- Wednesday
- September 16th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ಜಿಲ್ಲಾಧಿಕಾರಿ ನೇಮಕಗೊಳಿಸಿ ಆದೇಶಿಸಿದ್ದರು. ಇಂದು ಶ್ರೀ ಕ್ಷೇತ್ರದಲ್ಲಿ ಅವರಿಗೆ ಅಧಿಕಾರ ಹಸ್ತಾಂತರ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ , ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಪುಷ್ಪಲತಾ, ಕಛೇರಿ ಅಧೀಕ್ಷಕರಾದ ಬಾಲಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಗ್ರಾ.ಪಂ.ವ್ಯಾಪ್ತಿಯ ಏನೆಕಲ್ಲು ಬೂದಿಪಳ್ಳ ಮಧುವನ ಸಂಪರ್ಕಿಸುವ ರಸ್ತೆ 15 ನೇ ಹಣಕಾಸು ಯೋಜನೆಯಲ್ಲಿ ಕಾಂಕ್ರೀಟೀಕರಣ ಗೊಂಡಿದ್ದು ನ.27 ರಂದು ಉದ್ಘಾಟನೆಗೊಂಡಿತು. ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಿಡಿಓ ಮುತ್ತಪ್ಪ ದವಳಗಿ,ಗ್ರಾ.ಪಂ.ಮಾಜಿ ಸದಸ್ಯರಾದ ಹರೀಶ್ ಇಂಜಾಡಿ, ಶ್ರೀಮತಿ ಸುಶೀಲಾ ಆಚಾರ್ಯ, ಶ್ರೀಕೃಷ್ಣ ಕೋಟೆ, ಶ್ರೀಮತಿ ವರಲಕ್ಷ್ಮಿ, ಅರ್ಜುನ್ ಕೋಟೆ, ಸತೀಶ್ ಆಚಾರ್ಯ, ಕು|...
ಮೆಟ್ಟಿನಡ್ಕದ ಶ್ರೀ ದುರ್ಗಾ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ ನ.27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಲಯ ತರಬೇತುದಾರರಾದ ಎನ್ನೆಂಸಿಯ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಆಗಮಿಸಿ ಮಾತನಾಡಿದರು. ನಮ್ಮ ಜೀವನ ಇಂದು ಒತ್ತಡದ ಬದುಕಾಗಿದೆ.ಇದರಿಂದ ಹೊರಬಂದಾಗ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರಲು ಸಾಧ್ಯ ಎಂದರು. ಜ್ಞಾನ...
ತೊಡಿಕಾನ ಕುಂಟುಕಾಡು ರಸ್ತೆಯ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ ನ.27 ರಂದು ತೊಡಿಕಾನ ಹಾಲು ಸೊಸೈಟಿ ಬಳಿ ನಡೆಯಿತು.ಎಪಿಎಂಸಿ ವತಿಯಿಂದ 7.5 ಲಕ್ಷ ಹಾಗೂ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಿಂದ 5 ಲಕ್ಷ ಒಟ್ಟು 12.5 ಲಕ್ಷ ಅನುದಾನದಲ್ಲಿ ರಸ್ತೆಯ ಕಾಂಕ್ರೀಟಿಕರಣ ನಡೆಯಲಿದ್ದು ಶಾಸಕ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ,...
ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಮೇಲಿನ ಉಲ್ಲೇಖದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ...
ಚಿಗುರು ಕ್ರೀಡಾ ಮತ್ತು ಕಲಾ ಯುವಕಮಂಡಲ ಪೆರಾಜೆ ಇವರ ಆಶ್ರಯದಲ್ಲಿ ನಡೆದ ಹುತ್ತರಿ ಮತ್ತು ದೀಪಾವಳಿ ಎಂಬ ವಿಷಯಗಳ ಕುರಿತ ಚಿಗುರು ಅರೆಭಾಷೆ ಕವನ ಸ್ಪರ್ಧೆ 2020ರ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ಬಹುಮಾನ ವನ್ನು ಕುಮಾರಿ ಲಿಖಿತಾ ಗುಡ್ಡೆಮನೆಯವರ "ಹೂ ನರ್ಕುವ ಹಬ್ಬ" ಎಂಬ ಕವನ ಪಡೆದುಕೊಂಡಿದೆ, ದ್ವೀತಿಯ ಮತ್ತು ತೃತೀಯ ಸ್ಥಾನವನ್ನು ಕ್ರಮವಾಗಿ ಮನೋಜ್...
ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ.27 ರಂದು ನಡೆಯಿತು.ಕೊಠಡಿಗಳ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು "ಜನರ ಸಹಕಾರ ಇದ್ದರೆ ಯೋಜನೆ ಸರಿಯಾಸ ರೀತಿಯಲ್ಲಿ ಆಗುತ್ತದೆ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಯೋಚನೆ ಉತ್ತಮ ಹಾಗೂ...
ಕಳಂಜ ಗ್ರಾಮದ ಕೋಟೆಮುಂಡುಗಾರು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ನ.26 ರಂದು ನಡೆಯಿತು. ಸಭೆಯ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ವಿಶ್ವನಾಥ ರೈ ಕಳಂಜ, ಉಪಾಧ್ಯಕ್ಷರಾದ ಸೂರ್ಯನಾರಾಯಣ ಕೋಟೆ, ಕೆ.ಎಂ.ಎಫ್ ನ ವೈದ್ಯರಾದ ಡಾ.ಕೇಶವ ಸುಳ್ಳಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಮೋನಪ್ಪ ಮಣಿಮಜಲು ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಂಘದ ನಿರ್ದೇಶಕರು ಹಾಗೂ ಸದಸ್ಯರು...
ತನ್ನ ವಿಭಿನ್ನ ಬರಹ ಶೈಲಿಯ ಮೂಲಕ ಸಾಹಿತ್ಯ ಲೋಕದ ವಿವಿಧ ಮಜಲುಗಳಲ್ಲಿ ಹೆಜ್ಜೆಯನ್ನಿಡುತ್ತಾ ಧ್ವನಿಸುತ್ತಿರುವ ದಕ್ಷಿಣ ಕನ್ನಡ ,ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಯುವ ಪ್ರತಿಭೆ ಇದೀಗ ಚುಟುಕು ಸಾಹಿತ್ಯದಲ್ಲೂ ತನ್ನ ಬರವಣಿಗೆಗೆ ಸೈ ಎನಿಸಿಕೊಂಡಿದ್ದಾರೆ . ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ ) ಕೇಂದ್ರ ಸಮಿತಿ ಬೆಂಗಳೂರು ವತಿಯಿಂದ ಜಿಲ್ಲಾ ಘಟಕ ಯಾದಗಿರಿಯ...
ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ದ.ಕ. ಜಿಲ್ಲೆಯಿಂದ ಸಂಪಾಜೆ ಸೊಸೈಟಿ ಆಯ್ಕೆ- ಇಂದು ಡಿಸಿಸಿ ಬ್ಯಾಂಕಿನಿಂದ ಸನ್ಮಾನ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು ಇವರು ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಸಹಕಾರಿ ಸಂಘಗಳಿಗೆ ನೀಡುತ್ತಿರುವ ಪ್ರಶಸ್ತಿ ಹಾಗೂ ಗೌರವಧನಕ್ಕೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ದ.ಕ.ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಆಯ್ಕೆಯಾಗಿದೆ.ಡಿಸೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಅಪೆಕ್ಸ್ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸಂಪಾಜೆ ಸಹಕಾರಿ ಸಂಘವನ್ನು...
Loading posts...
All posts loaded
No more posts
