- Sunday
- September 20th, 2026
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಇಂದು ಬೆಳಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಕಲ್ಲಮಾಡದಲ್ಲಿ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಈ ದಿನ ರುದ್ರಚಾಮುಂಡಿ ದೈವದ ನೇಮೋತ್ಸವ, ತದನಂತರ ಗಂಧಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ...
ಬೆಂಗಳೂರಿನ ಶ್ರೀ ಜ್ಞಾನಮಂದಾರ ಶೈಕ್ಷಣಿಕ ಅಕಾಡೆಮಿ ನೀಡಿದ 'ಜ್ಞಾನಮಂದಾರ ಸಮಾಜರತ್ನ' ರಾಜ್ಯ ಪ್ರಶಸ್ತಿಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ಜ. 25 ರಂದು ಮಂಗಳೂರಿನ ಎಸ್ ಸಿ ಡಿ ಸಿ ಸಿ ಬ್ಯಾಂಕಿನಲ್ಲಿ ಪ್ರದಾನಿಸಲಾಯಿತು. ಅಕಾಡೆಮಿಯ ಮಹಾಪೋಷಕ, ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಪ್ರಶಸ್ತಿ ಪ್ರದಾನಗೈದು ಮಾತನಾಡಿ ಡಾ|...
ಉಬರಡ್ಕ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ಜ.27 ರಂದು ಪ್ರಕಟವಾಗಿದೆ. ಅಧ್ಯಕ್ಷತೆಗೆ ಅನುಸೂಚಿತ ಪಂಗಡ ಮಹಿಳೆ ಗೆ ಮೀಸಲಾತಿ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲಿತರಾಗಿ ಗೆಲುವು ಸಾಧಿಸಿದ್ದ ಚಿತ್ರಕುಮಾರಿ ಪಾಲಡ್ಕ ಮಾತ್ರ ಅರ್ಹತೆ ಪಡೆದಿದ್ದಾರೆ. ಉಪಾಧ್ಯಕ್ಷತೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು ಉಳಿದ ಎಲ್ಲಾ ಸದಸ್ಯರು ಅರ್ಹತೆ ಪಡೆಯುತ್ತಾರೆ. ಇಲ್ಲಿ 9 ಸ್ಥಾನಗಳ ಪೈಕಿ ಬಿಜೆಪಿ 6 ರಲ್ಲಿ...
ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷತೆಯ ಸ್ಥಾನಗಳಿಗೆ ಜ.27 ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಮೀಸಲಾತಿ ಪ್ರಕ್ರಿಯೆಯಲ್ಲಿ ಘೋಷಿಸಲಾಗಿದೆ. ಬೆಳ್ಳಾರೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಟಿ, ಪೆರುವಾಜೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಸಿ ಮಹಿಳೆ, ಸಂಪಾಜೆಯಲ್ಲಿ ಹಿಂದುಳಿದ ವರ್ಗ ಎ, ಹಿಂದುಳಿದ...
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಸುಂದರ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಾಯುಸೇನೆಯ ನಿವೃತ್ತ ಸೈನಿಕರು, ಕೊಡುಗೈ ದಾನಿಗಳು, ಶಿಕ್ಷಣ ಪ್ರೇಮಿ, ಎಪಿಎಂಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿ...
ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಸಭೆಯು ಮಂಗಳೂರಿನ ಜನತ ಹೋಟೆಲ್ ನಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು ಅತಿಥಿಗಳಾಗಿ ಶಾಸಕರಾದ ಯು.ಟಿ.ಖಾದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ , ಎನ್ ಎಸ್ ಯು ಐ ಅಧ್ಯಕ್ಷರಾದ ಸವಾದ್ ಸುಳ್ಯ, ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯದರ್ಶಿ ಟಿ....
ಪಿ.ಎಸ್.ಐ. ನೇರ ನೇಮಕಾತಿಯಲ್ಲಿ ಆಯ್ಕೆಗೊಂಡು ತರಬೇತಿ ಮುಗಿಸಿರುವ ನಾಲ್ಕೂರು ಗ್ರಾಮದ ಪ್ರದೀಪ್ ಗೌಡ ಕೊಲ್ಯ ಬೆಂಗಳೂರು ದಕ್ಷಿಣದ ಜೆ.ಪಿ.ನಗರ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ಎಸ್.ಐ. ಆಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.2008 ರಲ್ಲಿ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿ 2014 ರ ತನಕ ಮಂಗಳೂರಿನ ಬಂದರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಮಂಗಳೂರಿನ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿದ್ದರು. 2019...
ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರರು ನೂತನ ಸಚಿವರಾದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅದ್ದೂರಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಜ.25 ರಂದು ಹಮ್ಮಿಕೊಳ್ಳಲಾಗಿತ್ತು. ಜಾತಿ ಧರ್ಮ ಪಕ್ಷ ಭೇದ ಮರೆತು ಎಲ್ಲರೂ ಮಾಡಿದ ಸನ್ಮಾನ ಸ್ವೀಕರಿಸಿ ಅಂದು ರಾತ್ರಿ ಉಡುಪಿ ಪ್ರವಾಸ ಕೈಗೊಂಡಿದ್ದರು. ಜ. 26 ರಂದು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಗಣರಾಜ್ಯೋತ್ಸವ...
ಸ.ಹಿ.ಪ್ರಾ. ಶಾಲೆ ಮಡಪ್ಪಾಡಿಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಾಗೇಶ ಕುಚ್ಚಾಲ ಧ್ವಜಾರೋಹಣಗೈದರು. ಗ್ರಾ.ಪಂ.ನ ಸದಸ್ಯರಾದ ಮಿತ್ರದೇವ ಮಡಪ್ಪಾಡಿ, ಎಚ್.ಬಿ.ಜಯರಾಮ ಹಾಡಿಕಲ್ಲು, ಗುಣವರ್ಧನ ಸಮಿತಿ ಸದಸ್ಯರಾದ ವಸಂತಿ ಕಡಪಳ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ನಾಗವೇಣಿ, ಪುಷ್ಪ, ನವ್ಯ, ಸುದಿನ, ತನುರಾಜ್, ಅಂಗನವಾಡಿ ಕಾರ್ಯಕರ್ತೆ ವಿಮಲ, ವಿದ್ಯಾರ್ಥಿ ವೃಂದ, ಶಿಕ್ಷಕ ವೃಂದ ಹಾಗೂ...
Loading posts...
All posts loaded
No more posts
