Ad Widget

ಮುರುಳ್ಯ : ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಗಳನ್ನು ಮುಚ್ಚಿದ ಗ್ರಾಮಸ್ಥರು – ರಸ್ತೆ ದುರಸ್ತಿಗೆ ನಾಗರಿಕರ ಆಗ್ರಹ

ಮುರುಳ್ಯ ಗ್ರಾಮ ಬೊಬ್ಬೆಕೇರಿ ಸಮೀಪ ಮಂಜೇಶ್ವರ - ಕುಕ್ಕೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗುಂಡಿ ಗಳಿಂದ ಕೂಡಿದ್ದು ಅಪಾಯಕ್ಕೆ ಆಹ್ವಾನಿಸುವಂತಿದೆ. ಈ ಹಿಂದೆ ಗುಂಡಿ ತಪ್ಪಿಸಲು ಹೋಗಿ ಹಲವಾರು ಅಪಘಾತಗಳು ನಡೆದಿವೆ. ಹದಗೆಟ್ಟ ರಸ್ತೆಯನ್ನು ಮುರುಳ್ಯ ಗ್ರಾಮ ಯುವಕರು ಕಲ್ಲು ಮಣ್ಣು ಹಾಕಿ ಮುಚ್ಚಿದ್ದಾರೆ. ಈ ದುರಸ್ಥಿ ಕಾರ್ಯಕ್ಕೆ ಇಬ್ರಾಹಿಂ ಕಲೀಲ್ ಹುದೇರಿ, ಮುಸ್ತಫಾ....

ಪಂಜ : ಚಂದ್ರಗ್ರಹಣದ ಹಿನ್ನೆಲೆ ದೇವಸ್ಥಾನಲ್ಲಿ ಸೆ.07 ರಂದು ಪೂಜಾ ಸಮಯದಲ್ಲಿ ಬದಲಾವಣೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಸೆ. 7 ಆದಿತ್ಯವಾರ ಚಂದ್ರಗ್ರಹಣ ಪ್ರಯುಕ್ತ ಮಧ್ಯಾಹ್ನ 12ಗಂಟೆಗೆ ಮಹಾಪೂಜೆಯು ನಡೆಯಲಿದ್ದು, ಅಂದು ರಾತ್ರಿ ಪೂಜೆಯು ಸಂಜೆ 5.00ಕ್ಕೆ ನಡೆಯಲಿದೆ. ಸಂಜೆ 5.00 ರ ನoತರ ಶ್ರೀ ದೇವರ ದರ್ಶನ ಇರುವುದಿಲ್ಲ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್  ಪ್ರಕಟಣೆಯಲ್ಲಿ ತಿಳಿಸಿರುತಾರೆ.‌
Ad Widget

“ಶಿಷ್ಯರ ನಡೆ ಗುರುವಿನ ಕಡೆ” ಶಿಕ್ಷಕರ ದಿನಾಚರಣೆಯ ವಿಶೇಷ ಕಾರ್ಯಕ್ರಮದ ಅಂಗವಾಗಿ ಪ್ರೊ. ನಿಂಗೇ ಗೌಡರಿಗೆ ಸನ್ಮಾನ – ಸುಳ್ಯದ ಸೌಹಾರ್ದತೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು : ಪೇರಾಲ್

ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನದ ಹಿನ್ನಲೆಯಲ್ಲಿ ಆಚರಿಸುವ ಶಿಕ್ಷಕರ ದಿನಾಚರಣೆಯಂದು ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಗಳ 4 ನೇ ವರ್ಷದ ಶಿಷ್ಯರ ನಡೆ ಗುರುಗಳ ಕಡೆ ಕಾರ್ಯಕ್ರಮದ ಅಂಗವಾಗಿ ಎನ್ನೆoಸಿ ಯಲ್ಲಿ ರಾಜಕೀಯ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಯಿಂದ ನಿವೃತ್ತರಾದ ನಿಂಗೇ ಗೌಡರ...

ಅಡ್ತಲೆ : ಕೆ.ವಿ.ಜಿ ಪಾಲಿಟೆಕ್ನಿಕ್ ನ  ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ – ಬಿ.ಎಸ್.ಎಫ್ ಗೆ  ಆಯ್ಕೆಯಾದ ಕು‌.ಸುಶ್ಮಿತಾ ಅವರಿಗೆ ಸನ್ಮಾನ

ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ದಿನದ ಶಿಬಿರ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ, ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಆಶ್ರಯದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಇವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ ಇಂದು ಅಡ್ತಲೆ...

ಬೆಳ್ಳಾರೆ : ಸಡಗರ ಸಂಭ್ರಮದ ಈದ್ ಮೀಲಾದ್ ಆಚರಣೆ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಅಧೀನದಲ್ಲಿರುವ ಬಹ್ಜತು ತುಲಬಾ ದರ್ಸೀನ ವಿದ್ಯಾರ್ಥಿಗಳು, ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದರಸ, ಹಿದಾಯ ಅರೆಬಿಕ್ ಮದರಸಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಿವಿಧ ಸ್ಪರ್ಧೆಗಳು, ಅನ್ನದಾನ, ಬಹುಮಾನ ವಿತರಣೆ, ದಫ್ , ಸ್ಕೌಟ್ ಪ್ರದರ್ಶನ ಅತ್ಯಾಕರ್ಷಕ ಮೆರವಣಿಗೆ, ಮೌಲೀದ್ ಪಾರಾಯಣ ಹಾಗೂ ಭೋಜನಕೂಟದೊಂದಿಗೆ 3 ದಿನಗಳ ದ ಅಲ್ ಮವಾಹಿಬ್ ಟ್ಯಾಲೆಂಟ್...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿವೃತ್ತ ಹಿರಿಯ ಶಿಕ್ಷಕ, ಸಾಹಿತಿ, ಕಲಾವಿದರಿಗೆ ಸನ್ಮಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಳೆದೆರಡು ವರ್ಷಗಳಿಂದ ಶಿಕ್ಷಕರ ದಿನಾಚರಣೆಯಂದು ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡು ನಿವೃತ್ತರಾದ ಹಿರಿಯ ಶಿಕ್ಷಕರನ್ನು ಗುರುತಿಸಿ ಗೌರವಿಸುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಇಂದು ಸೆ.5 ರಂದು ಇಬ್ಬರು ಹಿರಿಯ ನಿವೃತ್ತ ಶಿಕ್ಷಕ ಸಾಹಿತಿ ಕಲಾವಿದರನ್ನು ಅವರ ನಿವಾಸದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.ಪೂರ್ವಾಹ್ನ 8.30ಗಂಟೆಗೆ ಜಿಜ್ಞಾಸು ಎಂಬ ಕಾವ್ಯ...

ಅರಂತೋಡು : ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ – ಶಿಕ್ಷಕರಿಗೆ ಸನ್ಮಾನ

ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಸೆ.05 ರಂದು ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್‌ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ಚೊಕ್ಕಾಡಿ ದಿಕ್ಕೂಚಿ ಭಾಷಣ ಮಾಡಿದರು....

ಮಲೆನಾಡು ಚಾರಿಟೇಬಲ್‌ ಟ್ರಸ್ಟ್ ನಿಂದ ಸುಳ್ಯದ ಐವರು ಶಿಕ್ಷಕರಿಗೆ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿ

ಸುಳ್ಯದ ಮಲೆನಾಡು ಚಾರಿಟೇಬಲ್‌ ಟ್ರಸ್ಟ್  ಪ್ರತಿ ವರ್ಷದಂತೆ ಈ ಬಾರಿ ಕೂಡ “ಮಲೆನಾಡು ಸಿರಿ” ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯದ 5 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದೆ. ಈ 'ಮಲೆನಾಡ ಸಿರಿ' ಶಿಕ್ಷಕ ಪ್ರಶಸ್ತಿ 2025 ಪ್ರದಾನ ಸಮಾರಂಭ ಸೆ.06 ರಂದು ನಡೆಯಲಿದೆ.ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್...

ಪಂಜ : ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಶಾರದೋತ್ಸವ ಸಮಿತಿ -2025 ಇದರ ವತಿಯಿಂದ ಪಂಜ ಪರಿಸರದ ನಾಡ ಹಬ್ಬ 16ನೇ ವರುಷದ ಶಾರದೋತ್ಸವ ಅ.1 ರಂದು ವಿಜೃಂಭಣೆಯಿಂದ ಜರುಗಲಿದೆ.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.4 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.ಶಾರದೋತ್ಸವ ಸಮಿತಿ ಪೂರ್ವಾಧ್ಯಕ್ಷ ಕೆ.ಕೃಷ್ಣ ವೈಲಾಯ ಆಮಂತ್ರಣ ಪತ್ರಿಕೆ...

ರವಿ ಕಕ್ಕೆಪದವು ರವರ ಪುತ್ರ ಗಣೇಶ್ ಕಕ್ಕೆಪದವು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ; ರಾಜ್ಯ ಮಟ್ಟಕ್ಕೆ ಆಯ್ಕೆ

ಸುಬ್ರಹ್ಮಣ್ಯದ ರವಿ ಕಕ್ಕೆಪದವು ಹಾಗೂ ಶ್ರೀಮತಿ ಗೀತಾ ರವಿ ಕಕ್ಕೆಪದವು ದಂಪತಿಗಳ ಪುತ್ರ ಗಣೇಶ್ ಕಕ್ಕೆಪದವು ರವರು ಪದವಿಪೂರ್ವ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸುರತ್ಕಲ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜನ್ನು ಪ್ರತಿನಿಧಿಸಿದ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.(ವರದಿ : ಉಲ್ಲಾಸ್...
Loading posts...

All posts loaded

No more posts

error: Content is protected !!