- Monday
- March 3rd, 2025
ಪೆರಾಜೆ ದೇವಸ್ಥಾನದಲ್ಲಿ ನಡೆಯಲಿದ್ದ ಕಾರ್ಯಕ್ರಮದ ಅಂಗವಾಗಿ ಅನ್ಯಮತೀಯರಿಗೆ ಶಾಮಿಯಾನ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಘಟನೆ ಇಂದು ವರದಿಯಾಗಿದೆ. ಸುಳ್ಯದ ಸಹನಾ ಶಾಮಿಯಾನ ದವರಿಗೆ ಅವಕಾಶ ನೀಡಿದ್ದಕ್ಕೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಾತಿ ಸೌಂಡ್ಸ್ ನವರಿಗೆ ನೀಡಿದ್ದೇವು ಅವರು ಸಹನಾ ದವರಿಗೆ ಸಬ್ ಕಾಂಟ್ರಾಕ್ಸ್ ನೀಡಿದ್ದಾರೆ ಎಂದು...
ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕು ಕಲ್ಮಕಾರು ಗ್ರಾಮದಿಂದ ವರದಿಯಾಗಿದ್ದು, ಬಾಳೆಬೈಲು ನಿವಾಸಿ ಶ್ರೀಮತಿ ಭಾಗೀರಥಿ ಪಾಂಡಿಗದ್ದೆ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ.ಮಹಿಳೆ ವಿಷ ಸೇವಿಸಿದ್ದು ಗೊತ್ತಾದ ತಕ್ಷಣ ಹರಿಹರ ಪಳ್ಳತ್ತಡ್ಕದ ವೈದ್ಯರಾದ ಡಾ| ಗಿರೀಶ್ ರವರಲ್ಲಿಗೆ ತರಲಾಗಿದ್ದು, ಮಹಿಳೆ ಆದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಬಳಿಕ ಸುಳ್ಯ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಶಾಲಾ ಸಂಸತ್ತು ಅಧಿವೇಶನ ಜ.27ರಂದು ಜರುಗಿತು. ವಿದ್ಯಾರ್ಥಿ ಸರಕಾರದ ಸಭಾಪತಿಯಾದ ಕುಲದೀಪ್ ಜಿ. ಎನ್ ಸಭಾಧ್ಯಕ್ಷತೆಯನ್ನು ವಹಿಸಿ ಸರ್ವರನ್ನು ಸ್ವಾಗತಿಸಿದರು. ಸಂಸದೀಯ ಕಾರ್ಯದರ್ಶಿಯಾದ ಬೃಂದಾ ಗತ ಅಧಿವೇಶನದ ವರದಿಯನ್ನು ಮಂಡಿಸಿ ಅನುಮೋದನೆಯನ್ನು ಪಡೆದರು. ಮುಖ್ಯಮಂತ್ರಿಯಾದ ಜಶ್ಮಿ ಎನ್ . ಸಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಕ್ರೀಡಾಕೂಟದ ಸಾಧನೆಗಳಿಗೆ ಅಭಿನಂದನಾ ಗೊತ್ತುವಳಿಯನ್ನು...

ಒಂದು ಊರಿನಲ್ಲಿ ಒಬ್ಬ ವ್ಯಕ್ತಿಯಿದ್ದ. ಎಲ್ಲರೆದುರು ಅಹಂಕಾರದಿಂದ ಬೀಗುತ್ತಿದ್ದ ಆತ “ನಾನೇ ಎಲ್ಲಾ, ನನ್ನಿಂದಲೇ ಎಲ್ಲಾ” ಎನ್ನುವ ಭ್ರಮೆಯಲ್ಲಿ ಬದುಕುತ್ತಿದ್ದ. ಆದರೆ ಆತನಿಗೇ ಅರಿವಾಗದ ಆತನ ಬದುಕಿನ ಸತ್ಯಗಳು ಹೀಗಿದ್ದವು…“ನಾನು” ಎನ್ನುವ ಅಹಂಕಾರದ ಅಂಧಕಾರದಲ್ಲಿ ಮುಳುಗಿದ್ದ ಆತನಿಗೆ ತಾನೂ ಕೂಡ ಮುಂದೊಮ್ಮೆ ಎಲ್ಲರಂತೆ ಸತ್ತು ಮಣ್ಣು ಸೇರುತ್ತೇನೆ ಎಂಬುವುದು ನೆನಪಾಗಲೇ ಇಲ್ಲ…“ನನ್ನಿಂದಲೇ ಎಲ್ಲಾ” ಎನ್ನುವ ದೊಡ್ಡಸ್ತಿಕೆಯ...

ಭಾರತ್ ಸ್ಕೌಟ್ ಮತ್ತು ಗೈಡ್ಸ್, ರಾಷ್ಟ್ರೀಯ ಸಂಸ್ಥೆ ಮತ್ತು ರಾಜ್ಯ ಸಂಸ್ಥೆ ತಮಿಳುನಾಡು ಇವುಗಳ ಸಹಯೋಗದಲ್ಲಿ ಜ.28 ರಿಂದ ಫೆ.03 ರವರೆಗೆ ತಮಿಳುನಾಡಿನ ಸಿಪ್ ಕಾಟ್ ಇಂಡಸ್ಟ್ರೀಯಲ್ ಪಾರ್ಕ್, ಮುನಪ್ಪರೈ, ತಿರಿಚಿರೆಪಳ್ಳಿ ಎಂಬಲ್ಲಿ 75ನೇ ವರ್ಷಾಚರಣೆ ಅಂಗವಾಗಿ ಸ್ಕೌಟ್ ಗೈಡ್ಸ್ ವಿಶೇಷ ಡೈಮಂಡ್ ಜುಬಿಲಿ ಜಾಂಬೂರಿ ಯನ್ನು ಆಯೋಜಿಸಿದ್ದು, ಈ ಜಾಂಬೂರಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ...

ಸುಳ್ಯ ಸರ್ಕಾರಿ ಆಸ್ಪತ್ರೆ ಯಲ್ಲಿ ಇಂದು ತಾಲೂಕಿನ ವಿಶೇಷ ಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ನಡೆಯಿತು. ತಾಲ್ಲೂಕು ಪಂಚಾಯತ್ ನ ವಿಕಲಚೇತನರ ಇಲಾಖೆಯ ಎಂ ಆರ್ ಡಬ್ಲ್ಯೂ ಚಂದ್ರಶೇಖರ್ ನಗರ ಪಂಚಾಯತ್ ನ ವಿಕಲ ಚೇತನರ ಇಲಾಖೆಯ ಯು ಆರ್ ಡಬ್ಲ್ಯೂ ಪ್ರವೀಣ್ ನಾಯಕ್, ಗ್ರಾಮ ಪಂಚಾಯತ್ ಗಳ ವಿ...

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಇಂದು (ಜ.28) ಚುನಾವಣೆ ನಡೆದಿದ್ದು, ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಚಾರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಪ್ರಸ್ತುತ ಚಂದ್ರ ಕೋಲ್ಚಾರು ರವರು ದ.ಕ.ಜಿಲ್ಲಾ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಡ್ಕಾರುಮನೆ-ಜಾಲ್ಸೂರು ಬಾಳಾಜೆ ಎಂಬಲ್ಲಿ ಜ.26 ರಂದು ಶ್ರೀ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ನಡೆಯಿತು.ಬೆಳಿಗ್ಗೆ ಶ್ರೀ ಗಣಪತಿ ಹವನ ನಡೆದು ಸಂಜೆ ಶ್ರೀ ದೈವಗಳ ಭಂಡಾರ ತೆಗೆಯುವುದು ಹಾಗೂ ಎಣ್ಣೆಬೂಳ್ಯ ನಡೆಯಿತು. ನಂತರ ರಾತ್ರಿ ಅನ್ನಸಂತರ್ಪಣೆ ನಡೆದು ಶ್ರೀ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ನಡೆದು ಪ್ರಸಾದ ವಿತರಣೆಯೊಂದಿಗೆ ನೇಮೋತ್ಸವವು ಸಂಪನ್ನಗೊಂಡಿತು.(ವರದಿ :...

ಸುಳ್ಯ: ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆಯಲ್ಲಿ "ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಬಡತನ ಅಂತ್ಯವಾಗುತ್ತದೆಯೇ? ಹೊಟ್ಟೆ ತುಂಬಿಸುತ್ತದೆಯೇ, ದೇಶಕ್ಕೇನ್ನು ಲಾಭವೆಂದು ಪ್ರಶ್ನಿಸಿದ್ದಾರೆ. ಈ ಹೇಳಿಕೆ ದೇಶದ ನೂರಾರು ಕೋಟಿ ಹಿಂದೂಗಳ ಭಾವನೆಗೆ ಘಾಸಿ ಮಾಡುವಂತ ಹೇಳಿಕೆಯಾಗಿದೆ ಯೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ತಿಳಿಸಿದ್ದಾರೆ.ಮಹಾ ಕುಂಭ ಮೇಳ ಸನಾತನ...

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್ ರೈ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಅಪ್ಸ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರು, ಬೆಳ್ಳಾರೆ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ,...

All posts loaded
No more posts