- Sunday
- September 6th, 2026
ಸುಬ್ರಹ್ಮಣ್ಯ : "ಭಗವದ್ಗೀತೆಯು ಜೀವನ ಮೌಲ್ಯಗಳ ಸಾರವನ್ನು ಹೊಂದಿದೆ. ಭಗವದ್ಗೀತೆಯ ಸಂದೇಶವು ಮನುಷ್ಯನ ಜೀವನಕ್ಕೆ ದಾರಿದೀಪವಾಗಿದೆ. ಗೀತೆಯನ್ನು ಓದಿ ಅರ್ಥೈಸಿಕೊಂಡು ಅವುಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳ ಆಚರಣೆಗಳು ಶಾಂತಿ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ನಡೆಯಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಾನೂನು ಮತ್ತು ಶಿಸ್ತನ್ನು ಪಾಲಿಸುವ...
ಸುಳ್ಯ ತಾಲೂಕಿನ ಕಲ್ಮಕಾರು ಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ-ಸ್ವದೇಶಿ ಆಂದೋಲನದ ಭಾಗವಾಗಿ ಆ.22ರಂದು ಕ್ರಾಫ್ಟ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕರಿಕೆಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ದಿವ್ಯಾ, ಕುಶಾಲಪ್ಪ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಮಾಜೀ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಟಿ.ಯನ್ ಹಾಗೂ ಯುವ ವಕೀಲರಾದ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಪ್ರೋತ್ಸಾಹಕ ಪ್ರಶಸ್ತಿ ದೊರಕಿದೆ.ಸಂಘದ ಸರ್ವತೋಮುಖ ಪ್ರಗತಿಯ ಸಾಧನೆಗಾಗಿ ಆ.22ರಂದು ನಡೆದ ಡಿ.ಸಿ.ಸಿ ಬ್ಯಾಂಕ್ನ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ಹಾಗೂ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನಗಳ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್...
ಗೂನಡ್ಕ: ಸಂಪಾಜೆ ಗ್ರಾಮದ ಬೈಲೆ ಬಸಳೆ ಭಾಗದಲ್ಲಿ ರಸ್ತೆ ಅಭಿವೃದ್ಧಿ ಆಗದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರಕ್ಕೆ ತೀರ್ಮಾನಿಸಿದ್ದ ನಿವಾಸಿಗಳನ್ನು ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ ಮಾಡಿ ಸಮಸ್ಯೆ ಆಲಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಶಾಹಿದ್ ತೆಕ್ಕಿಲ್ ಅವರು ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ರಸ್ತೆ ಪರಿಸ್ಥಿತಿಯನ್ನು ಪರಿಶೀಲಿಸಿದರು....
ಸುಳ್ಯ ರಥಬೀದಿಯ ಅಝಾದ್ ಟವರ್ ನ ಮೊದಲ ಮಹಡಿಯಲ್ಲಿ ಎಫ್ 3 ಕ್ಲಬ್ ಶೂಗಳ ಮಳಿಗೆ ಆ. 20ರಂದು ಶುಭಾರಂಭಗೊಂಡಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಎಸ್. ಅಂಗಾರ ರವರು ಮಳಿಗೆಯನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಹಿರಿಯ ಉದ್ಯಮಿ, ಚಿಂತಕ ಎಂ.ಬಿ. ಸದಾಶಿವ ರವರು ವಹಿಸಿದ್ದರ. ವೇದಿಕೆಯಲ್ಲಿ ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ...
ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ ಇಲ್ಲಿನ ಭೌತ ಶಾಸ್ತ್ರ ಉಪನ್ಯಾಸಕ ಮತ್ತು ಎನ್.ಡಿ.ಎ ಸಂಯೋಜಕ ಜೋಷ್ಟಮ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ...
ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ವತಿಯಿಂದ ನಡೆದ Kambala solution Private Limited ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಎಂ.ಬಿ.ಎ ವಿಭಾಗದ ವಿದ್ಯಾರ್ಥಿ ಪೂಜಾ ಬಿ.ಆರ್., ಸಚಿನ್ ಪಿ. ಮತ್ತು ಸ್ವಸ್ತಿ ಜಿ. ರೈ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ.3.5 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.), ಕಮಿಟಿ...
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸುಳ್ಯ ಇದರ ಸಹಯೋಗದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ವಲಯ ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ...
ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ವತಿಯಿಂದ ನಡೆದ ಪಿಯು ವಿಭಾಗದ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.ಸೆಮಿ ಕ್ಲಾಸಿಕಲ್ ನೃತ್ಯ(ಪ್ರ), ಸ್ಪಿಲಿಟ್ ಸ್ಕ್ರೀನ್(ಪ್ರ), ಮಾಡ್ ಆಡ್(ದ್ವಿ) ಬಹುಮಾನ ಟ್ರೋಫಿ, ನಗದು ಒಳಗೊಂಡಿದೆ. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಆಡಳಿತಾಧಿಕಾರಿ, ಬೋಧಕ ಬೋಧಕೇತರ ವೃಂದದವರು...
Loading posts...
All posts loaded
No more posts
