Ad Widget

ನೇತ್ರಾವತಿ ನದಿಗೆ ಹಾರಿದ ನಿಶಾಂತ್ ನ ರಕ್ಷಿಸಲೆತ್ನಿಸಿದ ಯುವಕರಿಗೆ ಸನ್ಮಾನ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಲ್ಲಡ್ಕದ ನಿಶಾಂತ್‌ನನ್ನು ಕಾಪಾಡಲು ಹಬ್ಬದ ಖುಷಿಯಲ್ಲಿದ್ದ ಸಂದರ್ಭದಲ್ಲಿಯೂ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿ ರಕ್ಷಣೆಗೆ ಮುಂದಾಗಿದ್ದರು. ಯುವಕರ ಈ ಸಾಹಸ ಮಾನವೀಯತೆಗೆ ಸಾಕ್ಷಿಯಾಗಿತ್ತು. ಇದನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಸನ್ಮಾನಿಸಲಾಯಿತು.

ಪೆರಾಜೆಯಲ್ಲಿ ರಬ್ಬರ್ ಕಳವು ಪ್ರಕರಣದ ಆರೋಪಿಗಳ ಬಂಧನ

ರಬ್ಬರ್ ಶೀಟ್ ಮತ್ತು ಸ್ಕ್ರಾಪ್ ಕಳವು ಮಾಡಿದ್ದ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರುಯಶಸ್ವಿಯಾಗಿದ್ದಾರೆ   ಮಡಿಕೇರಿ ತಾಲ್ಲೂಕು ಪಿ.ಪೆರಾಜೆ ಗ್ರಾಮದ ನಿವಾಸಿ ಆರ್.ಎ ಶರತ್ ಎಂಬುವವರು ಅವರ ರಬ್ಬರ್ ತೋಟದಿಂದ ಟ್ಯಾಪಿಂಗ್ ಮಾಡಿ ಸಂಗ್ರಹಿಸಿ ಇಟ್ಟಿದ್ದ 2,10,000 ರೂ ಬೆಲೆಬಾಳುವ 1300 ಕೆ.ಜಿ ರಬ್ಬರ್ ಶೀಟ್ ಮತ್ತು 900...
Ad Widget

ಜೂನ್ 7 ರಂದು ಡಿಕೆಶಿ ಪದಗ್ರಹಣ -6500 ಪ್ರದೇಶಗಳಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....

ಬಹರೈನ್ ನಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ನೆರವವು ನೀಡಿ ಮಾನವೀಯತೆ ಮೆರೆದ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್

ಅರಬ್ ರಾಷ್ಟ್ರವಾದ ಬಹರೈನ್ ನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್ ಸಹಾಯ ಹಸ್ತ ನೀಡಿ ಮಾನವೀಯತೆ ಮೆರೆದಿದೆ. ಕೋವಿಡ್ 19 ನಿಂದ ನಮ್ಮ ದೇಶ ಮಾತ್ರವಲ್ಲ ವಿದೇಶಗಳು ಕೂಡ ಕಷ್ಟಕ್ಕೀಡಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಅದರಲ್ಲೂ ವಿದೇಶದಲ್ಲಿ ಕಷ್ಟಕ್ಕೀಡಾಗಿರುವ ಭಾರತೀಯರಲ್ಲಿ ಹಲವರ ಪರಿಸ್ಥಿತಿ ಕೇಳಿದರೆ ಕಣ್ಣೀರು ಬರುವ...

ಸಾಮಾಜಿಕ ಅರಣ್ಯ ಇಲಾಖೆಯಿಂದ ರೈತರಿಗೆ ಸಹಾಯಧನ

ರೈತರು ತಮ್ಮ ಜಮೀನಿನಲ್ಲಿ ವಾಣಿಜ್ಯ ಬೆಳೆಗಳಾದ ಕೊಕ್ಕೋ ಅಡಿಕೆ ತೆಂಗು ಗೇರು ಕಾಳುಮೆಣಸು ಗಿಡಗಳನ್ನು ನಾಟಿ ಮಾಡಿದಲ್ಲಿ ಪ್ರತಿ ಗಿಡಕ್ಕೆ ಸಾಮಾಜಿಕ ಅರಣ್ಯ ಇಲಾಖೆಯಿಂದ ರೂ 14 ರಂತೆ ಸಹಾಯಧನವನ್ನು ನೀಡುತ್ತಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿ ಜೊತೆ ಆಧಾರ್ ಕಾರ್ಡ್, ಆರ್ ಟಿಸಿ, ಬ್ಯಾಂಕ್ ಪಾಸ್ ಬುಕ್ , ನಾಟಿ...

ಅಧಿಕಾರಿಗಳ ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಬಲಿಯಾದ ಕೊಲ್ಲಮೊಗ್ರ ಬಿಎಸ್ಸೆನ್ನೆಲ್ ನೆಟ್ವರ್ಕ್

ಪ್ರಧಾನಮಂತ್ರಿಗೆ ಬರೆದ ಪತ್ರಕ್ಕೆ ಎಚ್ಚರಗೊಂಡ ಅಧಿಕಾರಿಗಳು ಕೊಲ್ಲಮೊಗ್ರ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ ಜನರ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ. ಇಂತಹ ಗ್ರಾಮೀಣ ಪ್ರದೇಶದಲ್ಲಿ ಇರುವ ಒಂದೇ ಆಗಿರುವುದರಿಂದ ಜನ ತುರ್ತು ಸೇವೆಗಳಿಗೆ ಪರದಾಡುವಂತ ಪರಿಸ್ಥಿತಿ ಬಂದಿದೆ. ಶಾಸಕರು ಸಂಸದರೂ ಬಿಎಸ್ಎನ್ ಎಲ್ ನೆಟ್ವರ್ಕ್ ಬಗ್ಗೆ ಹೆಚ್ಚೇನು ತಲೆಕೆಡಿಸಿಕೊಂಡಂತಿಲ್ಲ. ಮತ್ತೆ ಸ್ಥಳೀಯ ಜನಪ್ರತಿನಿಧಿಗಳು ಏನೂ...

ಸುಳ್ಯ ಪೇಟೆಯಲ್ಲಿ ಡ್ರೈವಿಂಗ್ ಮಾಡುತ್ತಿರುವಾಗಲೇ ಹೃದಯಾಘಾತ – ಮೃತ್ಯು

ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಕೇನಾಜೆಯ ಪೋಕರ್ ಕುಂಇ್ ಮೃತರಾದವರೆಂದು ತಿಳಿದು ಬಂದಿದೆ ಮಧ್ಯಾಹ್ನ ಸುಮಾರಿಗೆ ಪೋಕರ್ ಕುಂಇ್ ಅವರು ಕಾರಿನಲ್ಲಿ ಬರುತ್ತಿದ್ದಾಗ ಸುಳ್ಯ ಪೋಲೀಸ್ ಠಾಣೆ ಸಮೀಪ ಕಾರು ಸ್ಕೂಟಿಯೊಂದಕ್ಕೆ ತಾಗಿ ಮುಂದಕ್ಕೆ ಬಂದು‌ ಮತ್ತೊಂದು ಕಾರಿಗೆ ತಾಗಿ ನಿಂತಿತು. ಅವರು ಕಾರಿನ ಸ್ಟೇರಿಂಗ್ ಗೆ...

ಇಂದು ಸುಳ್ಯ ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯ

ಪುತ್ತೂರು 110 ಕೆವಿ ಉಪ ಕೇಂದ್ರದಲ್ಲಿ ಕೇಬಲ್ ಪುನರ್ ರಚನೆ ಕಾಮಗಾರಿ ಇರುವುದರಿಂದ ಮೇ 26ರಂದು ಬೆಳಿಗ್ಗೆ ಗಂಟೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ ಪುತ್ತೂರು ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಕಾವು ಸುಳ್ಯ ಸವಣೂರು ಕಡಬ ನೆಲ್ಯಾಡಿ ಸುಬ್ರಮಣ್ಯ 33/11 ಕೆವಿ ವಿದ್ಯುತ್ ಉಪ ಕೇಂದ್ರಗಳಿಗೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ...

ನಿಶಿತ್ ಮುಂಡೋಡಿ ನಿರ್ದೇಶನದ “ಹುಟ್ಟೂರ ಬಿಟ್ಟು ಆಧುನಿಕತೆಯ ತೆಕ್ಕೆಗೆ” ಇಂದು ಬಿಡುಗಡೆ

ಯುವ ರೈತಾಪಿ ಮಕ್ಕಳು ಆಧುನಿಕತೆಯ ತೆಕ್ಕೆಗೆ ಜಾರುವ ಪ್ರಕೃತ ವಿದ್ಯಮಾನ ಒಳಗೊಂಡ ಹೃದಯಂಗಮ ಕನ್ನಡ ಕಿರುಚಿತ್ರ ಇದಾಗಿದ್ದು ತಾರಾಗಣದಲ್ಲಿ ಉದಯೋನ್ಮುಖ ಕಲಾವಿದ ಸೃಜನ್ ಮುಂಡೋಡಿ ಮತ್ತು ಹೊನ್ನಪ್ಪ ಗೌಡ ಕುತ್ಯಾಳ ನಟಿಸಿದ್ದಾರೆ. ಹುಟ್ಟೂರ ಬಿಟ್ಟು ಆಧುನಿಕತೆಯ ತೆಕ್ಕೆಗೆ ಎಂಬ ಕಿರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ ವೀಕ್ಷಿತ್ ಕುತ್ಯಾಳ. ಕಂಠದಾನ ಮಾಡಿದ್ದಾರೆ  ಪ್ರಸನ್ನ ನಿತ್ಯಾನಂದ ಮುಂಡೋಡಿ ಮತ್ತು...

ಬಳ್ಪ ತ್ರಿಶೂಲಿನಿ ದೇವಸ್ಥಾನದ ವತಿಯಿಂದ ಉಚಿತ ಮಾಸ್ಕ್ ವಿತರಣೆ

ಕೊರೊನ ರೋಗ ಬಾಧಿಸುತ್ತಿರುವ ಸಂದರ್ಭದಲ್ಲಿ ಸ್ವ ಆರೋಗ್ಯ ರಕ್ಷಣೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವ ನಿಟ್ಟಿನಲ್ಲಿ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದಬಳ್ಪ ಮತ್ತು ಕೇನ್ಯ ಗ್ರಾಮದ ಪ್ರತಿ ಮನೆಯ ಪ್ರತಿ ಸದಸ್ಯರಿಗೂ ಉಚಿತ ಮಾಸ್ಕ್ ಅನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ವಿತರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಪ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಪ್ರಕಾಶ ಮೂಡ್ನೂರು...
Loading posts...

All posts loaded

No more posts

error: Content is protected !!