- Saturday
- March 14th, 2026
ಮಡಪ್ಪಾಡಿ ಗ್ರಾಮದ ಪೂಂಬಾಡಿಯಲ್ಲಿ ಒಂಟಿ ಸಲಗವೊಂದು ದಾಳಿ ನಡೆಸಿ ಕೃಷಿ ಹಾಗೂ ವಾಹನಕ್ಕೆ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಪೂಂಬಾಡಿ ಗಣಪಯ್ಯ ಗೌಡರವರ ತೋಟಕ್ಕೆ ರಾತ್ರಿ ವೇಳೆಗೆ ದಾಳಿ ಮಾಡಿದ ಒಂಟಿ ಸಲಗ 10ಹೆಚ್ಚು ತೆಂಗಿನ ಮರ, ಅಪಾರ ಬಾಳೆ ಗಿಡ ನಾಶ ಮಾಡಿದೆ. ತೋಟದ ದಾರಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೂ ಹಾನಿ ಮಾಡಿದೆ. ಪೂಂಬಾಡಿ...
ತೀವ್ರ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಒಟ್ಟು 13 ವಾರ್ಡ್ ಗಳ ಪೈಕಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಬಿಜೆಪಿಯು 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.ಮತ ಎಣಿಕೆ ಕೇಂದ್ರದಲ್ಲಿ ನಡೆದ ಎಣಿಕೆ ಪ್ರಕ್ರಿಯೆಯು ಬಿಗಿ ಪೊಲೀಸ್ ಬಂದೋಬಸ್ ನಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿತು....
ತೌಹೀದ್ ಎಜುಕೇಶನಲ್ ಹಾಗೂ ಕಲ್ಚರಲ್ ಟ್ರಸ್ಟ್ ಸಂಪಾಜೆ ಇದರ ಅಧಿನದಲ್ಲಿ ಕಾರ್ಯನಿರ್ವಹಿಸುತ್ತಿವ ಮದ್ರಸತುಲ್ ಇಸ್ಲಾಹ್ ಮದ್ರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ ಆಗಸ್ಟ್ 19ರಂದು ಸಂಜೆ 5.30 ರಿಂದ ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಮಸೀದಿ ಸಂಪಾಜೆ ವಠಾರದಲ್ಲಿ ನಡೆಯಿತು ಶಾಝಿಲ್ ರವರ...
ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.27 ಮತ್ತು 28 ರಂದು ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಆ.27 ರಂದು ನಡೆಯುವ ಹಿಂದು ಬಾಂಧವರ ಮುಕ್ತ ವಾಲಿಬಾಲ್ ಪಂದ್ಯಾಟ, ಆ. 28 ರಂದು ನಡೆಯುವ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ಆಮಂತ್ರಣ ವಿತರಣೆ, ಶೋಭಾಯಾತ್ರೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ...
ಗ್ರಾಮ ಪಂಚಾಯತ್ ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಆಗಸ್ಟ್ 19 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಕ್ರಮ ಮತ್ತು ಆಟಿದ ಕೂಟ ಜರಗಿತು....
ಕರ್ನಾಟಕ ರಾಜ್ಯ ಈಜು ಚಾಂಪಿಯನ್ ಶಿಪ್ ನ 14 ವರ್ಷ ಒಳಗಿನ ಬಾಲಕಿಯರ ವಿಭಾಗದಲ್ಲಿ ಲಾಸ್ಯ ಕಿಶನ್ ದೇರಪ್ಪಜ್ಜನಮನೆ ಕಂಚಿನ ಪದಕ ಗಳಿಸಿದ್ದಾರೆ. ಈಕೆ ಗುತ್ತಿಗಾರು ಗ್ರಾಮದ ಕಿಶನ್ ದೇರಪ್ಪಜ್ಜನಮನೆ ಮತ್ತು ಡೀನಾ ಕಿಶನ್ ದಂಪತಿಯ ಪುತ್ರಿ, ನೆಹರುನಗರದ ವಿವೇಕಾನಂದ ಸಿಬಿಎಸ್ಇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆಯಾದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವತಿಯಿಂದ 79ನೇ ಸ್ವಾತಂತ್ರೋತ್ಸವವನ್ನು ಸುಳ್ಯದ ದ. ಕ. ಜಿ. ಪಂ.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಾಗಪಟ್ಟಣದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಮಕ್ಕಳೊಂದಿಗೆ ಆಚರಿಸಲಾಯಿತು .ಸುಳ್ಯ ವಲಯದ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ...
ಸುಳ್ಯದ ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್(ರಿ.) (ಎನ್.ಎಸ್.ಎಸ್. ಹಿರಿಯ ಸ್ವಯಂ ಸೇವಕರ ಸಂಘ ಕೆ.ವಿ.ಜಿ ಪಾಲಿಟೆಕ್ನಿಕ್ ಸುಳ್ಯ) ಇದರ ವತಿಯಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸಂಘದ ಪ್ರಥಮ ತೈಮಾಸಿಕ ಸಭೆಯನ್ನು ಅರಂಬೂರಿನ “ವಿಕಸನ” ಮನೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರು, ಕೆ.ವಿ.ಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದಬಾಲಕೃಷ್ಣ ಗೌಡ ಬೊಳ್ಳೂರು, ಗೌರವ ಸಲಹೆಗಾರರುಗಳಾದ ಕೆ.ವಿ.ಜಿ...
ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಬೆಳ್ಳಾರೆ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಆ.15 ರಂದು ಸಮವಸ್ತ್ರವನ್ನು ವಿತರಿಸಲಾಯಿತು.ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ.ಕೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ.ಎಲ್ ರೈ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ರೋಟರಿ ಕ್ಲಬ್ ಪೂರ್ವಾಧ್ಯಕ್ಷರುಗಳಾದ ಶಶಿಧರ್ ಬಿ ಕೆ, ರವೀಂದ್ರ ಗೌಡ, ಚಂದ್ರಶೇಖರ ರೈ...
ಐವರ್ನಾಡಿನ ಎನ್.ಎಸ್.ಸೌಂಡ್ಸ್ & ಲೈಟಿಂಗ್ಸ್, ಶಾಮಿಯಾನದ ಮಾಲಕ ಸುನಿಲ್ ನಿಡ್ಡಾಜೆಯವರ ಪಿಕಪ್ ಆ.11 ರಂದು ತನ್ನ ಅಂಗಡಿ ಎದುರು ನಿಲ್ಲಿಸಿದ್ದರು. ಅಂದು ರಾತ್ರಿ ಪಿಕಪ್ ಕಾಣೆಯಾಗಿತ್ತು. ಈ ಬಗ್ಗೆ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಮುಖ್ಯ ರಸ್ತೆಯಲ್ಲಿರುವ ಸಿ.ಸಿ.ಕೆಮರಾಗಳನ್ನು ಪರಿಶೀಲಿಸಿದ್ದರು. ಇಂದು ಕಾರ್ಕಳ ತಾಲೂಕಿನ ಮುಡೂರು ಎಂಬಲ್ಲಿ ಪಿಕಪ್...
Loading posts...
All posts loaded
No more posts
