- Sunday
- September 6th, 2026
ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ವತಿಯಿಂದ ನಡೆದ ಪಿಯು ವಿಭಾಗದ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.ಸೆಮಿ ಕ್ಲಾಸಿಕಲ್ ನೃತ್ಯ(ಪ್ರ), ಸ್ಪಿಲಿಟ್ ಸ್ಕ್ರೀನ್(ಪ್ರ), ಮಾಡ್ ಆಡ್(ದ್ವಿ) ಬಹುಮಾನ ಟ್ರೋಫಿ, ನಗದು ಒಳಗೊಂಡಿದೆ. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಆಡಳಿತಾಧಿಕಾರಿ, ಬೋಧಕ ಬೋಧಕೇತರ ವೃಂದದವರು...
ಜಾನಕಿ ವೆಂಕಟ್ರಮಣ ಗೌಡ ಅವರ 14ನೇ ಪುಣ್ಯ ಸ್ಮರಣೆಯ ಕರ್ಯಕ್ರಮ ಆ. 22ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಶ್ರೀಧರ ಕೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯರ್ಥಿಗಳು ಈ...
ಸುಳ್ಯ: ಪವಿತ್ರ ಕ್ಷೇತ್ರಗಳಲ್ಲಿರುವ ಸಾವಿರಾರು ಕೋಟಿ ರೂಪಾಯಿ ಹಣ ಇನ್ನೂ ಖಜಾನೆಯಲ್ಲಿದೆ. ವಾಲ್ಮೀಕಿ ನಿಗಮದ ಹಣವನ್ನು ಲೂಟಿ ಮಾಡುವ ಮೂಲಕ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಶಾಂತಿ ಸೃಷ್ಟಿಸುವ ಕಾರ್ಯವನ್ನು ಮಾಡಬಾರದು ಎಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಸಚಿವ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 22 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಂಗಳೂರು : "ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್...
01)ಮೇಷ ರಾಶಿ : ಕೆಲವರಿಗೆ ಪೂರ್ವಿಕರ ಆಸ್ತಿಯ ಲಾಭ ದೊರೆಯಬಹುದು. ವಾಹನ ಬಳಸುವಾಗ ಜಾಗರೂಕರಾಗಿರಿ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಕೆಲವು ವ್ಯವಹಾರಗಳಲ್ಲಿ ಇದ್ದಕ್ಕಿದ್ದಂತೆ ನಿರ್ಧಾರಗಳನ್ನು ಬದಲಾಗುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ... ಗಮನಿಸಿ : ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪರಿಹಾರ : ಶನಿ ನಮಸ್ಕಾರ ಮಾಡಿ. 02)ವೃಷಭ ರಾಶಿ : ಕೈಗೆತ್ತಿಕೊಂಡ ಕಾರ್ಯಗಳು ಸುಗಮವಾಗಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನೀಡಲಾಗಿದ್ದ ರಜೆಗಳನ್ನು ಸರಿದೂಗಿಸುವ ಸಲುವಾಗಿ ಸೆಪ್ಟೆಂಬರ್ ತಿಂಗಳ ಎರಡನೇ ಶನಿವಾರ(ಸೆ.12)ದಿಂದ ಮದ್ಯಾಹ್ನ ನಂತರ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಭಾರೀ ಮಳೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ, ಮಂಗಳೂರು...
ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪದ್ಮಯ್ಯ ರವರು ಹೃದಯಾಘಾತದಿಂದ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ತೇಜಾವತಿ, ಪುತ್ರಿ ಸರಿತಾ ರಾಮಕೃಷ್ಣ, ಪುತ್ರರಾದ ವಿನಯ, ಸುಮಿತ್ರ, ಅಳಿಯ, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ವತಿಯಿಂದ ಮಂಗಳೂರಿನ ಮಂಗಳಾ ಹಾಸ್ಪಿಟಲ್ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಸಹಯೋಗದಲ್ಲಿ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿ,ವಿದ್ಯಾರ್ಥಿನಿಗಳಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ 22ರಂದು ಬೆಳಿಗ್ಗೆ 8-30ಕ್ಕೆ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲಿನಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
"ರೋಗ ಬಂದಮೇಲೆ ಅದಕ್ಕೆ ಔಷಧಿ ತಗೊಳ್ಳೋದಕ್ಕಿಂತ ಮುಂಚೆ ರೋಗ ಬರದೆ ಹಾಗೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯ. ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವುದರೊಂದಿಗೆ ಸಮೀಪದ ಶಾಲಾ ಕಾಲೇಜುಗಳು ಹಾಗೂ ಸಂಘ ಸಂಸ್ಥೆಗಳಿಗೆ ಆರೋಗ್ಯ ಶಿಕ್ಷಣ ಮಾಹಿತಿ ಕೂಡ ನೀಡಬೇಕು. ಈ ನಿಟ್ಟಿನಲ್ಲಿ ನುರಿತ,ಅನುಭವಿ ವೈದ್ಯರಾದ ಡಾ. ಗಾನಶ್ರೀ ಅವರ ಸ್ವಸ್ತಿಯ ಆರೋಗ್ಯ...
Loading posts...
All posts loaded
No more posts
