- Friday
- March 13th, 2026
ಕಳಂಜ - ಬಾಳಿಲ ಪ್ರಾ.ಕೃ.ಪತ್ತಿನ ಸಹಕಾರಿ ಸಂಘ ಕೋಟೆಮುಂಡುಗಾರು ಇದರ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಮುಗುಪ್ಪು ಧ್ವಜಾರೋಹಣಗೈದರು.ನಂತರ ಜರುಗಿದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ಳಾರೆ ಆರಕ್ಷಕ ಠಾಣೆಯ ಎಸ್.ಐ. ಶ್ರೀ ಆಂಜನೇಯ ರೆಡ್ಡಿ 'ಕೊರೋನಾ ವಾರಿಯರ್ಸ್' ಗಳಿಗೆ ಅಭಿನಂದನೆ...
ಸುಳ್ಯ ಗೃಹ ರಕ್ಷಕ ದಳ ದ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸುಳ್ಯ ಗೃಹ ರಕ್ಷಕ ದಳ ಕಚೇರಿ ಮುಂಭಾಗದಲ್ಲಿ ನಡೆಯಿತು. ಗೃಹ ರಕ್ಷಕ ದಳ ಯೂನಿಟ್ ಆಫೀಸರ್ ಲ. ಜಯಂತ್ ಶೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿಗಳು ಹಾಜರಿದ್ದರು.
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಯವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.
ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರದಿನಾಚರಣೆಯ ದ್ವಜಾರೋಹಣ ಕಾರ್ಯಕ್ರಮ ವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾವ್ಯ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಮುರುಳ್ಯ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀ ಶ್ರೀಧರ್ ಕೆ ಆರ್ ರವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರ ಗೀತೆಯೊಂದಿಗೆ ಆಚರಣೆಯನ್ನು ಮುಕ್ತಾಯಗೊಳಿಸಲಾಯಿತು. ಈ ಸಂದರ್ಭದಲ್ಲಿಪಂಚಾಯತ್ ನ ಮಾಜಿ ಸದಸ್ಯರು ಶ್ರೀಮತಿ ಯಶೋಧ ಇದುಂಗುಳಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀ ಸೀತಾರಾಮ ಎಸ್ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀ...
ಅಚ್ರಪ್ಪಾಡಿ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್ ಕಡಪಳ ನೆರೆವೇರಿಸಿದರು. ಶಾಲಾ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಬಾಬು ಗೌಡ ಅಚ್ರಪ್ಪಾಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ, ವಿಧ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.ಮಕ್ಕಳಿಗೆ ವಾಟ್ಸಪ್ಪ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ...
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಬೆಳ್ಳಾರೆ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆಯ ವತಿಯಿಂದ ದೇಶದ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ದಾರುಲ್ ಹಿಕ್ಮ ವಠಾರದಲ್ಲಿ ಆಚರಿಸಲಾಯಿತು.ದಾರುಲ್ ಹಿಕ್ಮ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ ಧ್ವಜಾರೋಹಣಗೈದು ದುಆ ನೆರೆವೇರಿಸಿದರು. ಮುಹಮ್ಮದ್ ಶಮೀರ್ ನಈಮಿ ಪೆರುವಾಜೆ ಈ ಮಣ್ಣು ನಮ್ಮದು ಪ್ರಮೇಯ ಭಾಷಣಗೈದರು. ಯೂಸುಫ್ ಮುಸ್ಲಿಯಾರ್ ಬೆಳ್ಳಾರೆ ಆಶಂಸಗೈದರು, ಇರ್ಷಾದ್...
ಬೆಳ್ಳಾರೆ ಝಖರಿಯ್ಯಾ ಜುಮಾ ಮಸ್ಜಿದ್ ಹಿದಾಯತುಲ್ ಇಸ್ಲಾಂ ಮದರಸದ ವತಿಯಿಂದ 74 ನೇ ಸ್ವಾತಂತ್ರೋತ್ಸವ ದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಉಪಾಧ್ಯಕ್ಷ ಯು.ಎಚ್.ಅಬೂಬಕ್ಕರ್ ಧ್ವಜಾರೋಹಣ ನೆರವೇರಿಸಿದರು , ಖತೀಬರಾದ ಯೂನುಸ್ ಸಖಾಫಿ ವಯನಾಡ್ ಸ್ವಾತಂತ್ರೋತ್ಸವ ದ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಜಮಾಅತರು ಉಪಸ್ಥಿತರಿದ್ದರು. ಸಭೆಗೆ ಸದರ್ ಮುಹಮ್ಮದ್ ಮುಸ್ಲಿಯಾರ್ ಸ್ವಾಗತಿಸಿ ಬಶೀರ್ ಕೆ.ಎ ವಂದಿಸಿದರು.
ಸುಳ್ಯದ ಪ್ರತಿಷ್ಠಿತ ಶಾರದ ಸಮೂಹ ವಿದ್ಯಾ ಸಂಸ್ಥೆ ಯಿಂದ 74 ನೇ ಸ್ವಾತಂತ್ರೋತ್ಸವ ಆಚರಣೆ ಇಂದು ನಡೆಯಿತು. ಸಮೂಹ ವಿದ್ಯಾ ಸಂಸ್ಥೆ ಯ ಅಧ್ಯಕ್ಷ ರಾದ ಶ್ರೀ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿದರು. ಕೊರೋನ ಕಾರಣದಿಂದಾಗಿ ಸರಳವಾಗಿ ಕಾರ್ಯಕ್ರಮ ನಡೆಯಿತು.
ಗುತ್ತಿಗಾರು ಪದವಿ- ಪೂರ್ವ ಕಾಲೇಜಿನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜು ಸಿಬಿಸಿ ಕಾರ್ಯದ್ಯಕ್ಷರಾದ ಶ್ರೀ ಮಂಜುನಾಥ ಯು ಧ್ವಜಾರೋಹಣ ನೆರವೇರಿಸಿದರು. ಎಸ್ ಡಿ ಎಂ ಸಿ ಕಾರ್ಯಧ್ಯಕ್ಷರಾದ ಶ್ರೀ ಲೋಕೇಶ್ವರ ಡಿ ಆರ್, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ನೆಲ್ಸನ್ ಕ್ಯಾಸ್ಟಲಿನೊ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಚೆನ್ನಮ್ಮ ಪಿ, ಎಸ್...
Loading posts...
All posts loaded
No more posts
