ಸೆ.12 ರಂದು ಕಂದ್ರಪ್ಪಾಡಿಯಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ

ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಇದರ ವತಿಯಿಂದ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.12 ರಂದು ಕಂದ್ರಪ್ಪಾಡಿ ಶಾಲಾ ವಠಾರದಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ತಿಳಿಸಿದ್ದಾರೆ.

ಸುಳ್ಯಕ್ಕೆ ಇಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭೇಟಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಯವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಅವರಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೇಡಿಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನ.ಪಂ.ಸದಸ್ಯ ವಿನಯ ಕುಮಾರ್ ಕಂದಡ್ಕ, ಮಾಜಿ ನ.ಪಂ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಜಿನ್ನಪ್ಪ ಪೂಜಾರಿ, ಸುಧಾಕರ, ಬೂಡು ರಾಧಾಕೃಷ್ಣ...
Ad Widget

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ್ ಮಡಪ್ಪಾಡಿ ಆಯ್ಕೆ

ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾಗಿ ಜಯಂತ್ ಮಡಪ್ಪಾಡಿ ಆಯ್ಕೆಯಾಗಿದ್ದಾರೆ. ಇಂದು ಪುತ್ತೂರಿನ ಸುಭದ್ರ ಸಭಾಭವನದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಬೈಠಕ್ ನಲ್ಲಿ , ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಕಾರಂತ್ ರವರು ಈ ಜವಾಬ್ದಾರಿಯನ್ನು ಘೋಷಣೆ ಮಾಡಿದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಮಾಯಿಪನ ಮನೆಯವರಾದ...

ಸುಳ್ಯ – ಸಂಪಾಜೆ ಫೀಡರ್ ನಲ್ಲಿ ಅಸಮರ್ಪಕ ವಿದ್ಯುತ್ ಕಡಿತ ಸಮಸ್ಯೆ ಪರಿಹರಿಸಲು ಮುಖ್ಯಮಂತ್ರಿಗಳಿಗೆ ಮನವಿ

ಸುಳ್ಯ – ಸಂಪಾಜೆ ಫೀಡರ್ ನಲ್ಲಿ ಅಸಮರ್ಪಕ ವಿದ್ಯುತ್ ಕಡಿತ ಸಮಸ್ಯೆ ಪರಿಹರಿಸಲು ಸಾಮಾಜಿಕ ಕಾರ್ಯಕರ್ತ ಅಶ್ರಫ್ ಗುಂಡಿಯವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸುಳ್ಯ ತಾಲೂಕು ಮೀಸಲು ವಿಧಾನ ಸಭಾ ಕ್ಷೇತ್ರವಾಗಿದ್ದು, ಇದೀಗ ಅಭಿವೃದ್ದಿ ಹೊಂದುತ್ತಾ ಇರುವ ತಾಲೂಕು ಆಗಿದೆ. ಪೂಜ್ಯ ಕುರುಂಜಿ ವೆಂಕಟ್ರಮಣ ಗೌಡರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಿಂದಾಗಿ ಹೆಸರು ವಾಸಿಯಾಗಿದೆ. ಆದರೆ ೧೯೪೭...

ಸೆಪ್ಟೆಂಬರ್ 6 : ತುಳುನಾಡ ಒಕ್ಕೂಟ ಸುಳ್ಯ ಇದರ ಉದ್ಘಾಟನೆ ಹಾಗೂ ಲೋಗೋ ಬಿಡುಗಡೆ

ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಇದರ ನೇತೃತ್ವದಲ್ಲಿ ತುಳುನಾಡ ಒಕ್ಕೂಟ ಸುಳ್ಯ ದ.ಕ ಇದರ ಉದ್ಘಾಟನೆ ಹಾಗೂ ಲೋಗೋ ಬಿಡುಗಡೆ ಕಾರ್ಯಕ್ರಮ ಸುಳ್ಯ ಪರಿವಾರಕಾನ ಸೆ. 6 ರಂದು ಅದಿತ್ಯವಾರ ಸಂಜೆ ಗಂಟೆ 4.30 ಕ್ಕೆ ಗ್ರಾಂಡ್ ಪರಿವಾರ್ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸ್ವಾಗತ ಬಶೀರ್ ಆರ್.ಬಿ. ಅಧ್ಯಕ್ಷರು , ಕಾರುಣ್ಯ...

ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟ್ಟರ್ ಖಾತೆ ಹ್ಯಾಕ್ !

ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಜುಲೈ ತಿಂಗಳಲ್ಲಿ ಅನೇಕ ಗಣ್ಯರ ಟ್ವಿಟರ್​ ಖಾತೆಗಳು ಹ್ಯಾಕ್ ಆಗಿದ್ದವು. ಈ ಪೈಕಿ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯೂ ಒಂದು. ಮೋದಿ ಅವರ ವೆಬ್‌ಸೈಟ್‌ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು...

ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಗಳ ಚಾತುರ್ಮಾಸ್ಯ ಸಮಾಪನ

ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ಅವರ 24 ನೇ ಚಾತುರ್ಮಾಸ್ಯ ಸೆ.2 ರಂದು ಸಮಾಪನ ಗೊಂಡಿತು. ಈ ಹಿನ್ನೆಲೆಯಲ್ಲಿ ನಿನ್ನೆ ದಿನ ದರ್ಪಣ ತೀರ್ಥ ನದಿಯಲ್ಲಿ ಮೃತ್ತಿಕಾ ವಿಸರ್ಜನೆ ನಡೆಯಿತು. ಬಳಿಕ ಶ್ರೀಗಳು ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳುವ ಮೂಲಕ ಸೀಮೋಲ್ಲಂಘನೆ ಮಾಡಿದರು....

ನಿಂತಿಕಲ್ಲು : ಉಚಿತ ಆಯುಷ್ಮಾನ್ ನೋಂದಣಿ ಶಿಬಿರ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ನಿಂತಿಕ್ಕಲ್ ಶಾಖೆಯ ವತಿಯಿಂದ ಉಚಿತ ಆಯುಷ್ಮಾನ್ ನೋಂದಣಿ ಶಿಬಿರ ಎಸ್ ಎಸ್ ಎಫ್ ನಿಂತಿಕ್ಕಲ್ ಶಾಖೆಯ ಅಧ್ಯಕ್ಷರಾದ ಶರೀಫ್ ಅಂಜದಿಯವರ ಅಧ್ಯಕ್ಷತೆಯಲ್ಲಿ ಸಿರಾಜುಲ್ ಉಲೂಂ ಮದರಸ ಕಜೆ ನಿಂತಿಕ್ಕಲ್ ನಲ್ಲಿ ಜರಗಿತು. ಬದ್ರಿಯ ಜುಮಾ ಮಸ್ಜಿದ್ ಖತಿಬರಾದ ಮುಹಮ್ಮದಲಿ ಸಖಾಫಿ ದುವಾಃ ನೆರವೇರಿಸಿ,ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಸ್ತಫ...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(03.09.2020 ಗುರುವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 395ಡಬಲ್ ಚೋಲ್ 300 - 395 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 -...

ಸಂಪಾಜೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವಾ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಸಂಪಾಜೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವಾ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಆ.31 ರಂದು ನಡೆಯಿತು. ಶಂಕುಸ್ಥಾಪನೆಯನ್ನು ಡಿ. ರಾಮಚಂದ್ರ ಆಚಾರ್ಯರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ , ಮುಖ್ಯ ಅತಿಥಿಗಳಾಗಿ ಎನ್.ಎಸ್ . ದೇವಿಪ್ರಸಾದ್ ಮತ್ತು ಮನೆಯವರು , ಸಂಘದ ಪದಾಧಿಕಾರಿಗಳಾದ , ಪಿ.ಎಲ್ , ಆನಂದ ಗೌಡ , ಕೆ.ಆರ್ ಜಗದೀಶ್ ರೈ...
Loading posts...

All posts loaded

No more posts

error: Content is protected !!