ಇಂದ್ರಾಜೆ : ಸುಮಂಗಲ ಸಂಜೀವಿನಿ ಒಕ್ಕೂಟದಿಂದ ಶ್ರಮದಾನ

ಬಾಳಿಲ ಗ್ರಾಮ ಪಂಚಾಯತ್ ಮಟ್ಟದ ಸುಮಂಗಲ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಇಂದು (ಸೆ.19) ಇಂದ್ರಾಜೆ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು. ಶ್ರಮದಾನದ ಅಂಗವಾಗಿ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ತೆಂಗಿನಗುಂಡಿಗಳನ್ನು ರಚಿಸಲಾಯಿತು.

ಕಬಡ್ಡಿ ಮತ್ತು ವಾಲಿಬಾಲ್ ಎಸೋಸಿಯೇಶನ್ ವತಿಯಿಂದ ಹಾಜಿ ಅಬ್ದುಲ್‌ ಮಲ್ನಾಡ್ ಮತ್ತು ಗುರುದತ್ ರಿಗೆ ಶ್ರದ್ಧಾಂಜಲಿ

ಸುಳ್ಯತಾಲೂಕು ವಾಲಿಬಾಲ್ ಎಸೋಸಿಯೇಶನ್ ಮತ್ತು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವತಿಯಿಂದ ಉದ್ಯಮಿಗಳಾದ ಗುರು ಕೇಬಲ್ ನೆಟ್ ವರ್ಕ್ ಮಾಲಕ,ಕ್ರೀಡಾ ಪ್ರೋತ್ಸಾಹಕರು ಹಾಗೂ ಕ್ರೀಡಾ ಪೋಷಕರಾದ ಗುರುತ್ತದ್ ನಾಯಕ್ ಹಾಗೂ ಮಲ್ನಾಡ್ ಕಾಶ್ಯೂಶ್ ಮಾಲಕ, ಕೊಡುಗೈದಾನಿ, ಕೈಗಾರಿಕೋದ್ಯಮಿ ಹಾಜಿ ಅಬ್ದುಲ್ಲಾ ಮಲ್ನಾಡ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸೆ.19ರಂದು ಕೆವಿಜಿ ಸುಳ್ಯ ಹಬ್ಬ ಸಮಿತಿ...
Ad Widget

ಎಸ್ಸೆಸ್ಸೆಫ್ ಧ್ವಜ ದಿನ : ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರೊಂದಿಗೆ ಸ್ನೇಹ ಸಮ್ಮಿಲನ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಧ್ವಜ ದಿನದ ಅಂಗವಾಗಿ ಸುಳ್ಯ ಡಿವಿಷನ್ ಸಮಿತಿ ವತಿಯಿಂದ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರೊಂದಿಗೆ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸೆಪ್ಟಂಬರ್ 19ರಂದು ನಗರ ಪಂಚಾಯತ್ ಪೌರ ಸಮ್ಮೇಳನ ಸಭಾಂಗಣದಲ್ಲಿ ಜರಗಿತು. ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ನ ವಿವಿಧ ಕ್ಷೇತ್ರಗಳ ಕಾರ್ಯಾಚರಣೆಗಳನ್ನು...

ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಎಸ್.ಅಂಗಾರ ಗುದ್ದಲಿಪೂಜೆ

ಸವಣೂರು ಪುಣ್ಚಪ್ಪಾಡಿ ಹೊಸಗದ್ದೆ ರಸ್ತೆ ಕಾಮಗಾರಿಗೆ ಶಾಸಕ ಶ್ರೀ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು, ಸುಮಾರು ರೂ 80 ಲಕ್ಷ ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ಕು ರಾಜೇಶ್ವರಿ , ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಶ್ರೀಮತಿ...

ಸೇವಾಜೆ : ಸಂಜೀವಿನಿ ಸಂಘದ ಸದಸ್ಯರಿಂದ ಪೌಷ್ಟಿಕಾಹಾರ ಕೈತೋಟ ರಚನೆ

ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ದೇವಚಳ್ಳ ಇದರ ಮೂಲಕ ಸೇವಾಜೆ ಅಂಗನವಾಡಿ ಕೇಂದ್ರದಲ್ಲಿ ಸಂಜೀವಿನಿ ಸಂಘದ ಸದಸ್ಯರಿಂದ ಪೌಷ್ಟಿಕ ಆಹಾರ ಬೆಳೆಗಳ ಕೈತೋಟ ರಚನೆ ಮಾಡಲಾಯಿತು. ಸಂಜೀವಿನಿ ಸಂಘದ ಸದಸ್ಯರಾದ ಭಾರತಿ, ಪ್ರೇಮ, ಗೌರಿ, ಪ್ರಮೀಳಾ, ಗೀತಾ, ಅಂಗನವಾಡಿ ಕಾರ್ಯಕರ್ತೆ ರೇಣುಕಾ ಗುಡ್ಡನಮನೆ, ದೇವಚಳ್ಳ ಗ್ರಾ.ಪಂ.ಕಾರ್ಯದರ್ಶಿ ಗುರುಪ್ರಸಾದ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಜಿಗಾರು : ಶ್ರೀ ಕಾಳಿಕಾಂಬಾ ಮೊಬೈಲ್ಸ್ & ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

ಬೆಳ್ಳಾರೆ ಸಮೀಪದ ಪಂಜಿಗಾರು ಕೆ.ಜೆ.ಬಿಲ್ಡಿಂಗ್ ನಲ್ಲಿ ಶ್ರೀ ಸತೀಶ್ ಪದವು ಮಾಲಕತ್ವದ ಶ್ರೀ ಕಾಳಿಕಾಂಬಾ ಮೊಬೈಲ್ಸ್ & ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸೆ.18 ರಂದು ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ಕಂಪೆನಿಯ ಮೊಬೈಲ್ ರೀಚಾರ್ಜ್ ಮತ್ತು ಟಿ.ವಿ. ರೀಚಾರ್ಜ್ ಲಭ್ಯವಿರಲಿದೆ. ಜೊತೆಗೆ ಅಲ್ಯುಮಿನಿಯಂ ಕಿಟಕಿ, ಫೈಬರ್ ಡೋರ್, ಕಿಚನ್ ವರ್ಕ್ಸ್, ಡಿಸೈನ್ ಡೋರ್ ಹಾಗೂ ಫಾಲ್ಟ್ರೇಶನ್ ಕೆಲಸಗಳನ್ನು ಮಾಡಿಕೊಡಲಾಗುವುದೆಂದು...

ಅತಿವೃಷ್ಟಿ- ಪ್ರವಾಹ ಪೀಡಿತ ಪಟ್ಟಿಯಿಂದ ಸುಳ್ಯವನ್ನು ಕೈಬಿಟ್ಟ ಅಧಿಕಾರಿಗಳ ನಡೆಗೆ ಮಲೆನಾಡು ಹಿತರಕ್ಷಣಾ ವೇದಿಕೆ ಖಂಡನೆ

ರಾಜ್ಯದ ಅತಿವೃಷ್ಟಿ- ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಯಿಂದ ಮಲೆನಾಡು ಪ್ರದೇಶವಾದ ಸುಳ್ಯ ತಾಲೂಕನ್ನು ಕೈಬಿಟ್ಟಿರುವ ಇಲಾಖೆಯ ಅಧಿಕಾರಿಗಳ ನಡೆಯನ್ನ ಮಲೆನಾಡು ಹಿತರಕ್ಷಣಾ ವೇದಿಕೆ ಖಂಡಿಸಿದ್ದು, ಈ ಬಗ್ಗೆ ಸರಕಾರ ಗಮನವಹಿಸದಿದ್ದಲ್ಲಿ ತಾಲೂಕು ಕೇಂದ್ರದ ಎದುರು ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿದೆ. ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಸಹಕಾರಿ ಸಂಘದಲ್ಲಿ ಸೆ.18 ರಂದು ಜರಗಿದ ವೇದಿಕೆಯ ಸಭೆಯಲ್ಲಿ ಈ ನಿರ್ಧಾರ...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೃಷ್ಣ ಬೆಟ್ಟ – ಕಾರ್ಯದರ್ಶಿ ಪದ್ಮನಾಭ ಮುಂಡಕಜೆ

Padmanabha mundakaje Lokesh Guddemane ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಬೆಟ್ಟ, ಗೌರವಾಧ್ಯಕ್ಷರಾಗಿ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡಕಜೆ, ಜತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್...

ಹಿಂದೂ ಜಾಗರಣ ವೇದಿಕೆ ಮಡಪ್ಪಾಡಿ ಘಟಕ ರಚನೆ – ಅಧ್ಯಕ್ಷರಾಗಿ ಹೇಮಕುಮಾರ್ ಹಾಡಿಕಲ್ಲು

ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು, ಗುತ್ತಿಗಾರು ವಲಯದ 'ಮಡಪ್ಪಾಡಿ ಘಟಕ'ವು ಇಂದು ಮಡಪ್ಪಾಡಿಯ 'ಯುವಕ ಮಂಡಲ'ದಲ್ಲಿ ರಾಷ್ಟ್ರಿಯ ಸ್ವಯಂಸೇವಕ ಸಂಘದ ಗುತ್ತಿಗಾರು ಮಂಡಲ ಕಾರ್ಯವಾಹಕರಾದ ಕರುಣಾಕರ ಪಾರೆಪ್ಪಾಡಿ ಇವರ ಸಮ್ಮುಖದಲ್ಲಿ ರಚನೆಗೊಂಡಿತು . ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ಲೋಕಪ್ಪ ಶೀರಡ್ಕ, ಅಧ್ಯಕ್ಷರಾಗಿ ಹೇಮಕುಮಾರ್ ಹಾಡಿಕಲ್ಲು, ಉಪಾಧ್ಯಕ್ಷರಾಗಿ ವೇಣುಗೋಪಾಲ ಶೀರಡ್ಕ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್...

ನೆಟ್ಟಾರು : ಯುವಕ ಆತ್ಮಹತ್ಯೆ

ನೆಟ್ಟಾರು ಗ್ರಾಮದ ಲಕ್ಷ್ಮೀಶ ಕಿನ್ನಿಮಜಲು (34 ವರ್ಷ) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಾರಿನಿಂದ ವರದಿಯಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ (ನಾಗಶ್ರೀ ಆಟೋ) ಇವರು ಬೆಳ್ಳಾರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೆ.18 ರಂದು ಎಂದಿನಂತೆ ತನ್ನ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದು, ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಘಟನೆ ನಿನ್ನೆ ಸಂಜೆ ವರದಿಯಾಗಿದ್ದು...
Loading posts...

All posts loaded

No more posts

error: Content is protected !!