- Saturday
- April 19th, 2025

ಗುತ್ತಿಗಾರಿನಲ್ಲಿ ಮೇ ಕೊನೆಯ ತನಕ ಸಂಜೆ ೫ ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ವರ್ತಕರು ನಿರ್ಧರಿಸಿದ್ದಾರೆ. ಮೇ ೧೮ ರಂದು ನಡೆದ ಗ್ರಾ.ಪಂ. ಮತ್ತು ವರ್ತಕರ ಸಂಘದ ಜಂಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ವರ್ತಕರ ಸಂಘ ತಿಳಿಸಿದೆ.

ಈ ಸಂಕಷ್ಟದ ಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೆಲವೊಂದು ಯೋಜನೆಗಳನ್ನು ಪ್ಯಾಕೇಜ್ ಮೂಲಕ ಘೋಷಿಸಿರುವುದನ್ನು ಸ್ವಾಗತಿಸುವುದಾದರೂ ಅದರ ಸಾಧಕ ಭಾದಕ ಮತ್ತು ಅದರ ಜಾರಿ ಹಿನ್ನಲೆಯ ಬಳಿಕವಷ್ಟೇ ಯೋಜನೆಯ ಪ್ರಾಮುಖ್ಯತೆ ಜನರಿಗೆ ತಿಳಿಯಬಹುದು.ವಾಸ್ತವವಾಗಿ ಜನ ಸಾಮಾನ್ಯ ಈ ಮೂರು ತಿಂಗಳ ಅವಧಿಯಲ್ಲಿ ಆಗುತ್ತಿರುವ ನಷ್ಟದ ಬಗ್ಗೆ ಮಾತನಾಡುತ್ತಿರುವುದೇ ಹೆಚ್ಚು. ಉದಾಹರಣೆಗೆ ಲಾಕ್ ಡೌನ್ ಮಾಡುವ...

ರಾಜ್ಯ ಸರಕಾರದ ನಿರ್ಧಾರದಂತೆ ಸುಳ್ಯ ಕೆಎಸ್ಆರ್ಟಿಸಿ ಬಸ್ ಡಿಪೋದಿಂದಲೂ ನಾಳೆ ಬಸ್ ಸಂಚಾರ ಆರಂಭವಾಗಲಿದೆ. ಸದ್ಯಕ್ಕೆ ಸುಳ್ಯ- ಪುತ್ತೂರು, ಸುಳ್ಯ-ಮಡಿಕೇರಿ ಹಾಗೂ ಸುಳ್ಯ-ಬೆಂಗಳೂರು ನಡುವೆ ಮಾತ್ರ ಬಸ್ ಸಂಚಾರ ಇರುತ್ತದೆ. ಪ್ರತಿ ಬಸ್ನಲ್ಲೂ 3೦ ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ. ಮಾಸ್ಕ್ ಧರಿಸಿದ ಪ್ರಯಾಣಿಕರಿಗಷ್ಟೇ ಅವಕಾಶವಿದೆ. ಬೆಂಗಳೂರಿಗೆ ೩೦ ಪ್ರಯಾಣಿಕರು ಇದ್ದರಷ್ಟೇ ಬಸ್ ಸಂಚಾರವಿರುತ್ತದೆ. ರಾತ್ರಿ ಪ್ರಯಾಣ ಇರುವುದಿಲ್ಲ....

ಹಲವು ವರ್ಷಗಳಿಂದ ಸುಬ್ರಹ್ಮಣ್ಯ ದಲ್ಲಿ ಹಿರಿಯ ಮರದ ಶಿಲ್ಪಿಯಾಗಿದ್ದ ಜನಾರ್ದನ ಆಚಾರ್ಯ (82) ಬಿಲದ್ವಾರ ಮೇ ೧೮ ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ , ಆರು ಜನ ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...

ಮಹಾಮಾರಿ ಕರೊನಾದಿಂದಾಗಿ ಈಗ ಜಗತಿಕ ಕ್ರೀಡಾಲೋಕ ಸ್ತಬ್ಧಗೊಂಡಿದೆ. ಸದ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪುನರಾರಂಭ ಸುಲಭವಲ್ಲ. ಆದರೆ ಮುಂದೊಂದು ದಿನ ಖಂಡಿತ ವಾಗಿಯೂ ಕ್ರೀಡಾಸ್ಪರ್ಧೆಗಳು ಮತ್ತೆ ಶುರುವಾಗಲಿವೆ. ಆದರೆ, ಅದು ಕರೊನಾ ಬರುವುದಕ್ಕೆ ಮುಂಚೆ ಇದ್ದುದಕ್ಕಿಂತ ಸಾಕಷ್ಟು ಬದಲಾವಣೆಗಳನ್ನು ಕಾಣಲಿದೆ ಮತ್ತು ಈ ಬದಲಾವಣೆಯೂ ಅಗತ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಕ್ರೀಡಾ ಚಟುವಟಿಕೆಗಳು ಹೇಗಿರಬಹುದು ಎಂಬ ಪ್ರಶ್ನೆಗೆ ಭಾರತದ...

ಅಜ್ಜಾವರ ಹೈಸ್ಕೂಲ್ ಬಳಿಯಿಂದ ಮಾರ್ಗ ಶಿವಾಜಿನಗರ ಮಂಡೆಕೋಲು ಕನ್ಯಾನ ತನಕ ವಿದ್ಯುತ್ ಲೈನ್ ಸ್ವಚ್ಛಗೊಳಿಸುವ ಕಾರ್ಯ ಮೇ.17ರ ಆದಿತ್ಯವಾರದಂದು ನಡೆಯಿತು. ವೀರಕೇಸರಿ ಮಿತ್ರವೃಂದದ ನೇತೃತ್ವದಲ್ಲಿ ನಡೆದ ಈ ಶ್ರಮದಾನ ಕಾರ್ಯದಲ್ಲಿ ಹಿಂದುಜಾಗರಣ ವೇಧಿಕೆ ಶಿವಾಜಿನಗರದ ಸದಸ್ಯರು ಹಾಗೂ ಇನ್ನಿತರ ಸಂಘಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದ್ದರು. ಸುಮಾರು ಅರವತ್ತು ಜನರಷ್ಟು ಶ್ರಮದಾನದಲ್ಲಿ ಭಾಗವಹಿಸಿದ್ದು ಅಡ್ಪಂಗಾಯ, ಮಾರ್ಗ, ಶಿವಾಜಿನಗರ, ಕನ್ಯಾನ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಮುಂಜಾನೆ ಭಾರೀ ಗಾಳಿ ಮಳೆ ಸುರಿದ ಪರಿಣಾಮವಾಗಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರಬಿದ್ದು, ಕೆಲಹೊತ್ತು ಸುಬ್ರಹ್ಮಣ್ಯ-ಏನೆಕಲ್ಲು ರಸ್ತೆಸಂಚಾರ ಸ್ಥಗಿತಗೊಂಡ ಘಟನೆ ಸಂಭವಿಸಿದೆ. ಏನೆಕಲ್ಲು ಬಳಿಯ ಬೂದಿಪಳ್ಳ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಮೆಸ್ಕಾಂ ಮತ್ತು...

ನಾರ್ಣಕಜೆ ಬಸ್ ನಿಲ್ದಾಣದ ಸಮೀಪ ಇಂದು ಮುಖ್ಯ ರಸ್ತೆಗೆ ಮರ ಬಿದ್ದು ಕೆಲ ಹೊತ್ತು ಸಂಚಾರಕ್ಕೆ ತಡೆಯುಂಟಾಗಿತ್ತು. ವಿದ್ಯುತ್ ಲೈನ್ ನ ಎರಡು ಕಂಬಗಳು ಮುರಿದು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ತೆರವುಗೊಳಿಸಲಾಯಿತು.

ಸುಳ್ಯದ ಎಲ್ಲಾ ವರ್ತಕರು ಕಳೆದ ಎರಡು ತಿಂಗಳಿಂದ ವ್ಯವಹಾರ ಸ್ಥಗಿತ ಗೊಳಿಸಿ ಸಂಕಷ್ಟದಲ್ಲಿರುವಾಗ ಸರಕಾರದ ಆದೇಶದ ಹೆಸರಿನಲ್ಲಿ ವಿಪರೀತ ತ್ಯಾಜ್ಯ ಸಂಗ್ರಹಣಾ ಶುಲ್ಕವನ್ನು ಲೈಸೆನ್ಸ್ ನವೀಕರಣ ಸಂದರ್ಭದಲ್ಲಿ ವಸೂಲು ಮಾಡುತ್ತಿರುವುದು ನ್ಯಾಯಯುತವಲ್ಲ ಎಂದು ನಗರ ಬಿಜೆಪಿ ಅಭಿಪ್ರಾಯ ಪಟ್ಟಿದೆ.ಈ ಬಾರಿಯ ಅಂಗಡಿ ಲೈಸೆನ್ಸ್ ನವೀಕರಣಕ್ಕೆ ವರ್ತಕರು ನೀಡಿದ ಸಂದರ್ಭದಲ್ಲಿ ವಿವಿಧ ರೀತಿಯ ವ್ಯವಹಾರಗಳಿಗೆ 600ರೂ ನಿಂದ...

All posts loaded
No more posts