- Friday
- March 13th, 2026
ಈ ಸಲದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ಇಲ್ಲಿನ ವಿದ್ಯಾರ್ಥಿ ದಿವೀಶ್ ಕಜೆಮೂಲೆ 582 ಅಂಕ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರು ಬಳ್ಪ ಗ್ರಾ. ಪಂ.ಅಭಿವೃದ್ಧಿ ಅಧಿಕಾರಿ ಶ್ರೀ ಚೆನ್ನಪ್ಪ ಗೌಡ ಕಜೆಮೂಲೆ ಹಾಗೂ ಕೋಟೆಮುಂಡುಗಾರು ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಮೋಹಿನಿ ದಂಪತಿಗಳ ಪುತ್ರ.
ಕಡಬ ತಾಲೂಕು ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆ ಆ.14 ರಂದು ದಿನ ನಿಗದಿಯಾಗಿತ್ತು . ಆದರೇ ಕಡಬ ತಾ.ಪಂ. ವ್ಯಾಪ್ತಿಗೆ ಇತ್ತೀಚಿಗೆ ಸೇರ್ಪಡೆಗೊಂಡ ಸುಬ್ರಹ್ಮಣ್ಯ ತಾ.ಪಂ.ಕ್ಷೇತ್ರದ ಸದಸ್ಯ ಅಶೋಕ್ ನೆಕ್ರಾಜೆಯವರ ಪತ್ನಿಗೆ ಕೋವಿಡ್ 19 ಪಾಸಿಟಿವ್ ಧೃಡಪಟ್ಟ ಹಿನ್ನೆಲೆಯಲ್ಲಿ ಕಾರಂಟೈನ್ ಗೊಳಗಾಗಿದ್ದರು. ಅದ್ದರಿಂದ ತನಗೆ ಚುನಾವಣೆ ಯಲ್ಲಿ ಭಾಗವಹಿಸಲು ಅನಾನುಕೂಲವಾಗಿರುವುದರಿಂದ ಚುನಾವಣೆ ಮುಂದೂಡುವಂತೆ ಸಹಾಯಕ...
ಬೆಳ್ಳಾರೆಯಲ್ಲಿ ಇಂದು ನಡೆದ ರಾಂಡಮ್ ಟೆಸ್ಟ್ ವೇಳೆ ಬೆಳ್ಳಾರೆ ಪಿಡಿಓ ಗೆ ಪಾಸಿಟಿವ್ ಧೃಡಪಟ್ಟಿದೆ. ಸ್ಯಾನಿಟೈಸ್ ಮಾಡಲಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ದಿಂದ ಪಂಚಾಯತ್ ಸೀಲ್ ಮಾಡಲಾಗಿದೆ ಎಂದು ನೋಡೆಲ್ ಅಧಿಕಾರಿಗಳು ಪತ್ರಿಕೆ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸಂಘದ ಕಛೇರಿ ಯಲ್ಲಿ ಆ.13ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ದೊಂದಿಗೆ 625/625 ಅಂಕ ಗಳಿಸಿದ ಅನುಷ್ ಎ ಯಲ್ ರವರಿಗೆ ಅಭಿನಂದನಾ ಕಾರ್ಯಕ್ರಮ ಸಂಘದ ಅಧ್ಯಕ್ಷ ರಾದ ಡಾ. ದಾಮೋದರ ನಾರಾಲ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಂಘದ ಕಾರ್ಯದರ್ಶಿ ಕೆ ರಾಮಣ್ಣ ಗೌಡ...
ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿ ಸಿದ್ಧತೆ ನಡೆಯುತ್ತಿದ್ದು , ಧ್ವಜಸ್ತಂಭ ಹಾಗೂ ಸುತ್ತಲಿನ ಆವರಣ ಸ್ವಚ್ಛತಾ ಕಾರ್ಯ ಇಂದು ನಡೆಯಿತು. ಈ ವೇಳೆ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಯವರು ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳ ಜೊತೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ ಮೆಚ್ಚುಗೆಗೆ ಪಾತ್ರರಾದರು. ಮಾಜಿ ಅಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.
ಮಂಗಳೂರು ಮೆಸ್ಕಾಂ ಕಛೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಗುತ್ತಿಗಾರು ಮೆಸ್ಕಾಂ ಶಾಖಾ ಪ್ರಭಾರ ಜೆಇ ಲೋಕೇಶ್ ಎಣ್ಣೆಮಜಲು ರವರ ಪುತ್ರ ಅನುಷ್ ಗೆ ಸನ್ಮಾನ ಕಾರ್ಯಕ್ರಮ ಇಂದು ಮಂಗಳೂರಿನ ಮೆಸ್ಕಾಂ ಕಛೇರಿಯಲ್ಲಿ ನಡೆಯಿತು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ, ಬಿ.ಸಿ.ಟ್ರಸ್ಟ್ ನಾಲ್ಕೂರು ಇದರ ಆಶ್ರಯದಲ್ಲಿ ಚಾರ್ಮಾತ ನೆಲ್ಲಿಪುಣಿಯಲ್ಲಿ ಶ್ರೀ ಚಾಮುಂಡಿ ಪ್ರಗತಿಬಂಧು ಸಂಘ ರಚಿಸಲಾಯಿತು. ನಾಲ್ಕೂರು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ರಾಜೀವಿ ಕುಚ್ಚಾಲ ದೀಪ ಬೆಳಗಿಸಿ ಉದ್ಘಾಟಿಸಿದರು. ವಲಯ ಮೇಲ್ವಿಚಾರಕ ಸುಧೀರ್ ಯೋಜನೆಯ ಕಾರ್ಯಕ್ರಮಗಳ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಶಾಂತಪ್ಪ ಉತ್ರಂಬೆ, ಪದಾಧಿಕಾರಿಗಳಾದ ಕರುಣಾಕರ...
ಶ್ರೀ ಕ್ಷೇ.ಧ.ಗ್ರಾ.ಯೋಜನೆ,ಬಿ.ಸಿ. ಟ್ರಸ್ಟ್ ನಾಲ್ಕೂರು ಇದರ ಆಶ್ರಯದಲ್ಲಿ ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ಶ್ರೀ ಮುತ್ತಪ್ಪನ್ ಪ್ರಗತಿ ಬಂಧು ಸಂಘ ರಚಿಸಲಾಯಿತು. ನಾಲ್ಕೂರು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಮೋಹನ್ ಎರ್ದಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಗುತ್ತಿಗಾರು ವಲಯ ಮೇಲ್ವಿಚಾರಕ ಸುಧೀರ್ ಯೋಜನೆಯ ಕಾರ್ಯಕ್ರಮ ಗಳ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಒಕ್ಕೂಟದ ಉಪಾಧ್ಯಕ್ಷ ವಿಶ್ವನಾಥ್ ಛತ್ರಪ್ಪಾಡಿ...
ಆ. 8 ರಂದು ಪಾಸಿಟಿವ್ ಬಂದ ಮೂವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ಕಾರಂಟೈನ್ ಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ನಿನ್ನೆ ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ನಡೆದ ರಾಂಡಮ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದ್ದು ತಳೂರಿನ ಮನೆಯಲ್ಲೇ ಕಾರಂಟೈನ್ ಮಾಡಲಾಗಿದೆ.ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇಂದು ಕಾಣಿಯೂರಿನ ವ್ಯಕ್ತಿಯೊಬ್ಬರಿಗೆ ಪಾಸಿಟಿವ್...
Loading posts...
All posts loaded
No more posts
