- Wednesday
- May 7th, 2025

ಜೂ .8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ . ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ . ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ...

ಕಳೆದ ಕೆಲವು ದಿನಗಳ ಹಿಂದೆ ಪೊಲೀಸರೊಂದಿಗೆ ಭುಜಕ್ಕೆ ಭುಜ ಜೋಡಿಸಿ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದ ಗೃಹರಕ್ಷಕ ದಳದವರು ರಸ್ತೆಗಳಲ್ಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆಯಲ್ಲಿ ಕಾಣದೆ ಅವರ ಕೊರತೆಯು ಎದ್ದು ಕಾಣುತ್ತಿತ್ತು. ಕಳೆದ ಹಲವು ತಿಂಗಳುಗಳಿಂದ ಕೋವಿಡ್ 19 ರ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸೇವೆಯಲ್ಲಿ ತೊಡಗಿಕೊಂಡಿದ್ದ ಗೃಹರಕ್ಷಕ ದಳದವರು ಪ್ರತಿಯೊಂದು ಕ್ಷೇತ್ರಗಳಲ್ಲಿ ಕರ್ತವ್ಯ ನಿಷ್ಠೆಯಿಂದ ನಡೆದು...

ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದ್ದು ಇಂದು ಒಂದೇ ದಿನ 378ಕ್ಕೇರಿಕೆಯಾಗಿದೆ. ಒಟ್ಟು 5213ಕ್ಕೇರಿಕೆಯಾಗಿದೆ. ಅದರಲ್ಲಿ ಉಡುಪಿ 121, ಕಲಬುರಗಿ 69, ಯಾದಗಿರಿ 103, ಬೆಂಗಳೂರು 18, ರಾಯಚೂರು 2, ಮಂಡ್ಯ 3, ಬೆಳಗಾವಿ 5, ಬೀದರ್ 1, ಹಾಸನ 3, ವಿಜಯಪುರ 6, ದಕ್ಷಿಣ ಕನ್ನಡ 24, ಚಿಕ್ಕಬಳ್ಲಾಪುರ 2, ಉತ್ತರ ಕನ್ನಡ...

ಸುಬ್ರಹ್ಮಣ್ಯ ವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಪೈಪು ಅಳವಡಿಸಿ ನೀರನ್ನು ಅಕ್ರಮವಾಗಿ ತರುತ್ತಿರುವ ಬಗ್ಗೆ ಸುಬ್ರಹ್ಮಣ್ಯ ವಲಯದ ವಲಯ ಅರಣ್ಯಾಧಿಕಾರಿ ಗಳಿಗೆ ಸುಬ್ರಹ್ಮಣ್ಯದ ಗ್ರಾಮಸ್ಥರು ದೂರು ನೀಡಿದ್ದಾರೆ. ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತ ಅರಣ್ಯದಿಂದ ಅಕ್ರಮವಾಗಿ ನೀರನ್ನು ತರುತ್ತಿದೆ ಎಂದು ಶಿವರಾಮ ರೈ, ಶ್ರೀನಾಥ್ ಟಿ ಎಸ್, ಪ್ರಶಾಂತ್...

ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಗುತ್ತಿಗಾರು ಇವರ ಸಮಾಜ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲ್ಲೂಕು ವಿಪತ್ತು ನಿರ್ವಹಣೆ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಸಹಾಯವಾಣಿ ನೋಡಲ್ ಆಗಿ ನಿಯೋಜಿಸಿರುವ ಬಗ್ಗೆಜೂ 4 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ. ಅದರಂತೆ ಈ ವಿಷಯಕ್ಕೆ ಸಂಬಂಧಿಸಿದಂತೆ 2020 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುರಿತು ಯಾವುದೇ ಸಂದೇಹಗಳು ಅಗತ್ಯ ಮಾಹಿತಿಗಳನ್ನು ಪರೀಕ್ಷೆ ಬರೆಯುವ ಮಕ್ಕಳಿಗೆ ಅಥವಾ ಪೋಷಕರಿಗೆ...

ಕನಕಮಜಲು ಯುವಕ ಮಂಡಲ ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರಂದು ಆಚರಿಸಲಾಯಿತು. ಕನಕಮಜಲು ಯುವಕ ಮಂಡಲದ ವತಿಯಿಂದ ದಿ. ಎಲ್ಯಣ್ಣ ಗೌಡ ಅವರ ಸ್ಮರಣಾರ್ಥ ದಿವಂಗತರ ಮನೆಯ ಸಮೀಪ ಮಾಯಣ ರಹಿತ ಉತ್ತಮ ತಳಿಯ ಹಲಸಿನ ಗಿಡವನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಭಾರತ ಸರ್ಕಾರ ನೆಹರೂ ಯುವ ಕೇಂದ್ರ ಕೊಡಗು ಜಿಲ್ಲೆ ಮತ್ತು ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ನೇತಾಜಿ ಗೆಳೆಯರ ಬಳಗದ ಅಧ್ಯಕ್ಷರಾದ ಶಶಿಕುಮಾರ್ ಹೆಚ್ ಬಿ, ಉಪಾಧ್ಯಕ್ಷರಾದ ನಾಗೇಶ್ ಹೆಚ್ ಎನ್, ಪ್ರಧಾನ ಕಾರ್ಯದರ್ಶಿಯಾದ ಸುಂದರ ಹೆಚ್ ಬಿ, ಹಾಗೂ ಸದಸ್ಯರಾದ...

ಅಮರ ಸಂಘಟನಾ ಸಮಿತಿ ,ಅಮರ ಮುಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಹಯೋಗದಲ್ಲಿ ವಿಶ್ವ ಪರಿಸರ ದಿನ ದ ಅಂಗವಾಗಿ ಜೂನ್ ೫ ರಂದು ಸೇವ್ ಟ್ರೀ ಸೇವ್ ಲೈಫ್ ಅಭಿಯನದಡಿಯಲ್ಲಿ ಕಾಡು ಬೆಳೆಸಿ ನಾಡು ಉಳಿಸಿ ಧ್ಯೇಯ ವಾಕ್ಯದೊಂದಿಗೆ ದೇವಚಳ್ಳ ಗ್ರಾಮ ಪಂಚಾಯತ್ ಪರಿಸರದಲ್ಲಿ ಎರಡನೇ ವರ್ಷದ ಗಿಡ ನೆಡುವ...

ಕೊಲ್ಲಮೊಗ್ರ ಬಿಎಸ್ ಎನ್ ಎಲ್ ಟವರ್ ಬಗ್ಗೆ ಕಳೆದ ವಾರ ಅಮರ ಸುದ್ದಿ ವೆಬ್ಸೈಟ್ ವರದಿ ಪ್ರಕಟಿಸಿ ನಿದ್ದೆಯಲ್ಲಿದ್ದ ಅಧಿಕಾರಿಗಳನ್ನು ಎಚ್ಚರಿಸಿತ್ತು. ಈ ಬಗ್ಗೆ ಯುವ ಮುಂದಾಳು ಉದಯ ಶಿವಾಲ ಪ್ರಧಾನಮಂತ್ರಿ ಕಛೇರಿ ಗೆ ಪತ್ರ ಬರೆದು ಒತ್ತಾಯಿಸಿದ್ದು ಅಲ್ಲದೇ ಎಲ್ಲಾ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಬೆನ್ನು ಬಿಡದೇ ಸತತ ಪ್ರಯತ್ನಿಸಿದ್ದರು. ದಿನ ಮುಂದೂಡುತ್ತಿದ್ದ ಅಧಿಕಾರಿಗಳು...

All posts loaded
No more posts