- Wednesday
- September 9th, 2026
ಜುಲೈ 14 ರಂದು ಪುತ್ತೂರು ಕಾವು ನಿಂದ ಸುಳ್ಯಕ್ಕೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಪಡೆದ ಬಜರಂಗದಳದ ಯುವಕರು ಕನಕಮಜಲಿನಲ್ಲಿ ಕಾದು ಕುಳಿತು ಬೆನ್ನಟ್ಟಿ ಹಿಡಿಯಲು ಪ್ರಯತ್ನಿಸಿ ನಂತರ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಕಾರ್ಯಾಚರಣೆಯಲ್ಲಿ ಬಾರಿ ಸಾಹಸಮಯ ರೀತಿಯಲ್ಲಿ ಪಿಕಪ್ ವಾಹನವನ್ನು ಹಾಗೂ ದನಸಾಗಾಟ ದಲ್ಲಿ ಭಾಗಿಯಾದ ವ್ಯಕ್ತಿಯನ್ನು...
ಕಾರವಾರ: ಕೆಲವು ಗಿಡ, ಮರಗಳು ಪ್ರಾಣಿಯ ರಕ್ತ ಹೀರುತ್ತವೆ, ಕೀಟಗಳನ್ನು ತಿನ್ನುತ್ತವೆ ಎನ್ನುವುದನ್ನು ಕೇಳಿರಬಹುದು. ಈ ಸುದ್ದಿ ನಿಜ ಎನ್ನುವಂತೆ ಸಾವಿರಾರು ವರ್ಷಗಳಿಂದ ತನ್ನ ಮಡಿಲಿನಲ್ಲಿ ಅಪರೂಪದ ವನಸಿರಿಯನ್ನು ಹೊತ್ತು ನಿಂತಿರುವ ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಸಮೀಪದ ಹನ್ನೊಲ್ಲಿಯಲ್ಲಿ ಒಂದು ಅಚ್ಚರಿಯ ಘಟನೆ ನಡೆದಿದೆ. ಕಾಡಿನಲ್ಲಿ...
ಬಳ್ಪ ಮೀಸಲು ಅರಣ್ಯ ಪ್ರದೇಶದಿಂದ ಮರ ಕಡಿದ ಆರೋಪದಲ್ಲಿ ಮನೋಜ್ ಮಾಣಿಬೈಲು ಎಂಬುವರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಏನೆಕಲ್ಲು ಗ್ರಾಮದ ಮಾಣಿಬೈಲು ಸಮೀಪದ ಮೀಸಲು ಅರಣ್ಯ ದಿಂದ ಒಣಗಿದ ಸಾಗುವಾನಿ ಮರ ಕಡಿದು ಸಾಗಿದ್ದಾರೆಂಬ ಮಾಹಿತಿ ಪಡೆದ ಪಂಜ ಅರಣ್ಯ ಇಲಾಖೆಯವರು ರೇಂಜರ್ ಗಿರೀಶ್ ಆರ್ . , ಬಳ್ಪ...
ಬೊಳುಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಜು.17 ರಂದು ನಡೆದಿದೆ. ಪರಿಣಾಮ ಪಿಕಪ್ ಜಖಂ ಗೊಂಡಿದ್ದು ವಿದ್ಯುತ್ ಕಂಬ ಮುರಿದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಪೇರಾಲಿನ ವಕ್ರತುಂಡ ಪಿಕಪ್ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಪೂರ್ತಿ ಲಾಕ್ ಡೌನ್ ಇರಲಿದೆ. ಪ್ರತಿ ದಿನ ಬೆಳಿಗ್ಗೆ 8 ರಿಂದ 11 ಗಂಟೆಯ ಲಾಕ್ ಡೌನ್ ರಿಯಾಯಿತಿ ನಾಳೆ ಇರುವುದಿಲ್ಲ. ನಾಳೆ ಕಟ್ಟುನಿಟ್ಟಿನ ಲಾಕ್ಡೌನ್ ಹೇರಿರುವ ಡಿಸಿ, ಲಾಕ್ಡೌನ್ ನಿಯಮಗಳನ್ನು ಮೀರಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಡಕ್...
ಸುಳ್ಯ ಓಡಬಾಯಿ ಬಳಿ ಅಗ್ನಿಶಾಮಕ ಠಾಣೆ ಮುಂಭಾಗದಲ್ಲಿ ಸುಳ್ಯ ಕಡೆಯಿಂದ ಪುತ್ತೂರಿಗೆ ಚಲಿಸುತ್ತಿದ್ದ ಅಲ್ಟೋ ಕಾರ್ ಡ್ರೈವರ್ ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಆಗಿದೆ. ಡಿಕ್ಕಿಯ ರಭಸಕ್ಕೆ ಕಾರು ರೋಡಿನಲ್ಲಿ ಮಗುಚಿ ಬಿದ್ದು ಕಾರಿನಲ್ಲಿದ್ದ ಒಬ್ಬ ಮಹಿಳೆಯ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ , ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ....
ಜು.14ರಂದು ಸುಳ್ಯದಲ್ಲಿ ಅಕ್ರಮ ದನ ಸಾಗಾಟ ಪ್ರಕರಣದಲ್ಲಿ ಬಂಧಿತನಾದ ಕರಿಕೆಯ ಅಬ್ದುಲ್ ಫಾರೂಕ್ ಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಪೋಲೀಸ್ ಠಾಣೆ ಎರಡು ಸೀಲ್ ಡೌನ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆರೋಪಿ ಬಂಧಿಸುವ ವೇಳೆ ಕರ್ತವ್ಯ ದಲ್ಲಿದ್ದ ಎಸ್.ಐ. ಹರೀಶ್ ಸೇರಿದಂತೆ ಮೂವರು ಪೋಲೀಸ್ ಸಿಬ್ಬಂದಿಗಳು ಹೋಂ ಕ್ವಾರೆಂಟೇನ್ ಗೆ ಈಗಾಗಲೇ ತೆರಳಿದ್ದಾರೆ....
ಸರಕಾರವು ಲಾಕ್ ಡೌನ್ ನಿಯಮ ಜಾರಿಗೆ ತಂದಿರುವುದು ಒಳ್ಳೆಯದಾಗಿದೆ . ಆದರೆ ಈ ನಿಯಮ ಸರಿಯಾಗಿ ಜಾರಿಯಾಗುತ್ತಿದೆಯೇ ಎಂಬುದು ಬಹುದೊಡ್ಡ ಪ್ರಶ್ನೆಯಾಗಿದೆ . ಖಂಡಿತವಾಗಿಯೂ ತಾಲೂಕು ಆಡಳಿತ , ಮಾನ್ಯ ಶಾಸಕರು ಲಾಕ್ ಡೌನ್ ನಿಯಮ ಪಾಲಿಸುವಲ್ಲಿ ತೆಗೆದುಕೊಂಡಿರುವ ಕ್ರಮ ಯಶಸ್ವಿಯಾಗಿಲ್ಲ . ತಾಲೂಕಿನ ಪ್ರತಿಷ್ಠಿತ ಕಾರ್ಖಾನೆಗಳು ತನ್ನ ರಾಜಕೀಯ ಪ್ರಭಾವ ಬಳಸಿ ಬೆಳಿಗ್ಗೆಯಿಂದ ಸಂಜೆ...
ಕೊರೊನ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ಸರ್ಕಾರಿ ರಜೆ ಘೋಷಿಸಿರುವುದರಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ನಾಳೆ ರಜೆ ಇರಲಿದೆ. ಗ್ರಾಮ ಪಂಚಾಯತ್, ಕಂದಾಯ ಇಲಾಖೆ, ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು ರಜೆ ಇದ್ದು, ಸರಕಾರಿ ಕಾರ್ಯಗಳು ಸೋಮವಾರ ಮುಂದುವರಿಯಲಿವೆ. ಕೊರೊನ ಲಾಕ್ ಡೌನ್ ಮತ್ತು ಅಗತ್ಯ ಸೇವೆಗಳು ಎಂದಿನಂತೆ ಮುಂದುವರಿಯಲಿವೆ.
ಜು.14 ರಂದು ಸುಳ್ಯದಲ್ಲಿ ಬಾರಿ ಸಾಹಸಮಯ ರೀತಿಯಲ್ಲಿ ಅಕ್ರಮ ದನ ಸಾಗಾಟ ಪ್ರಕರಣದಲ್ಲಿ ಬಂಧಿತನಾದ ಕರಿಕೆಯ ಅಬ್ದುಲ್ ಫಾರೂಕ್ ಗೆ ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆಯಲ್ಲಿ ಸುಳ್ಯ ಪೋಲೀಸ್ ಠಾಣೆ ಜುಲೈ 18ರಿಂದಸೀಲ್ ಡೌನ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಎಸ್.ಐ. ಹರೀಶ್ ಸೇರಿದಂತೆ ಆರೋಪಿಯ ಬಂಧನದಲ್ಲಿ ತೊಡಗಿಸಿಕೊಂಡ ಮೂವರು ಪೋಲೀಸ್...
Loading posts...
All posts loaded
No more posts
