ಬೆಳ್ಳಾರೆ ಜ್ಞಾನದೀಪದಲ್ಲಿ ಶಿಕ್ಷಕರ ದಿನಾಚರಣೆ ; “ಗುರಿ ತೋರುವ ಗುರುವಿನ ವೃತ್ತಿ ಶ್ರೇಷ್ಠ” : ಉಮೇಶ್ ಮಣಿಕ್ಕಾರ

“ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಗುರಿ ಮುಖ್ಯ. ಗುರಿ ಸಾಧಿಸುವ ದಾರಿ ತೋರಿಸುವ ಶಿಕ್ಷಕ ವೃತ್ತಿ ಶ್ರೇಷ್ಠ” ಎಂದು ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಹೇಳಿದರು. ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಜ್ಞಾನದೀಪ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ಸಂಸ್ಥೆಯ...

ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಸಮೀಪ ಹೊತ್ತಿ ಉರಿದ ಕೆ.ಎಸ್.ಆರ್.ಟಿ.ಸಿ ಬಸ್ ; ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಪ್ರಯಾಣಿಕರು

ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್‌.ಆರ್‌.ಟಿ.ಸಿ ಬಸ್‌ಗೆ ಎರ್ಮಾಯಿಲ್ ಬಳಿ ಶನಿವಾರ ಸೆ.05ರಂದು ರಾತ್ರಿ 9:15ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್‌ನಲ್ಲಿದ್ದ 37 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್ ಎರ್ಮಾಯಿಲ್ ಸಮೀಪ ಬರುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಬಸ್‌ನ್ನು...
Ad Widget

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಭುವನೇಶ್ವರಿ ಕೆ. ಅವರ ಪರಿಚಯ

ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುವುದರೊಂದಿಗೆ ಶಾಲಾ ಅಭಿವೃದ್ಧಿಗೆ ದಾನಿಗಳು ಹಾಗೂ ಸಂಘ-ಸಂಸ್ಥೆಗಳ ಸಹಕಾರವನ್ನು ಸಮರ್ಪಕವಾಗಿ ಬಳಸಿಕೊಂಡು ಹಲವು ಪ್ರಗತಿಪರ ಕಾರ್ಯಗಳನ್ನು ಕೈಗೊಂಡಿರುವ ಎಣ್ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಭುವನೇಶ್ವರಿ ಕೆ. ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ದಿ....

ಸುಳ್ಯ ತಾಲೂಕು ಖಾಸಗಿ ಶಾಲಾ ಮುಖ್ಯ ಶಿಕ್ಷಕರ ಪದಾಧಿಕಾರಿಗಳ ಆಯ್ಕೆ

ಸೆಪ್ಟೆಂಬರ್ 05 ಶಿಕ್ಷಕರ ದಿನಾಚರಣೆಯಂದು ಪೂರ್ವಾಹ್ನ 9:00 ಗಂಟೆಗೆ ಕೆ.ಪಿ.ಎಸ್ ಸುಳ್ಯ ದಲ್ಲಿ ನಡೆದ ಖಾಸಗಿ ಶಾಲಾ ಶಿಕ್ಷಕರ ಸಂಘದ ಸಭೆಯಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜ್ಞಾನದೀಪ ವಿದ್ಯಾಸಂಸ್ಥೆ, ಎಲಿಮಲೆಯ ಮುಖ್ಯಶಿಕ್ಷಕರಾದ ಗದಾಧರ ಬಾಳುಗೋಡು ಇವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ಶ್ರೀ...

ಯು.ಸಂ.ಮಂಡಳಿ ಹಾಗೂ ಅಮ್ಮ ಚಿಣ್ಣರ ಮನೆಯ ಆಶ್ರಯದಲ್ಲಿ ಮುದ್ದು ಕೃಷ್ಣ–ಮುದ್ದು ರಾಧೆ ಸ್ಪರ್ಧೆ

ಸುಳ್ಯ : ಯುವಜನ ಸಂಯುಕ್ತ ಮಂಡಳಿ ಹಾಗೂ ಅಮ್ಮ ಚಿಣ್ಣರ ಮನೆಯ ಆಶ್ರಯದಲ್ಲಿ ಮುದ್ದು ಕೃಷ್ಣ–ಮುದ್ದು ರಾಧೆ ಸ್ಪರ್ಧೆ ಸೆ. 5ರಂದು ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಐದು ವರ್ಷದೊಳಗಿನ ಮಕ್ಕಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳು ಕೃಷ್ಣ ಹಾಗೂ ರಾಧೆಯ ವೇಷದಲ್ಲಿ ಒಟ್ಟು 53 ಮಕ್ಕಳು ಭಾಗವಹಿಸಿ ಗಮನ ಸೆಳೆದರು. 7...

ಅರಿವಿಗೆ, ಬದುಕಿಗೆ ಶಿಕ್ಷಣ ಅಗತ್ಯ: ಡಾ. ಮಾಧವ ಭಟ್ | ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಸುಳ್ಯ: ಇನ್ನೊಬ್ಬರನ್ನು ಪ್ರೀತಿಸಬೇಕಾದರೆ ನಮ್ಮಲ್ಲಿ ಅಹಂ ಹಾಗೂ ಸ್ವಾರ್ಥ ಇರಬಾರದು. ಒಮ್ಮೆ ಬಳಸಿ ಬಿಸಾಡುವ ಶಿಕ್ಷಣ ನಮ್ಮದಲ್ಲ. ಭಾರತದಲ್ಲಿ ಜ್ಞಾನ ಪವಿತ್ರವಾದುದು. ವ್ಯವಸ್ಥಿತ ಶಿಕ್ಷಣದ ಮೂಲಕ ಮಕ್ಕಳು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಬೆಳೆಸಿಕೊಂಡು ರೆಕ್ಕೆ ಬಿಚ್ಚಿ ಹಾರುವಂತಾಗಬೇಕು. ಅರಿವಿಗೆ ಮತ್ತು ಬದುಕುವುದಕ್ಕೆ ಶಿಕ್ಷಣ ಅಗತ್ಯ ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಮಾಧವ...

ಗುತ್ತಿಗಾರು ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಅಷ್ಟಮಿ ಕಾರ್ಯಕ್ರಮ

ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.04ರಂದು ವಿವಿಧ ಕಾರ್ಯಕ್ರಮಗಳು ಜರುಗಿದವು. ವಿಶ್ವನಾಥ ಹೊಸೊಳಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜೆಸಿಐ ಪಂಜ ಪಂಚಶ್ರೀ ಅಧ್ಯಕ್ಷರಾದ ದೇವಿಪ್ರಸಾದ್ ಚಿಕ್ಮುಳಿ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಬಾಕಿಲ ವಹಿಸಿದ್ದರು. ರಮೇಶ್ ಮೆಟ್ಟಿನಡ್ಕ ಸ್ವಾಗತಿಸಿ ಲೀಲಾಧರ್ ಅಡ್ಡನಪಾರೆ ಧನ್ಯವಾದ ಸಮರ್ಪಿಸಿದರು....

ಪಂಜದಲ್ಲಿ ಸೆ.13ರಂದು ಬೃಹತ್ ರಕ್ತದಾನ ಶಿಬಿರ

ಪಂಜ: ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ (ರಿ.) ಪಂಜ ಇದರ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ 7ನೇ ವರ್ಷದ ಬೃಹತ್ ರಕ್ತದಾನ ಶಿಬಿರ ಸೆಪ್ಟೆಂಬರ್ 13ರಂದು ಪಂಜದಲ್ಲಿ ನಡೆಯಲಿದೆ. ಲಯನ್ಸ್ ಕ್ಲಬ್ ಹಿರಿಯಡ್ಕ, ಜೇಸಿಐ ಪಂಜ ಪಂಚಶ್ರೀ, ಲಯನ್ಸ್ ಕ್ಲಬ್ ಪಂಜ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಆ.31)ದಿಂದ ಶನಿವಾರ(ಸೆ.05)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ಸ್ಥಿರತೆ ಕಾಯ್ದುಕೊಂಡ ಅಡಿಕೆ, ಕಾಳುಮೆಣಸು, ಕೊಬ್ಬರಿ ಹಾಗೂ ಕೊಕ್ಕೋ ದರ – ಇಳಿಕೆಯಾದ ರಬ್ಬರ್ ದರ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್...

ಮುಚ್ಚವ ಶಾಲೆಯನ್ನು ಮೆಚ್ಚುವ ಶಾಲೆಯನ್ನಾಗಿಸಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಮಾದರಿ ಶಿಕ್ಷಕ  ಯಶೋಧರ ಕೆ.

ಕಳೆದ 22 ವರ್ಷಗಳಿಂದ ಪಾಂಡಿಗದ್ದೆ ಶಾಲೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಯಶೋಧರ ಕೆ. ಅವರಿಗೆ ಈ ಬಾರಿಯ ದ.ಕ. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  ಪ್ರಸ್ತುತ ಪಾಂಡಿಗದ್ದೆ ಶಾಲೆಯ ಪ್ರಭಾರವನ್ನು ವಹಿಸಿ ಶಾಲೆಯ ನಾಯಕತ್ವ ವಹಿಸಿ ಉತ್ತಮವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಬೋಧನೆಯಲ್ಲಿ ಕ್ಷಮತೆ ಹೊಂದುವ ಮೂಲಕ ತನ್ನ ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿರುತ್ತಾರೆ. ಇಂದಿಗೂ ಪಾಂಡಿಗದ್ದೆ...
Loading posts...

All posts loaded

No more posts

error: Content is protected !!