- Monday
- September 14th, 2026
ಅಂತರರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಅಂಗವಾಗಿ ಗುತ್ತಿಗಾರು ವಿಪತ್ತು ನಿರ್ವಹಣಾ ಘಟಕದಿಂದ ಇಂದು ಸ್ವಚ್ಚತಾ ಶ್ರಮದಾನ ನಡೆಸಲಾಯಿತು. ಗುತ್ತಿಗಾರು ಸಾರ್ವಜನಿಕ ಶೌಚಾಲಯ ಸಂಪೂರ್ಣವಾಗಿ ಸ್ವಚ್ಚಗೊಳಿಸಿ ಸುತ್ತಲೂ ತುಂಬಿದ್ದ ಕಾಡನ್ನು ತೆಗೆಯಲಾಯಿತು. ಈ ಸಂದರ್ಭದಲ್ಲಿವಿಪತ್ತು ನಿರ್ವಹಣೆ ಘಟಕದ ಸಂಯೋಜಕರಾದ ಅಚ್ಚುತ ಗುತ್ತಿಗಾರು, ಮೇಲ್ವಿಚಾರಕರಾದ ಸುಧೀರ್, ಸತೀಶ್ ಮೂಕಮಲೆ, ಲೋಹಿತ್ ಚೈಪೆ, ಜಯರಾಮ ಪೈಕ, ಮನೋಜ್ ಗುತ್ತಿಗಾರು, ವಸಂತ...
ಸುಳ್ಯ ಪೇಟೆಯ ಎರಡು ಅಂಗಡಿಗಳಿಂದ ಕಳ್ಳತನ ನಡೆದ ಘಟನೆ ಕಳೆದ ರಾತ್ರಿ ನಡೆದಿದೆ. ಎಪಿಎಂಸಿ ಬಳಿಯ ಲೋಕೇಶ್ ಕೆರೆಮೂಲೆ ಹಾಗೂ ಯುವಜನ ಸಂಯುಕ್ತ ಮಂಡಳಿ ಬಳಿಯ ಅಂಗಡಿಗಳಿಂದ ಕಳ್ಳರು ದೋಚಿದ್ದಾರೆ. ಲೋಕೇಶ್ ರವರ ಅಂಗಡಿಯಿಂದ ಕಂಪ್ಯೂಟರ್,ಮೊಬೈಲ್, ಹಣ ಸೇರಿದಂತೆ ಸುಮಾರು 50 ಸಾವಿರ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (13.10.2020 ಮಂಗಳವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 300ಹಳೆ ಅಡಿಕೆ 315 - 375ಡಬಲ್ ಚೋಲ್ 315 - 400 ಹೊಸ ಫಠೋರ 175 - 235ಹಳೆ ಫಠೋರ 220 - 315 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 -...
ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ನಾಡು ಕಂಡ ಪ್ರಸಿದ್ಧ ಕಲಾವಿದ. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ , ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದಿದ್ದಾರೆ. ಅನೇಕ ಕಡೆ ಚಿತ್ರಕಲಾ ಪ್ರದರ್ಶನ ಮಾಡಿದವರು. ಸೋಣಂಗೇರಿಯಲ್ಲಿ ಬಯಲು ಚಿತ್ರಾಲಯ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದರು. ಕಾರವಾರದ ಕಡಲ ತೀರದಲ್ಲಿ ಚಿತ್ರಕಲೆ ಮಾಡಿದ್ದರು. ಲಿವರ್ ಸಮಸ್ಯೆಯಿಂದ...
ಗ್ವಾಲಿಯಾರ್ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಶೇಷ ನಾಣ್ಯವನ್ನು ಹಣಕಾಸು ಸಚಿವಾಲಯ ಮುದ್ರಿಸಿದೆ.
ತೋಟಗಾರಿಕಾ ಇಲಾಖೆ ಸುಳ್ಯ ಇದರ ಆಶ್ರಯದಲ್ಲಿ ಕಳಂಜ ಗ್ರಾಮ ಪಂಚಾಯತಿನ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಮುದಾಯ ಭವನದಲ್ಲಿ 2 ದಿನಗಳ ಜೇನುಕೃಷಿ ತರಬೇತಿ ಕಾರ್ಯಾಗಾರವು ಅ.12 ರಂದು ಉದ್ಘಾಟನೆಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಜೇನು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರ ಕೋಲ್ಚಾರು ದೀಪ ಬೆಳಗಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಜೇನುಕೃಷಿ ತರಬೇತುದಾರರಾಗಿ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೆಲ ಸಚಿವರ ಖಾತೆಗಳನ್ನು ಬದಲಾವಣೆ ಮಾಡಿದ್ದು, ಬಿ.ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದ್ದು, ಡಾ.ಕೆ.ಸುಧಾಕರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಏರಿಕೆ ಹಿನ್ನೆಲೆಯಲ್ಲಿ ವೈಜ್ಞಾನಿಕ ಮಾಹಿತಿಯೊಂದಿಗೆ ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವ ಸಾಮರ್ಥ್ಯವಿದ್ದರೆ ಮಾತ್ರ ಸೋಂಕಿನ ನಿಯಂತ್ರಣ ಮತ್ತು...
ಜಿಲ್ಲಾ ಎಸ್ ವೈ ಎಸ್ (ಸುನ್ನಿ ಯುವ ಜನ ಸಂಘ)ಕಾರ್ಯಕರ್ತರ ಸಮಾವೇಶ ಸುಳ್ಯ ಗಾಂಧಿನಗರ ಸುನ್ನೀ ಮಹಲ್ ಕಛೇರಿಯಲ್ಲಿ ಅ 11 ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ವಾಂಸರಾದ ಎಸ್ ಬಿ ಮುಹಮ್ಮದ್ ದಾರಿಮಿ ಇಂದು ನಾವು ಬಲಿಷ್ಠ ಸಂಘ ಶಕ್ತಿ ಯಾಗುವುದರ ಅನಿವಾರ್ಯತೆ ಯನ್ನು ವಿವರಿಸಿ ಸಮಸ್ಯೆ, ಸವಾಲುಗಳನ್ನು ಎದುರಿಸಲು ಒಗ್ಗಟ್ಟು ಪ್ರಮುಖ ಅಂಶವೆಂದು ಅಭಿಪ್ರಾಯ...
ಕಳೆದ 17 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ 167 ಮೆಸ್ಕಾಂ ಗುತ್ತಿಗೆ ಮೀಟರ್ ರೀಡರ್ ಕೆಲಸಗಾರರನ್ನು ಏಕಾಏಕಿಯಾಗಿ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ಮಂಗಳೂರಿನ ಅ.14 ರಂದು ಪೂರ್ವಾಹ್ನ 11 ಗಂಟೆಗೆ ಬಿಜೈಯಲ್ಲಿರುವ ಮೆಸ್ಕಾಂ ಕಚೇರಿ ಮುಂಭಾಗ ಇಂಟೆಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಟೆಕ್ ಕಾನೂನು ಸಲಹೆಗಾರ ದಿನಕರ...
ಕನಕಮಜಲಿನ ನರಿಯೂರು ಎಂಬಲ್ಲಿ ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಪುತ್ತೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ತಡೆಗೋಡೆಯಂತೆ ನಿರ್ಮಿಸಿದ ಬ್ಯಾರಿಕೇಟ್ ಗೆ ಹೊಡೆದಿದೆ. ಕಾರು ಅಪಘಾತಕ್ಕೀಡಾದ ಸಂದರ್ಭದಲ್ಲಿ ಸ್ವಲ್ಪ ಮಳೆ ಸುರಿಯುತ್ತಿದ್ದು, ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರಿಗೆ...
Loading posts...
All posts loaded
No more posts
