- Saturday
- March 14th, 2026
ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬ್ಬಡ್ಡಿ ಪಂದ್ಯಾಟದಲ್ಲಿ ಗುತ್ತಿಗಾರು ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡವು ರನ್ನರ್ ಆಗಿ ಹೊರಹೊಮ್ಮಿದೆ, ಹಾಗೂ ತಂಡದ ವರ್ಷ.ಕೆ ಇವರು ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರು.
ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಸೆಪ್ಟೆಂಬರ್ 11ರಂದು ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ವಿದ್ಯಾಸಂಸ್ಥೆಯಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ ಅಡ್ಕರ್, 7ನೇ, ಆರ್ಟಿಸ್ಟಿಕ್ ಡಬಲ್ಸ್ ಹಾಗೂ...
ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪೋಷಕರ ಸಭೆಯಲ್ಲಿ ಶಿಕ್ಷಕ ರಕ್ಷಕ ಸಂಘದ ರಚನೆಯಾಯಿತು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀಮತಿ ರೇಖಾ ಉದ್ದಂಪಾಡಿ ಮತ್ತು ಕಾರ್ಯದರ್ಶಿಯಾಗಿ ಶ್ರೀ ಪ್ರಕಾಶ್ ವಿನೋಬನಗರ ಆಯ್ಕೆಯಾದರು.ಶಿಕ್ಷಕ ರಕ್ಷಕ ಸಂಘದ ಸದಸ್ಯರಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ವಿಭಾಗದಿಂದ ಶ್ರೀ ಭವಾನಿ ಕುಮಾರ್, ಶ್ರೀಮತಿ ಸುನೀತ, ಶ್ರೀಮತಿ ಲವಿತ, ಶ್ರೀಮತಿ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.13 ಶನಿವಾರದಂದು ಸಾಮೂಹಿಕ ಶನಿಪೂಜೆ ಹಾಗೂ ಬಲಿವಾಡು ಕೂಟ ಜರುಗಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ವೇಳೆ ಅರೆಭಾಷೆ ಮಾತನಾಡುವವರು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂಬುದಾಗಿ ನಮೂದಿಸಬೇಕು, ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ ಎಂಬುದಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ತಿಳಿಸಿದರು. ಅವರು ಇತ್ತೀಚೆಗೆ ಅಕಾಡೆಮಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯ ಹಾಗೂ ಸೈಂಟ್ ಬ್ರಿಜಿಡ್ಸ್, ಸುಳ್ಯ ಇವುಗಳ ಆಶ್ರಯದಲ್ಲಿ ಸೆ. 10 ರಂದು ಸೈಂಟ್ ಬ್ರಿಜಿಡ್ಸ್, ಸುಳ್ಯ ಇದರ ಕ್ರೀಡಾಂಗಣ ದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯ 14...
ಸೆ.14 ಆದಿತ್ಯವಾರದಂದು ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೊಸೈಟಿ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇವುಗಳ ಸಹಯೋಗದೊಂದಿಗೆ ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಆಧಾರ್ ತಿದ್ದುಪಡಿ ಹಾಗೂ ನೋಂದಣಿ ಕಾರ್ಯಕ್ರಮ ನಡೆಯಲಿದೆ.ಹಾಗೆಯೇ ಸೆ.15 ಮತ್ತು...
ಶಾಲಾ ಶಿಕ್ಷಣ ಇಲಾಖೆ(ಪ.ಪೂ)ಮತ್ತು ಎನ್.ಎಂ.ಪಿ.ಯು ಕಾಲೇಜು ಅರಂತೋಡು ಇವರ ಸಹಯೋಗದಲ್ಲಿ ನಡೆದ ಹುಡುಗರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸರ್ವಾಂಗೀಣ ಆಟಗಾರನಾಗಿ ಪ್ರಥಮ ಕಲಾ ವಿಭಾಗದ ಪ್ರಮೋದ್ ಎಂ.ಯು, ಉತ್ತಮ ಹಿಡಿತಗಾರನಾಗಿ ಪ್ರ.ವಾಣಿಜ್ಯ ವಿಭಾಗದ ಪ್ರೀತಮ್ ಮುಗದೂರ್ ಆಯ್ಕೆಯಾಗಿದ್ದಾರೆ. ಇವರಿಗೆ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ 2025ರ ಬಗ್ಗೆ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಗಾರದ ಸಭೆಯು ಪುತ್ತೂರಿನ ಒಕ್ಕಲಿಗ ಸಭಾಭವನದ ಚುಂಚಶ್ರೀಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು...
ಕಲ್ಮಡ್ಕದ ಯುವಸ್ಪೂರ್ತಿ ಸೇವಾ ಸಂಘದ ವಾರ್ಷಿಕ ಮಹಾಸಭೆ ಹಾಗೂ 2026 -27ನೇ ಸಾಲಿನ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆಯು ಸೆ.05 ರಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಮ ಕೊಳೆಂಜಿಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಕಾರ್ಯ ಚಟುವಟಿಕೆ ಹಾಗೂ ಲೆಕ್ಕ ಪತ್ರ ಮಂಡನೆ ಬಳಿಕ ನೂತನ ಕಾರ್ಯಕಾರಿ ಸಮಿತಿಯ ರಚನೆಯು...
Loading posts...
All posts loaded
No more posts
