- Saturday
- March 14th, 2026
ಭ್ರಷ್ಟಾಚಾರ ವಿರೋಧಿಸಿ ಕೆಲವು ದಿನಗಳ ಹಿಂದೆ ಪ್ರತಿಭಟನೆ ಸಾಕ್ಷಿಯಾಗಿದ್ದ ಕೊಲ್ಲಮೊಗ್ರ ಗ್ರಾಮಪಂಚಾಯತ್ ವಠಾರ ಮತ್ತೆ ಪ್ರತಿಭಟನೆ ನಡೆಯುತ್ತಿದೆ.ಭ್ರಷ್ಟಾಚಾರದ ವಿರುದ್ಧದ ಕೂಗಿನೊಂದಿಗೆ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಜನರುಗಳ ಒಗ್ಗಟ್ಟಿನೊಂದಿಗೆ ರೂಪುಗೊಂಡ “ನ್ಯಾಯಕ್ಕಾಗಿ ಹೋರಾಡೋಣ” ಸಮಿತಿಯ ವತಿಯಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ ಹಾಗೂ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಿಬ್ಬಂದಿ ಕಳವು ಆರೋಪದ ಬಗ್ಗೆ...
ಸುಬ್ರಹ್ಮಣ್ಯ ಸೆಪ್ಟೆಂಬರ್ 24 : "ಇಂದಿನ ದಿನಗಳಲ್ಲಿ ಮಹಿಳೆಯರು ಆಬಲೆಯರು ಅಲ್ಲ. ತಮ್ಮ ಸ್ವಂತ ದುಡಿಮೆಯೊಂದಿಗೆ ಸ್ವಾಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಮರ್ಥರು. ತಾವು ಸ್ವತಃ ದುಡಿಯುವುದರೊಂದಿಗೆ ಇನ್ನಷ್ಟು ಜನ ಮಹಿಳೆಯರಿಗೆ ತರಬೇತಿ ನೀಡಿ ಸ್ವಂತ ಜೀವನವನ್ನು ಹಾಗೂ ಸ್ವಾವಲಂಬಿ ಬದುಕನ್ನು ನಡೆಸಲು ಎಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ" ಎಂದು ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ನುಡಿದರು. ಸುಬ್ರಹ್ಮಣ್ಯ...
ಫ್ರೆಂಡ್ಸ್ ಸಮಹಾದಿ ಕ್ಲಬ್ ಆಶ್ರಯದಲ್ಲಿ ಆರು ಆಹ್ವಾನಿತ ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟವು ಸಮಹಾದಿ ಮೈದಾನದಲ್ಲಿ ಸೆ.21 ಭಾನುವಾರದಂದು ನಡೆಯಿತು.ಕ್ಲಬ್ ಅಧ್ಯಕ್ಷರಾದ ರಿಯಾಝ್ ರಾಗಿಪೇಟೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಪಂದ್ಯಾಟವನ್ನು ಉದ್ದೇಶಿಸಿ ಮಾತನಾಡಿ ಉದ್ಘಾಟಿಸಿ ಪಂದ್ಯಾಟಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪಿ.ಎಂ ಅಬ್ದುಲ್...
ಎಲಿಮಲೆಯ ಕೊಡಿಮಜಲು ಜಾಕೆ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ವೆಲ್ಡಿಂಗ್ ಶಾಪ್ ಸೆ.24 ರಂದು ಶುಭಾರಂಭಗೊಂಡಿತು.ಗಣಪತಿ ಹವನ ಮತ್ತು ಆಯುಧ ಪೂಜೆಯೊಂದಿಗೆ ಶುಭಾರಂಭಗೊಂಡಿತು. ಪೂಜಾ ವಿದಿವಿಧಾನಗಳನ್ನು ನಟರಾಜ್ ಭಟ್ ನೀರಬಿದಿರೆ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರಾದ ನಿಶ್ಚಿತ್ ಪರ್ಲಡಿ ಮನೆಯವರು ಮತ್ತು ಯತಿಂದ್ರ ಕೊಡ್ತುಗುಳಿ ಮನೆಯವರು ಉಪಸ್ಥಿತರಿದ್ದರು. ಕಾಂಪ್ಲೆಕ್ಸ್ ಮಾಲಕರಾದ ನವೀನ್ ಜಾಕೆ,...
ಸೆ.23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ "ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ" ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಡಾ ರಾಮ್ಮೋಹನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಯುರ್ವೇದದ ಮಹತ್ವದ ಮಾಹಿತಿ ಜನ ಸಾಮಾನ್ಯರಿಗೆ ಅತ್ಯಾವಶ್ಯಕ ಎಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಸೆ.25 ರಂದು “ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ” ನಡೆಯಲಿದ್ದು, ಲಸಿಕೆ ನೀಡುವ ಸ್ಥಳಗಳ ವಿವರ ಈ ಕೆಳಗಿನಂತಿದೆ...ಪೂರ್ವಾಹ್ನ 10:00 ರಿಂದ 10:15 ರವರೆಗೆ ಹರಿಹರ ಪಳ್ಳತ್ತಡ್ಕ ಗ್ರಾಮ...
ಸುಬ್ರಹ್ಮಣ್ಯ ಸೆಪ್ಟೆಂಬರ್ 22 : ಸುಬ್ರಹ್ಮಣ್ಯ ಕಾಶಿಕಟ್ಟೆ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಮಕ್ಕಳು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಪ್ರಾತ್ಯಕ್ಷತೆ ಹಾಗೂ ಅಪೌಷ್ಟಿಕತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡುತ್ತಾ "ಇಂದಿನ ದಿನಗಳಲ್ಲಿ ಪುಟಾಣಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಿ...
ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.23 ರಂದು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಇಲಾಖೆಯ ಸಹಯೋಗದೊಂದಿಗೆ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಹಾಗೂ ರಿನಿವಲ್ ಮಾಡುವ ಕ್ಯಾಂಪ್ ನಡೆಯಿತು.ತಾಲೂಕು ಪಂಚಾಯತ್ ನ ವಿಕಲಚೇತನರ ಇಲಾಖೆಯ ಎಂ.ಆರ್.ಡಬ್ಲ್ಯೂ ಚಂದ್ರಶೇಖರ, ನಗರ ಪಂಚಾಯತ್ ವಿಕಲಚೇತನರ ಇಲಾಖೆಯ ಯು.ಆರ್.ಡಬ್ಲ್ಯೂ ಪ್ರವೀಣ್ ನಾಯಕ್ ಹಾಗೂ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ...
ವಿದ್ಯಾಭಾರತಿ ಕರ್ನಾಟಕ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆದ ರಾಜ್ಯ ಹಾಗೂ ಕ್ಷೇತ್ರಿಯ ಮಟ್ಟದ ಕಬಡ್ಡಿ ಪಂದ್ಯಾಟದ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ಸದಸ್ಯರಾಗಿ ಉತ್ತಮ ಪ್ರದರ್ಶನವನ್ನು ನೀಡಿ ಬಲಿಷ್ಠ ಬೆಳಗಾವಿ, ತಮಿಳುನಾಡು ತಂಡಗಳನ್ನು ಮಣಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾದ ಜ್ಞಾನದೀಪ ಎಲಿಮಲೆ ಶಾಲೆಯ 10ನೇ ತರಗತಿ...
ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ನವೀನ್ಕುಮಾರ್ ಕೆ ಅವರು ಮಂಡಿಸಿದ ವಾಣಿಜ್ಯ ಶಾಸ್ತ್ರಕ್ಕೆ ಸಂಬಂಧಿಸಿದ "ಫೈನಾನ್ಸಿಯಲ್ ಪರ್ಫಾರ್ಮೆನ್ಸ್ ಅನಾಲಿಸಿಸ್ ಆಫ್ ಸೆಲೆಕ್ಟ್ ಹೆಲ್ತ್ ಇನ್ಸೂರೆನ್ಸ್ ಕಂಪೆನಿಸ್ ಇನ್ ಇಂಡಿಯಾ" ಎಂಬ ಸಂಶೋಧನಾ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಈ ಸಂಶೋಧನೆ ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಈಶ್ವರ...
Loading posts...
All posts loaded
No more posts
