ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.ದ್ವಜಾರೋಹಣವನ್ನು ಹಿರಿಯ ಸಂಚಾರ ನಿಯಂತ್ರಕರಾದ ಗಂಗಾಧರ ಮಾವಂಜಿ ಮಂಡೆಕೋಲು ನೆರವೇರಿಸಿದರು.ದ್ವಜಾರೋಹಣ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರಾದ ಸುಂದರರಾಜ್, ಭದ್ರತಾಧಿಕಾರಿ ಶಿವಕುಮಾರ್, ಸಹಾಯಕ ಸಂಚಾರ ನಿರೀಕ್ಷಕರಾದ ಕರುಣಾಕರ ಕರ್ಲಪ್ಪಾಡಿ, ಹರಿಶ್ಚಂದ್ರ ಮೇಲಡ್ತಲೆ, ಜಗದೀಶ, ಪ್ರವೀಣ್ ರಾಯಣ್ಣ ಗೌಡ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಯನಗರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶ್ರಮದಾನ

ಜಯನಗರ 19 ನೇ ವಾರ್ಡಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ಥಳೀಯ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ವಿಕ್ರಮ ಯುವಕ ಮಂಡಲದ ಸದಸ್ಯರುಗಳು ರಸ್ತೆಗಳಲ್ಲಿ ಇರುವ ಗುಂಡಿಗಳಿಗೆ ಮಣ್ಣು ಹಾಕಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ನ ಪಂ ಸದಸ್ಯೆ ಶಿಲ್ಪ ಸುದೇವ್ ಹಾಗೂ ಸುಮಾರು 20ಕ್ಕೂ ಹೆಚ್ಚು ಯುವಕರು ಭಾಗವಹಿಸಿದ್ದರು.
Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಕೊವಿಡ್-19ರ ಕಾರಣ ಸರಳವಾಗಿ ಆಚರಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ಧ್ವಜರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಭಾಗವಹಿಸಿ ದ್ದರು. ಅಕಾಡೆಮಿ...

ಕಲ್ಮಡ್ಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸ.ಉ.ಹಿ.ಪ್ರಾ.ಶಾಲೆ ಕಲ್ಮಡ್ಕದಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಶಶಿಕಲಾ ಕೆ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಹಶಿಕ್ಷಕಿಯರಾದ ವಜ್ರಾಕ್ಷಿ ಹಾಗೂ ವನಜಾಕ್ಷಿ ಉಪಸ್ಥಿತರಿದ್ದರು.

ಪೆರುವಾಜೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಸ.ಹಿ.ಪ್ರಾ.ಶಾಲೆ ಪೆರುವಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ.ಸಿ ಸದಸ್ಯ ದಿವಾಕರ ಗೌಡ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಪೆರುವಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀ ಜಯಪ್ರಕಾಶ್ ಹಾಗೂ ಸಿಬ್ಬಂದಿ ವರ್ಗ, ಪೆರುವಾಜೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಿಜಯ, ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು,ಅಕ್ಷರ - ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಲಲಿತ ಕುಮಾರಿ ಸ್ವಾಗತಿಸಿ, ವಂದನಾರ್ಪಣೆಗೈದರು. ಈ...

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಹವಾಲ್ದಾರ್ ಶ್ರೀ ಸೋಮಶೇಖರ್ ಧ್ವಜಾರೋಹಣಗೈದು, ಪ್ರಸ್ತುತ ಸನ್ನಿವೇಶದಲ್ಲಿ ಸ್ವಾತಂತ್ರ್ಯದ ಪ್ರಾಮುಖ್ಯತೆ ಹಾಗೂ ಆಚರಣೆಯ ಅಗತ್ಯತೆ ಬಗ್ಗೆ ತಿಳಿಸಿದರು. ಕೊರೋನಾ ಸಂಕಟಕಾಲದಲ್ಲಿ ಸರಳ ರೀತಿಯಲ್ಲಿ ಆಚರಿಸಲ್ಪಟ್ಟ ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ...

ಗ್ರೀನ್ ವ್ಯೂ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗ್ರೀನ್ ವ್ಯೂ ಆಂಗ್ಲಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೊರೋನಾ ಕೋವಿಡ್ _-19ನಡುವೆ ಸರಳವಾಗಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಐ.ಇಸ್ಮಾಯಿಲ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಮೋಹಿದೀನ್, ಪ್ರಧಾನ ಕಾರ್ಯದರ್ಶಿ ಕೆಪಿ ಇಬ್ರಾಹಿಂ ಉಪಸ್ಥಿತರಿದ್ದರು ಮಂಜುನಾಥ ಎಂ.ಜಿ‌ ಸ್ವಾಗತಿಸಿ, ಶಿಕ್ಷಕಿ ಜಯಂತಿ ವಂದಿಸಿದರು.ಶಿಕ್ಷಕಿ ಪ್ರತಿಭಾ ಎಸ್ ಆಳ್ವ ಕಾರ್ಯಕ್ರಮಕ್ಕೆ...

ಪಾಪ್ಯುಲರ್ ಫ್ರಂಟ್ ಸುಳ್ಯ ವಲಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕ್ರೀಡಾ ಸಮ್ಮಿಲನ ಕಾರ್ಯಕ್ರಮ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ವಲಯ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವನ್ನು ಆ.15ರಂದು ಗ್ರೀನ್ ಶಾಲಾ ಮೈದಾನ ದಲ್ಲಿ ಹಮ್ಮಿಕೊಳ್ಳಲಾಯಿತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ಡಿವಿಶನ್ ಅಧ್ಯಕ್ಷ ಫೈಝಲ್ ಬೆಳ್ಳಾರೆ ಸಂದೇಶ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಪಿಎಫ್ಐ ಸುಳ್ಯ ವಲಯಾದ್ಯಕ್ಷರಾದ ರಝಾಕ್ ಪೈಚಾರ್,ಕಾರ್ಯದರ್ಶಿ ಶಿಹಾಬ್ ಸುಳ್ಯ ಮತ್ತು...

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಇಂದು ನಡೆಯಿತು. ಗ್ರಾ.ಪಂ.ಪಿಡಿಓ ಜಯಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಜತ್ತಪ್ಪ ಗೌಡ ಉಗ್ರಾಣಿಮನೆ, ರವಿ ಕಣೆಮರಡ್ಕ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. "ಗಂದಗಿ ಮುಕ್ತ ಭಾರತ" ಅಭಿಯಾನದಡಿ ಗಿಡ ನೆಟ್ಟು, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ನಡೆದ 74 ನೇ ಸ್ವಾತಂತ್ರ್ಯ ದಿನಾಚರಣೆಯಂದು ಆಡಳಿತಾಧಿಕಾರಿ ನಿರಂಜನ ಚಿದಾನಂದ ಹಿರೇಮಠ್ ಧ್ವಜಾರೋಹಣಗೈದು ಶುಭಹಾರೈಸಿದರು. ಈ ಸಂದರ್ಭದಲ್ಲಿ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಧ್ವಜಸ್ತಂಭದ ದಾನಿಗಳಾದ ಶಾರದೋತ್ಸವ ಸಮಿತಿ ಅಧ್ಯಕ್ಷ ರೋಹಿತ್, ಬಾಳಿಲದ ನಾಗರಿಕ ಸೇವಾ ಸಮಿತಿಯ ಗಂಗಾಧರ, ಪಂಚಾಯತ್ ಪೂರ್ವಾಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ ಜಯಶೀಲಾ ರೈ, ಪಂಚಾಯತ್...
Loading posts...

All posts loaded

No more posts

error: Content is protected !!