕಾ  ಸಂಶೋಧನಾ ಸಂಸ್ಥೆ ಕಾಸರಗೋಡಿನಲ್ಲಿ ತೆಂಗಿನ ಸಸಿಗಳ ವಿತರಣೆ

ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಕಾಸರಗೋಡಿನಲ್ಲಿ ಇದೀಗ ಎರಡು ವರ್ಷದ ಹಿಂದಿನ ವಿವಿಧ ರೀತಿಯ ತೆಂಗಿನ ಸಸಿಗಳನ್ನು ಸುಮಾರು ಮಾರ್ಕೆಟಿನ ಅರ್ಧ ರೇಟಿಗೆ ಮಾರಾಟ ಮಾಡಲಾಗುವುದೆಂದು ಸಂಶೋಧನಾ ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ. ಮೊದಲು ಬಂದವರಿಗೆ ಮೊದಲ ಆದ್ಯತೆಯೊಂದಿಗೆ ದಾಸ್ತಾನು ಮುಗಿಯುವವರೆಗೆ ಮಾರಾಟವಿರುತ್ತದೆ ಎಂದು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿ ಪಡೆದ ಶಿವರಾಮ್ ಮಡಪ್ಪಾಡಿ

ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
Ad Widget

“ಅಮರ ಸುದ್ದಿ ವಿಶೇಷ ವರದಿ”

ಕೃಷಿ ತೋಟಗಳಿಗೆ ಆನೆ ಹಾಗೂ ಇತರೆ ಕಾಡುಪ್ರಾಣಿಗಳ ನಿರಂತರ ದಾಳಿಯಿಂದ ಕಂಗೆಟ್ಟಿರುವ ಸುಳ್ಯ ತಾಲೂಕಿನ ಕೃಷಿಕರು

ಒಂದೆಡೆ ಅಡಿಕೆಗೆ ಹಳದಿ ಎಲೆಚುಕ್ಕೆ ರೋಗವಾದರೆ ಇನ್ನೊಂದೆಡೆ ಕೃಷಿ ತೋಟಗಳಿಗೆ ಕಾಡುಪ್ರಾಣಿಗಳ ನಿರಂತರ ದಾಳಿ ; “ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ” ಎಂಬಂತಾಗಿದೆ ತಾಲೂಕಿನ ಕೃಷಿಕರ ಪರಿಸ್ಥಿತಿ

✍️ಉಲ್ಲಾಸ್ ಕಜ್ಜೋಡಿ

“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...

ಅಮರ ಸುದ್ದಿ ವಿಶೇಷ ವರದಿ

ಅಡಿಕೆಗೆ ಹಿಡಿದಿರುವ ಹಲವು ರೋಗಗಳಿಂದ ಹೈರಾಣಾಗಿರುವ ಅಡಿಕೆ ಬೆಳೆಗಾರರು…!

ಈ ರೀತಿ ಅಡಿಕೆ ಕೃಷಿ ನಾಶವಾಗುತ್ತಾ ಹೋದರೆ ಅಡಿಕೆ ಬೆಳೆಯನ್ನೇ ನಂಬಿ ಬದುಕು ನಡೆಸುತ್ತಿರುವ ಕೃಷಿಕರ ಮುಂದಿನ ಪರಿಸ್ಥಿತಿಯೇನು…!?

ಭವಿಷ್ಯದ ಬದುಕಿನ ಚಿಂತೆಯಲ್ಲಿ ಅಡಿಕೆ ಬೆಳೆಗಾರರು…!

✍️ಉಲ್ಲಾಸ್ ಕಜ್ಜೋಡಿ

ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...

ನಾಳೆ (ಏ.11) ಕೊಲ್ಲಮೊಗ್ರು- ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ಫಲಿತಾಂಶ ಘೋಷಣೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಫಲಿತಾಂಶವು ನಾಳೆ(ಏ.11) ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.ಜ.19 ರಂದು ಸೊಸೈಟಿ ನೂತನ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆಗೆ ತಡೆ ನೀಡಲಾಗಿತ್ತು.ಇದೀಗ ಹೈಕೋರ್ಟ್ ಆದೇಶದಂತೆ ಡಿ.ಆರ್ ರವರು ಫಲಿತಾಂಶ ಘೋಷಣೆ ನಿಗದಿಪಡಿಸಿ ನೋಟೀಸ್ ಕಳಿಸಿರುವುದಾಗಿ ತಿಳಿದುಬಂದಿದೆ.

ಮಲೆನಾಡು ಜನಹಿತರಕ್ಷಣಾ ವೇದಿಕೆ ಹೋರಾಟದ ಫಲಶ್ರುತಿ – ಶೀಘ್ರವೇ ಜಂಟಿ ಸರ್ವೆಗೆ ಸರಕಾರದ ಆದೇಶ – ಆಯಾಯ ಗ್ರಾ.ಪಂ.ಗೆ ಮಾಹಿತಿ ನೀಡಿ ಜಂಟಿಸರ್ವೆ ನಡೆಸುವಂತೆ ಮನವಿ

ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯುತ್ತಿರುವ ಹೋರಾಟಗಳಿಗೆ ಕೊಲ್ಲಮೊಗ್ರ ಗ್ರಾಮ ಗೌಡ ತರುಣ ಘಟಕ ಬೆಂಬಲ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯುತ್ತಿರುವ ಹೋರಾಟಗಳಿಗೆ ಕೊಲ್ಲಮೊಗ್ರ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಸಮಿತಿಯ ತರುಣ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸಿದೆ ಎಂದು ತರುಣ ಘಟಕದ ಅಧ್ಯಕ್ಷರಾದ ಸತೀಶ್ ದೋಲನಮನೆ ಹಾಗೂ ತರುಣ ಘಟಕದ ಕಾರ್ಯದರ್ಶಿ ಕೀರ್ತಿಶ್ ಬಾಳೆಬೈಲು ಹೇಳಿಕೆಯಲ್ಲಿ ತಿಳಿಸಿದ್ದಾರೆ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನವೆಂಬರ್ 15 ಕ್ಕೆ ...

ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಬಿ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಡೆಪ್ಪಾಜೆ ಫಾರ್ಮ್ ಹೌಸ್ ಮತ್ತು ನರ್ಸರಿ ಮರ್ದಾಳ ಇವರ ಸಹಯೋಗದಲ್ಲಿ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣ ರಾವ್, ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್, ಶಾಲಾ ಮುಖ್ಯ ಗುರು ಉದಯ ಕುಮಾರ್ ರೈ ಎಸ್, ಶಾಲಾ ಎಸ್ಡಿಎಂಸಿ ,ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೃಷಿ ಮಾಹಿತಿ : ಇಂದಿನ ಮಾರುಕಟ್ಟೆ ದರ ಇಲ್ಲಿದೆ

ಕ್ಯಾಂಪ್ಕೋ ಸಂಸ್ಥೆ ಖರೀದಿಸುತ್ತಿರುವ ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ರಬ್ಬರ್ ಉತ್ಪನ್ನಗಳ ಇಂದಿನ ಧಾರಣೆ ಈ ಕೆಳಗಿನಂತಿದೆ. Dt-22.03. 2024 ಅಡಿಕೆD C - 420.00 - 435.00CHOLL- 390.00-427.00NEW- 320.00-345.00/353.00 ಕಾಳುಮೆಣಸು-435.00 - 480.00ಕೊಕ್ಕೋ ಹಸಿ ಬೀಜ - 155.00-170.00 ರಬ್ಬರ್ ಧಾರಣೆ ( Campco)RSS 4 - 180.00RSS 5 - 167.00RSS...
Loading posts...

All posts loaded

No more posts

error: Content is protected !!